ಗುಜರಾತ್ | ಭಾರತದ ಅತಿ ಉದ್ದದ ಸೇತುವೆ ‘ಸುದರ್ಶನ್ ಸೇತು’ ಉದ್ಘಾಟಿಸಿದ ಪ್ರಧಾನಿ ಮೋದಿ

Date:

Advertisements

ಗುಜರಾತ್‌ನ ದ್ವಾರಕಾ ಜಿಲ್ಲೆಯ ಬೇಟ್ ದ್ವಾರಕಾ ದ್ವೀಪದಿಂದ ಓಖಾ ಪ್ರದೇಶಕ್ಕೆ ಸಂಪರ್ಕಿಸುವ, ಅರಬ್ಬಿ ಸಮುದ್ರದ ಮೇಲೆ ನಿರ್ಮಿಸಲಾಗಿರುವ ಕೇಬಲ್-ಸ್ಟೇಯ್ಡ್‌ ಸೇತುವೆ ‘ಸುದರ್ಶನ್ ಸೇತು’ವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ್ದಾರೆ. ಈ ಸೇತುವೆ 2.32 ಕಿ.ಮೀ ಉದ್ದವಿದ್ದು, ದೇಶದ ಅತಿ ಉದ್ದದ ಸೇತುವೆಯಾಗಿದೆ.

2.32 ಕಿಮೀ ಉದ್ದದ ಸೇತುವೆ, 900 ಮೀಟರ್ ಕೇಂದ್ರ ಡಬಲ್ ಸ್ಪ್ಯಾನ್ ಕೇಬಲ್-ಸ್ಟೇಯ್ಡ್‌ ಭಾಗ ಮತ್ತು 2.45 ಕಿಮೀ ಉದ್ದದ ಅಪ್ರೋಚ್ ರಸ್ತೆಯನ್ನು 979 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

ನಾಲ್ಕು ಪಥದ 27.20 ಮೀಟರ್ ಅಗಲದ ಸೇತುವೆಯು ಪ್ರತಿ ಬದಿಯಲ್ಲಿ 2.50 ಮೀಟರ್ ಅಗಲದ ಪಾದಚಾರಿ ಮಾರ್ಗವನ್ನು ಹೊಂದಿದೆ ಎಂದು ಪ್ರಕಟಣೆಯಲ್ಲಿ ಹೇಳಲಾಗಿದೆ.

Advertisements

‘ಸಿಗ್ನೇಚರ್ ಸೇತುವೆ’ ಎಂದು ಕರೆಯಲಾಗುತ್ತಿದ್ದ ಸೇತುವೆಯನ್ನು ‘ಸುದರ್ಶನ ಸೇತು’ ಎಂದು ಮರುನಾಮಕರಣ ಮಾಡಲಾಗಿದೆ.

ಬೇಟ್ ದ್ವಾರಕಾ ಓಖಾ ಪ್ರದೇಶವು ಸಣ್ಣ ದ್ವೀಪವಾಗಿದ್ದು, ಇದು ದ್ವಾರಕಾ ಪಟ್ಟಣದಿಂದ ಸುಮಾರು 30 ಕಿ.ಮೀ ದೂರದಲ್ಲಿದೆ. ಅಲ್ಲಿ ಶ್ರೀಕೃಷ್ಣನ ಪ್ರಸಿದ್ಧ ದ್ವಾರಕಾಧೀಶ್ ದೇವಾಲಯವಿದೆ.

ಪ್ರಸ್ತುತ, ಬೇಟ್ ದ್ವಾರಕಾದಲ್ಲಿರುವ ದೇವಾಲಯಕ್ಕೆ ಭೇಟಿ ನೀಡುವ ಭಕ್ತರು ಹಗಲಿನಲ್ಲಿ ಮಾತ್ರ ದೋಣಿಯಲ್ಲಿ ಪ್ರಯಾಣಿಸಬಹುದಿತ್ತು. ಸೇತುವೆಯ ನಿರ್ಮಾಣದಿಂದಾಗಿ, ಈಗ ಎಲ್ಲ ಸಮಯದಲ್ಲೂ ಪ್ರಯಾಣಿಸಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X