2000 ಕೋಟಿ ರೂ. ಮೊತ್ತದ ಅಂತಾರಾಷ್ಟ್ರೀಯ ಮಟ್ಟದ ಡ್ರಗ್ ಜಾಲ ಪತ್ತೆ: ತಮಿಳು ನಿರ್ಮಾಪಕ ಜಾಲದ ಪ್ರಮುಖ ರೂವಾರಿ

Date:

Advertisements

ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೊ (ಎನ್‌ಸಿಬಿ) ಹಾಗೂ ದೆಹಲಿ ವಿಶೇಷ ಪೊಲೀಸ್ ಜಂಟಿ ಕಾರ್ಯಾಚರಣೆಯಿಂದ ಅಂತಾರಾಷ್ಟ್ರೀಯ ಡ್ರಗ್‌ ಜಾಲವನ್ನು ಪತ್ತೆ ಹಚ್ಚಿದ್ದು ಸುಮಾರು 50 ಕೆಜಿ ಮಾದಕ ವಸ್ತುವನ್ನು ವಶಪಡಿಸಿಕೊಂಡಿದೆ. ಪ್ರಕರಣಕ್ಕೆ ಸಂಬಂಧಿಸಿ ದೆಹಲಿಯಲ್ಲಿ ಮೂವರನ್ನು ಬಂಧಿಸಲಾಗಿದೆ.

ಪತ್ತೆಹಚ್ಚಲಾದ ಡ್ರಗ್‌ ಜಾಲವು ಭಾರತ ಮಾತ್ರವಲ್ಲದೆ ನ್ಯೂಜಿಲೆಂಡ್, ಆಸ್ಟ್ರೇಲಿಯಾ ಹಾಗೂ ಮಲೇಷಿಯಾದಲ್ಲೂ ಜಾಲ ಹೊಂದಿದೆ. ಪ್ರಕರಣದ ಪ್ರಮುಖ ರೂವಾರಿ ತಮಿಳು ನಿರ್ಮಾಪಕನಾಗಿದ್ದು, ಈತ ಸದ್ಯ ತಲೆಮರೆಸಿಕೊಂಡಿದ್ದಾನೆ.

ವಶಪಡಿಸಿಕೊಳ್ಳಲಾದ ಸ್ಯೂಡೋಫೆಡ್ರಿನ್ ಮಾದಕ ವಸ್ತುವು ಮೆಥಂಪಟಮೈನ್ ತಯಾರಿಸಲು ಬಳಸುತ್ತಾರೆ. ಇದು ಅತ್ಯಂತ ಅಪಾಯಕಾರಿಯಾಗಿದ್ದು ವ್ಯಸನಕಾರಿ ಸಂಷ್ಲೇಷಿತ ಮಾದಕ ದ್ರವ್ಯವಾಗಿದೆ. ಈ ದ್ರವ್ಯವು ಕಾನೂನಿನ ಕೆಲ ಬಳಕೆಯನ್ನು ಹೊಂದಿದ್ದರೂ ಭಾರತದಲ್ಲಿ ನಿಯಂತ್ರಿತ ವಸ್ತುವಾಗಿ ವರ್ಗಿಕರಿಸಲಾಗಿದೆ.ಇವುಗಳ ಉತ್ಪಾದನೆ,ಮಾರಾಟ, ರಫ್ತು ಹಾಗೂ ಬಳಕೆಯ ಮೇಲೆ ಕಟ್ಟುನಿಟ್ಟಾದ ನಿಯಂತ್ರಣವಿದೆ.

