ಪೊಲೀಸ್ ವಸತಿ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ಆರೋಪ; ಟೆಂಡರ್ ಸ್ಥಗಿತಗೊಳಿಸಲು ಆಗ್ರಹ

Date:

Advertisements

ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮ ನಿಯಮಿತವು ರಾಜ್ಯದ 81 ಸ್ಥಳಗಳಲ್ಲಿ ಕಾಮಗಾರಿ ನಡೆಸಲು ಮುಂದಾಗಿದೆ. ನಿಗಮವು 2024ರ ಜನವರಿ 12ರಂದು ಹೊರಡಿಸಿರುವ ಟೆಂಡರ್ ಪ್ರಕಟಣೆಯಲ್ಲಿ ಈ ಕಾಮಗಾರಿಗಳನ್ನು ನಡೆಸಲು 25 ಪ್ಯಾಕೇಜ್‌ಗಳಿಗೆ ಟೆಂಡರ್ ಆಹ್ವಾನಿಸಿದೆ. ಆದರೆ, ಈ ಪ್ರಕ್ರಿಯೆಯು ಕೆಪಿಟಿಟಿ ಕಾಯ್ದೆಯನ್ನು ಉಲ್ಲಂಘಿಸಿದೆ ಎಂದು ನೈಜ ಹೋರಾಟಗಾರರ ವೇದಿಕೆ ಆರೋಪಿಸಿದೆ.

ಕಾಯ್ದೆಯ ಉಲ್ಲಂಘನೆ ಬಗ್ಗೆ ಗೃಹ ಸಚಿವ ಜಿ ಪರಮೇಶ್ವರ್ ಅವರಿಗೆ ವೇದಿಕೆಯ ಮುಖಂಡ ಎಚ್.ಎಂ ವೆಂಕಟೇಶ್ ಮತ್ತು ಹಂದ್ರಾಳ್ ನಾಗಭೂಷಣ್ ಕುಣಿಗಲ್ ನರಸಿಂಹಮೂರ್ತಿ ಪತ್ರ ಬರೆದಿದ್ದಾರೆ. “ನಿಗಮವು ಸುಮಾರು 400 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿಗಳನ್ನು ನಡೆಸಲು ಉದ್ದೇಶಿಸಿದೆ.  ಟೆಂಡರ್‌ಗೆ ಬಿಡ್‌ ಮಾಡಲು ಕೆಪಿಟಿಸಿ ಕಾಯ್ದೆ ಪ್ರಕಾರ 30 ದಿನಗಳ ಕಾಲಾವಕಾಶ ನೀಡಬೇಕು. ಆದರೆ, ನಿಗಮವು 15 ದಿನದೊಳಗೆ ಟೆಂಡರ್‌ ಪ್ರಕ್ರಿಯೆ ಮುಗಿಸಲು ತೀರ್ಮಾನಿಸಿದೆ. ಇದು ಅವ್ಯವಹಾರಕ್ಕೆ ಎಡೆಮಾಡಿಕೊಡುತ್ತದೆ” ಎಂದು ಆರೋಪಿಸಿದ್ದಾರೆ.

“ನಿಗಮದ ಕೆಲವು ಅಧಿಕಾರಿಗಳು ಮೊದಲೇ ನಿರ್ಧರಿಸಿದ ಕಾಂಟ್ರಾಕ್ಟರ್‌ಗಳೊಂದಿಗೆ ಕೈಜೋಡಿಸಿರುವಂತಿದೆ. ಬಹು ಪಾಲು ಟೆಂಡರ್‌ಗಳನ್ನು ತಮಗೆ ಬೇಕಿರುವ ಗುತ್ತಿಗೆದಾರರಿಗೆ ನೀಡುವ ಉದ್ದೇಶದಿಂದ ಅಕ್ರಮವಾಗಿ ಟೆಂಡರ್ ಪ್ರಕ್ರಿಯೆಯನ್ನು 2024ರ ಫೆಬ್ರವರಿ 23ರಂದು ಮುಗಿಸಿದ್ದಾರೆ. ನಮಗೆ ಬಂದ ಮಾಹಿತಿ ಆಧಾರದಲ್ಲಿ ಬಿಡ್ ತೆರೆಯುವ ಮೊದಲೇ ಕಾಂಟ್ರಾಕ್ಟರ್‌ಗಳನ್ನು ನಿರ್ಧರಿಸಿ ಪಟ್ಟಿ ಮಾಡಿದ್ದಾರೆ” ಎಂದು ದೂರಿದ್ದಾರೆ.

