ತುಮಕೂರು | ನಾಟಕಗಳು ನಮ್ಮ ಸಂಸ್ಕೃತಿಯ ಕೊಂಡಿ: ರಂಗ ನಿರ್ದೇಶಕ ರಾಜಪ್ಪ ದಳವಾಯಿ

Date:

Advertisements

ನಾಟಕಗಳು ಸಂಸ್ಕೃತಿಯ ಕೊಂಡಿ. ಕನ್ನಡ ರಂಗಭೂಮಿಯ ಇತಿಹಾಸದಲ್ಲಿ ಗುಬ್ಬಿ ಕಂಪನಿಯ ಕೊಡುಗೆ ಅವಿಸ್ಮರಣೀಯ. ರಂಗ ದಿಗ್ಗಜರನ್ನು ತಯಾರು ಮಾಡುವ ವಿಶ್ವವಿದ್ಯಾಲಯ ಎಂದೆನಿಸಿದೆ. ಆದ್ದರಿಂದಲೇ ಇಂದಿಗೂ ಜನಮಾಸದಲ್ಲಿ ಉಳಿದುಕೊಳ್ಳಲು ಸಾಧ್ಯವಾಗಿದೆ ಎಂದು ಸಾಹಿತಿ, ಹಿರಿಯ ರಂಗನಿರ್ದೇಶಕ ಹಾಗೂ ಪ್ರಾಧ್ಯಾಪಕ ರಾಜಪ್ಪದಳವಾಯಿ ತಿಳಿಸಿದರು.

ತುಮಕೂರು ಜಿಲ್ಲೆಯ ಗುಬ್ಬಿ ಪಟ್ಟಣದ ಗುಬ್ಬಿ ವೀರಣ್ಣ ರಂಗಮಂದಿರದಲ್ಲಿ ಗುಬ್ಬಿ ವೀರಣ್ಣ ಟ್ರಸ್ಟ್‌ನ ದಶಮಾನೋತ್ಸವ ಅಂಗವಾಗಿ ನಡೆದ ಜೀವಿತ ನಾಟಕೋತ್ಸವ ಹಾಗೂ ಹಿರಿಯ ರಂಗಕರ್ಮಿ ಈ ಸಾಲಿನ ಗುಬ್ಬಿ ವೀರಣ್ಣ ಪ್ರಶಸ್ತಿ ಪುರಸ್ಕೃತ, ಲೇಖಕ, ರಂಗ ನಿರ್ದೇಶಕ ಗುಬ್ಬಿ ಚನ್ನಬಸಯ್ಯ ಅವರಿಗೆ ಅಭಿನಂದನಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

“ವೀರಣ್ಣನವರಿಂದಾಗಿಯೇ ವಿಶ್ವ ರಂಗಭೂಮಿಯಲ್ಲಿ ಗುಬ್ಬಿಯು ಪ್ರಖ್ಯಾತಿಯನ್ನು ಗಳಿಸಲು ಸಾಧ್ಯವಾಗಿದೆ. ವೀರಣ್ಣನವರು ಕಂಪನಿಯನ್ನು ಕಟ್ಟಿ ಕೇವಲ ನಾಟಕ ಪ್ರದರ್ಶನಕ್ಕೆ ಸೀಮಿತರಾಗದೆ, ಶ್ರೇಷ್ಠ ಕಲಾವಿದರನ್ನು ಈ ನಾಡಿಗೆ ಪರಿಚಯಿಸಿದರು” ಎಂದರು.

Advertisements

“ಗುಬ್ಬಿ ಕಂಪನಿಯಲ್ಲಿ ಬಳಸುತ್ತಿದ್ದ ಪರಿಕರಗಳನ್ನು ಸಂಗ್ರಹಿಸಿ ವಸ್ತುಸಂಗ್ರಹಾಲಯವನ್ನಾಗಿಸಿದರೆ ಇಂದಿನ ಪೀಳಿಗೆಗೆ ಅನುಕೂಲವಾಗುವುದು. ರಂಗ ಚಟುವಟಿಕೆಗಳು ನಿರಂತರವಾಗಿದ್ದಾಗ ಮಾತ್ರ ಜನರಲ್ಲಿ ಆಸಕ್ತಿ ಮೂಡಿಸಲು ಸಾಧ್ಯವಾಗುತ್ತದೆ. ಆದ್ದರಿಂದ ಟ್ರಸ್ಟ್‌ನವರು
ವಾರಕ್ಕೊಮ್ಮೆಯಾದರೂ ನಾಟಕ ಪ್ರದರ್ಶನ ಆಯೋಜಿಸುವುದು ಉತ್ತಮ” ಎಂದು ಸಲಹೆ ನೀಡಿದರು.

