ಬಳ್ಳಾರಿಯಲ್ಲಿ ಎಸ್‌ಸಿ/ಎಸ್‌ಟಿ, ಅಲೆಮಾರಿಗಳ ಜಾಗೃತಿ ಸಮಾವೇಶ

Date:

Advertisements

ಅಲೆಮಾರಿಗಳ ಅಭಿವೃದ್ಧಿಗಾಗಿ ಬಳ್ಳಾರಿ ಜಿಲ್ಲಾ ಗುಡಿಸಲು ಮುಕ್ತ, ಟೆಂಟ್ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಶ್ರಮಿಸುತ್ತೇನೆ. ಬಳ್ಳಾರಿಯಲ್ಲಿ ಅಲೆಮಾರಿಗಳ ಸಮುದಾಯ ಭವನಕ್ಕೆ ಒಂದು ಎಕರೆ ಸರ್ಕಾರಿ ಜಮೀನು, 5 ಕೋಟಿ ರೂ. ಹಣ ಮೀಸಲಿಡುತ್ತೇವೆ ಎಂದು ಸಚಿವ ಬಿ ನಾಗೇಂದ್ರ ಭರವಸೆ ನೀಡಿದ್ದಾರೆ.

ಬಳ್ಳಾರಿಯಲ್ಲಿ ಕರ್ನಾಟಕ ರಾಜ್ಯ ಎಸ್ಸಿಎಸ್​ಟಿ ಅಲೆಮಾರಿ ಬುಡಕಟ್ಟು ಮಹಾಸಭಾ ಆಯೋಜಿಸಿದ್ದ ಎಸ್‌ಸಿ/ಎಸ್‌ಟಿ, ಅಲೆಮಾರಿಗಳ ಜಾಗೃತಿ ಸಮಾವೇಶಕ್ಕೆ ಸಚಿವರು ಚಾಲನೆ ನೀಡಿದರು.

ಸಮಾವೇಶದಲ್ಲಿ ಮಾತನಾಡಿದ ಬಳ್ಳಾರಿ ಶಾಸಕ ಭರತ್ ರೆಡ್ಡಿ, “ಅಲೆಮಾರಿಗಳು ಹಾಗೂ ಹಿಂದುಳಿದವರ ಯಾವುದೇ ಸಮಸ್ಯೆಗಳನ್ನು ಬಗೆಹರಿಸಲು ನಾವು ಸದಾ ಸಿದ್ಧರಾಗಿದ್ದೇವೆ. ಅಲೆಮಾರಿಗಳ ಶ್ರೇಯೋಭಿವೃದ್ಧಿಗಾಗಿ ಶ್ರಮಿಸುತ್ತೇವೆ” ಎಂದರು.

Advertisements

ಸಂವಿಧಾನದ ಪೀಠಿಕೆ ಓದಿ, ಬುದ್ಧ-ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾಂಜಲಿ ಅರ್ಪಿಸುವ ಮೂಲಕ ಸಮಾವೇಶಕ್ಕೆ ಚಾಲನೆ ನೀಡಲಾಯಿತು.

ಸಮಾವೇಶದಲ್ಲಿ ಕಂಪ್ಲಿ ಶಾಸಕ ಗಣೇಶ್, ಮಾಜಿ ಲೋಕಸಭಾ ಸದಸ್ಯ ಉಗ್ರಪ್ಪ, ಶಿವಕುಮಾರ್ ಕೆ, ಮುತ್ತುರಾಜ್, ಸುನಿಲ್ ಹೇಳವರ, ಶ್ರೀನಿವಾಸ್, ಮದ್ದಿ ದೊಡ್ಡ ಚಮಲಪ್ಪ, ಚೌಡಪ್ಪ, ಕಿನ್ನರಿ ಶೇಷಪ್ಪ, ವೆಂಕಟೇಶ ಶಂಕರ ಬಂಡೆ ವೆಂಕಪ್ಪ, ಅಂಜಿ, ಸಿ ಕೆ ಮಂಜುನಾಥ್ ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X