ಬಿಎಸ್‌ವೈ ಇರೋತನಕ ಲಿಂಗಾಯತ ಮತ ನಮ್ಮ ಜೊತೆ ಇರುತ್ತವೆ: ಮುಖ್ಯಮಂತ್ರಿ ಬೊಮ್ಮಾಯಿ

Date:

Advertisements

ಕಾಂಗ್ರೆಸ್‌ನವರು ಬಿಜೆಪಿಯವರನ್ನು ಕರೆದುಕೊಂಡಿರಬಹುದು. ಆದರೆ, ಬಿಜೆಪಿಯ ಮತ ಬ್ಯಾಂಕ್ ಬಿಟ್ಟು ಹೋಗೋಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿ, “ಕ್ಷೇತ್ರಗಳಲ್ಲಿ ಪ್ರಚಾರಕ್ಕೆ ಹೋದ ಸಂದರ್ಭದಲ್ಲಿ ಅಭೂತಪೂರ್ವ ಬೆಂಬಲ ದೊರೆಯುತ್ತಿದೆ” ಎಂದರು.

“ಶೆಟ್ಟರ್ ಅವರು ಮಾಡಿರುವ ಆರೋಪದ ಬಗ್ಗೆ ಮಾತನಾಡಿ ಯಾರಾದರೂ ಪಕ್ಷ ಬಿಟ್ಟು ಹೋದಾಗ ಏನಾದರೂ ಒಂದು ಕಾರಣ ಕೊಡಬೇಕು. ಕಳೆದ 25 ವರ್ಷದ ಅವರ ರಾಜಕೀಯ ಜೀವನದಲ್ಲಿ ಬಿಜೆಪಿ ಶೆಟ್ಟರ್‌ಗೆ ಎಲ್ಲವನ್ನೂ ಕೊಟ್ಟಿದೆ. ಅವರನ್ನು ಕಡೆಗಣಿಸುವ ಪ್ರಶ್ನೆಯೇ ಇಲ್ಲ. ಹೋಗಿದ್ದಾರೆ ಅದಕ್ಕೊಂದು ನೆಪ ಅಷ್ಟೇ” ಎಂದರು.

Advertisements

“ಜಗದೀಶ್ ಶೆಟ್ಟರ್ ಅವರು ವಾಪಸ್ಸು ಬರುವ ಬಗ್ಗೆ ಮಾತನಾಡಿ, “ಹಿಂದುರಿಗಿ ಬರುವ ನಿರೀಕ್ಷೆ ಮಾಡೋಲ್ಲ” ಎಂದರು.

ಚುನಾವಣಾ ಬಳಿಕ ಅವಮಾನ

ವೀರೇಂದ್ರ ಪಾಟೀಲ್, ಬಂಗಾರಪ್ಪ, ದೇವರಾಜ ಅರಸರನ್ನು ಹೊರಹಾಕಿದಂತಹ ಪಕ್ಷಕ್ಕೆ ಶೆಟ್ಟರ್  ಹೋಗಿದ್ದಾರೆ. ಮೊದಲು ಸನ್ಮಾನ ಮಾಡಿ ಚುನಾವಣಾ ಬಳಿಕ ಅವಮಾನ ಮಾಡುತ್ತಾರೆ. ಜಗದೀಶ್ ಶೆಟ್ಟರ್ ಅವರನ್ನು ಬಳಸಿಕೊಂಡು ಹೊರಗೆ ಹಾಕುತ್ತಾರೆ. ಬಿಎಸ್‌ವೈ ಇರೋತನಕ ಲಿಂಗಾಯತ ಮತಗಳು ನಮ್ಮ ಜೊತೆ ಇರುತ್ತವೆ” ಎಂದರು.

bfe5ebf00de2b670976597f37a6d2b77?s=150&d=mp&r=g
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

Download Eedina App Android / iOS

X