Advertisements

“ಟೆಂಡರ್ ಪ್ರಕ್ರಿಯೆಯನ್ನು ಪ್ರಕಟಿಸಿದ ದಿನಾಂಕದಿಂದ 30 ದಿನಗಳವರೆಗೆ ಕಾಲಾವಕಾಶ ನೀಡಬೇಕು. ಈ ವಿಷಯದಲ್ಲಿ ಟೆಂಡರ್ ಪ್ರಕಟಣೆಗೊಂಡರೂ ಸಹಿತ ಪೋರ್ಟ್‌ನಲ್ಲಿ ಮಾತ್ರ ಕಾಮಗಾರಿಯ ಬಗ್ಗೆ ವಿವರವಾದ ಪೂರ್ಣ ಪ್ರಮಾಣದ ಮಾಹಿತಿಯನ್ನು ತಡವಾಗಿ ದಿನಾಂಕ: 07/02/24 ಮತ್ತು 08/02/24 ರಂದು ಪ್ರಕಟಿಸಿದ್ದಾರೆ. ಇದರಿಂದ, ಕೆಪಿಟಿಟಿ ಆಕ್ಟ್ ಉಲ್ಲಂಘನೆ ಆಗಿರುವುದು ಸ್ಪಷ್ಟವಾಗಿ ಗೋಚರಿಸುತ್ತದೆ” ಎಂದು ಹೇಳಿದ್ದಾರೆ.

“ಮುಖ್ಯವಾಗಿ ಟೆಂಡರ್ ಬಿಡ್ ತೆರೆಯುವ ಮೊದಲೇ ಯಾವ ಯಾವ ಕಾಮಗಾರಿಗಳನ್ನು ಯಾವ ಯಾವ ಕಾಂಟ್ರಾಕ್ಟರ್‌ಗಳಿಗೆ ಕೊಡಬೇಕೆಂಬುದನ್ನು ನಿಗದಿಪಡಿಸಿ ಪಟ್ಟಿ ಮಾಡಲಾಗಿದೆ ಎಂಬ ಮಾಹಿತಿ ಸಾರ್ವಜನಿಕರ ಗಮನಕ್ಕೆ ಬಂದಿರುವುದು ದುರಾದೃಷ್ಟಕರ ವಿಷಯವಾಗಿದೆ. ಹಾಗೂ ಪಾರದರ್ಶಕ ಆಡಳಿತಕ್ಕೆ ಮತ್ತು ಕೆಪಿಟಿಟಿ ಆಕ್ಟ್ ಗೆ ಧಕ್ಕೆ ಉಂಟಾಗಿರುತ್ತದೆ. ಟೆಂಡರ್ ಪ್ರಕ್ರಿಯೆಯಲ್ಲಿ ಅವ್ಯವಹಾರ, ಕರ್ತವ್ಯ ಲೋಪ ಮತ್ತು ಕಾಯ್ದೆಗಳ ಉಲ್ಲಂಘನೆಯಾಗಿದ್ದಲ್ಲಿ ತಕ್ಷಣ ಟೆಂಡರ್ ಪ್ರಕ್ರಿಯೆಗಳನ್ನು ಸ್ಥಗಿತಗೊಳಿಸಬೇಕು” ಎಂದು ಒತ್ತಾಯಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಕಲಬುರಗಿ | ಯುವಕರು ಮಾರಕಾಸ್ತ್ರ ಹಿಡಿದ ವಿಡಿಯೊ ವೈರಲ್: ನಾಲ್ವರು ಯುವಕರ ವಿರುದ್ಧ ಎಫ್‌ಐಆರ್

ಕಲಬುರಗಿಯ ದೇವಿ ನಗರದಲ್ಲಿ ನಾಲ್ವರು ಯುವಕರು ಕೈಯಲ್ಲಿ ಮಾರಕಾಸ್ತ್ರಗಳು ಹಿಡಿದು ವಿಡಿಯೋ...

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

Download Eedina App Android / iOS

X