Advertisements

ಈ ಮಾದಕ ವಸ್ತುವನ್ನು ಅಕ್ರಮವಾಗಿ ಉತ್ಪಾದನೆ ಹಾಗೂ ಮಾರಾಟ ಮಾಡಿದರೆ ಎನ್‌ಡಿಪಿಎಸ್‌ ಕಾಯ್ದೆ 1985ರ ಪ್ರಕಾರ 10 ವರ್ಷಗಳ ಕಾಲ ಕಠಿಣ ಶಿಕ್ಷೆಗೆ ಒಳಪಡಿಸಲಾಗುತ್ತದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ವಿಪಕ್ಷ ನಾಯಕ ಅಶೋಕ್ ಮತ್ತು ಸಾರ್ವಜನಿಕ ಸಭ್ಯತೆ

ನಿಷೇಧಿತ ಮಾದಕ ವಸ್ತುವನ್ನು ಅಡುಗೆ ಸಾಮಗ್ರಿಗಳ ರೀತಿಯಲ್ಲಿ ವಿಮಾನ ಹಾಗೂ ಸಮುದ್ರ ಸಂಚಾರದ ಮೂಲಕ ಕಳ್ಳಸಾಗಣೆ ಮಾಡಲಾಗುತ್ತಿತ್ತು.

ನ್ಯೂಜಿಲೆಂಡ್ ಹಾಗೂ ಆಸ್ಟ್ರೇಲಿಯಾ ದೇಶಗಳಿಗೆ ಸ್ಯೂಡೋಫೆಡ್ರಿನ್ ಮಾದಕ ವಸ್ತುವನ್ನು ಕಳ್ಳಸಾಗಣೆ ಮಾಡಲಾಗುತ್ತಿದೆ ಎಂದು ನ್ಯೂಜಿಲೆಂಡ್ ಕಸ್ಟಮ್ಸ್ ಹಾಗೂ ಆಸ್ಟ್ರೇಲಿಯಾ ಪೊಲೀಸರು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೊ ಅವರಿಗೆ ಮಾಹಿತಿ ನೀಡಿದ್ದರು.

ಇವೆರೆಡು ದೇಶಗಳಿಗೆ ಸ್ಯೂಡೋಫೆಡ್ರಿನ್ ಮಾದಕ ವಸ್ತುವನ್ನು ಒಂದು ಕೆಜಿಗೆ ಅಂದಾಜು 1.5 ಕೋಟಿ ರೂ.ಗಳಿಗೆ ಮಾರಾಟ ಮಾಡಲಾಗುತ್ತಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಮೆರಿಕದ ಡ್ರಗ್‌ ಎನ್‌ಫೋರ್ಸ್‌ಮೆಂಟ್ ಅಡ್‌ಮಿನಿಸ್ಟ್ರೇಷನ್‌ ಕೂಡ ಈ ಡ್ರಗ್‌ ಜಾಲದ ಮೂಲ ದೆಹಲಿ ಎಂದು ತಿಳಿಸಿದೆ. ಜಾಲದ ಬಗ್ಗೆ ಮಾಹಿತಿ ಪಡೆದ ನಂತರ ದೆಹಲಿ ಪೊಲೀಸ್ ಹಾಗೂ ಎನ್‌ಸಿಬಿ ಕಾರ್ಯಾಚರಣೆ ನಡೆಸಿ ಮಾದಕ ವಸ್ತುವನ್ನು ವಶಪಡಿಸಿಕೊಂಡಿವೆ.

ಬಂಧಿತ ಮೂವರು ತಮಿಳುನಾಡಿನವರಾಗಿದ್ದು, ಇವರ ಆರಂಭಿಕ ವಿಚಾರಣೆಗೊಳಪಡಿಸಿದ ನಂತರ ಕಳೆದ ಮೂರು ವರ್ಷಗಳಲ್ಲಿ 2 ಸಾವಿರ ಕೋಟಿ ಮೊತ್ತದ 3500 ಕೆಜಿ ಸ್ಯೂಡೋಫೆಡ್ರಿನ್ ಮಾದಕ ವಸ್ತುವನ್ನು 45 ಸಾಗಣೆಗಳ ಮೂಲಕ ಅಂತಾರಾಷ್ಟ್ರೀಯ ಮಾರುಕಟ್ಟೆ ತಲುಪಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X