ಟ್ರಸ್ಟಿ ಲಕ್ಷ್ಮಣದಾಸ್ ಮಾತನಾಡಿ, “ಕೋವಿಡ್ ಕಾರಣದಿಂದ ಹಿಂದಿನ ವರ್ಷಗಳಲ್ಲಿ ರಂಗ
ಚಟುವಟಿಕೆಗಳು ಹಿನ್ನಡೆಗೊಂಡಿದ್ದವು. ಇನ್ಮುಂದೆ ಟ್ರಸ್ಟ್ ವತಿಯಿಂದ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ನಿಟ್ಟಿನಲ್ಲಿ ಹೊಸ ಯೋಜನೆಗಳನ್ನು ರೂಪಿಸುತ್ತಿದೆ. ಮುಂದಿನ ದಿನಗಳಲ್ಲಿ ನಿರಂತರವಾಗಿ ಕಾರ್ಯಕ್ರಮಗಳನ್ನು ಅಯೋಜನೆ ಮಾಡುವ ಮೂಲಕ ರಂಗಭೂಮಿಗೆ ಹೊಸ ಚೈತನ್ಯವನ್ನು ನೀಡುವ ಕೆಲಸ ಮಾಡುತ್ತೇವೆ” ಎಂದು ಹೇಳಿದರು.

ರಂಗಕರ್ಮಿ ಚನ್ನಬಸಯ್ಯ ಅಭಿನಂದನೆ ಸ್ವೀಕರಿಸಿ ಮಾತನಾಡಿ, “ಆಧುನಿಕತೆ ಬೆಳೆದಂತೆ ನಾಟಕಗಳ ಬಗ್ಗೆ ಆಸಕ್ತಿ ಕಡಿಮೆಯಾಗುತ್ತಿರುವುದು ದುರಾದೃಷ್ಟಕರ. ಈ ಹಿಂದೆ ನಾಟಕ ಕಂಪನಿಯವರೇ ಊರುಗಳಿಗೆ ತೆರಳಿ ಪ್ರದರ್ಶನ ನೀಡುತ್ತಿದ್ದು, ಜನರಿಂದ ಉತ್ತಮ ಸ್ಪಂದನೆ ದೊರೆಯುತ್ತಿತ್ತು. ಆದರೆ ಇಂದು ಅವೆಲ್ಲವೂ ಕೇವಲ ನೆನಪುಗಳಾಗಿವೆ. ಈ ನಿಟ್ಟಿನಲ್ಲಿ ರಂಗಕಲೆಯನ್ನು ಉಳಿಸಿ ಬೆಳೆಸುವ ಕೆಲಸವನ್ನು ಎಲ್ಲರೂ ಒಗ್ಗೂಡಿ ಮಾಡಬೇಕಿದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ತುಮಕೂರು | ಫೆ.26ರಿಂದ ಸಿದ್ಧಗಂಗಾ ಮಠದಲ್ಲಿ ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನ

ಕಾರ್ಯಕ್ರಮದಲ್ಲಿ ಕರ್ನಾಟಕ ಗ್ರಾಮೀಣ ಬ್ಯಾಂಕ್ ವ್ಯವಸ್ಥಾಪಕ ಚಕ್ರಪಾಣಿ, ಕನ್ನಡ ಸಂಸ್ಕೃತಿ ಇಲಾಖೆಯ ನಿರ್ದೇಶಕ ರವಿಕುಮಾರ್, ಜೀವಿತ ನಾಟಕೋತ್ಸವದ ಸಂಚಾಲಕ ರಂಗಯ್ಯ, ಗುಬ್ಬಿ ವೀರಣ್ಣ ಟ್ರಸ್ಟ್‌ನ ಡಾ ರಾಜೇಶ್, ಗುಬ್ಬಿ ರಂಗಾಸಕ್ತರು ಭಾಗವಹಿಸಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ಕ್ಕಾಗಿ ಜಗಳ: ಮಹಿಳೆಯ ವಿಡಿಯೋ ಮಾಡಿ ತೇಜೋವಧೆಗೆ ಯತ್ನ!

ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ' ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ...

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

Download Eedina App Android / iOS

X