ಉಡುಪಿ | ಗ್ಯಾರೇಜ್ ಕಾರ್ಮಿಕರ ಸಮಸ್ಯೆಗಳಿಗೆ ಧನಾತ್ಮಕವಾಗಿ ಸ್ಪಂದಿಸಿದ ಶಾಸಕ ಯಶಪಾಲ್ ಸುವರ್ಣ

Date:

Advertisements

ಜಾಗತೀಕರಣದ ಇಂದಿನ ವಾತಾವರಣದಲ್ಲಿ ಗ್ಯಾರೇಜ್ ಮಾಲೀಕರು ಮತ್ತು ಕಾರ್ಮಿಕರು ಸವಾಲಿನ ಪರಿಸ್ಥಿತಿಯಲ್ಲಿ ವೃತ್ತಿಯನ್ನು ನಡೆಸುತ್ತಿದ್ದಾರೆ. ಅಸಂಘಟಿತ ಕಾರ್ಮಿಕರಿಗೆ ದೊರಕುವ ಸರ್ಕಾರಿ ಸೌಲಭ್ಯಗಳ ಮಾಹಿತಿಯ ಕೊರತೆಯಿಂದ ಅವರು ವಂಚಿತರಾಗಿದ್ದಾರೆ. ಅಸಂಘಟಿತ ವರ್ಗಕ್ಕೆ ದೊರಕುವ ಎಲ್ಲ ಸೌಲಭ್ಯಗಳನ್ನು ಗ್ಯಾರೇಜ್ ಕಾರ್ಮಿಕರಿಗೆ ದೊರಕಿಸುವ ನಿಟ್ಟಿನಲ್ಲಿ ಓರ್ವ ಜನಪ್ರತಿನಿಧಿಯಾಗಿ ಪ್ರಾಮಾಣಿಕತೆಯಿಂದ ಕರ್ತವ್ಯ ನಿರ್ವಹಿಸುತ್ತೇನೆ ಎಂದು ಉಡುಪಿಯ ಶಾಸಕ ಯಶಪಾಲ್ ಸುವರ್ಣ ಅವರು ನುಡಿದರು.

ಉಡುಪಿಯ ಬೈಲೂರಿನ ಆಶಾನಿಲಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಉಡುಪಿ ಜಿಲ್ಲಾ ಗ್ಯಾರೇಜ್ ಮಾಲೀಕರ ಸಂಘದ ವಾರ್ಷಿಕ ಮಹಾಸಭೆ ಮತ್ತು ಸಮಾವೇಶ ಉದ್ಘಾಟಿಸಿ ಮಾತನಾಡಿದರು.

ಜಿಲ್ಲಾ ಕಾರ್ಮಿಕ ಅಧಿಕಾರಿ ಕುಮಾರ್ ಬಿ ಆರ್ ರವರು ಕಾರ್ಮಿಕ ಇಲಾಖೆಯ ನಿಯಮ ನಿಬಂಧನೆಗಳ ಬಗ್ಗೆ ಮಾಹಿತಿ ನೀಡಿದರು.

Advertisements

ಈ ಸಮಾವೇಶದಲ್ಲಿ ಸಂಜೀವ ದೇವಾಡಿಗ ಬೈಂದೂರು, ಆನಂದ್ ಸೇರಿಗಾರ್ ದೊಡ್ಡಣ್ಣಗುಡ್ಡೆ, ಮತ್ತು ರಾಘವೇಂದ್ರ ಆಚಾರ್ಯ ಆದಿ ಉಡುಪಿ ಇವರನ್ನು ಸನ್ಮಾನಿಸಿದರು. ಸಂಘದ ವತಿಯಿಂದ ಆಶಾ ನಿಲಯದ ವಿಕಲಚೇತನ ಮಕ್ಕಳಿಗೆ ಮಧ್ಯಾಹ್ನದ ಭೋಜನದ ವ್ಯವಸ್ಥೆಯನ್ನು ಮಾಡಿದ್ದರು. ಸಂಘದ ಸದಸ್ಯರಿಗೆ ನೂತನವಾಗಿ ನವೀಕರಿಸಿದ ಗುರುತಿನ ಚೀಟಿ ಮತ್ತು ಪ್ರಮಾಣ ಪತ್ರಗಳನ್ನು ವಿತರಿಸಿದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಅಂಬೇಡ್ಕರ್ ಅರಿವು, ದೇಶದ ಉಳಿವು: ಮಲ್ಕುಂಡಿ ಮಹಾದೇವಸ್ವಾಮಿ

ಸಂಘದ ಅಧ್ಯಕ್ಷ ರೋಷನ್ ಕರ್ಕಡ ಕಾಪು ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಉಡುಪಿ ಶ್ರೀ ಕೃಷ್ಣ ಮಠದ ವಕ್ತಾರ ಉಲ್ಲಾಸ್ ಕುಲಕರ್ಣಿ, ಉಡುಪಿ ಕ್ಲಾಸಿಕ್ ಆಟೋಮೋಬೈಲ್  ಆಡಳಿತ ನಿರ್ದೇಶಕ ಸಂತೋಷ್ ಕುಮಾರ್, ವಿಮಾ ವಕ್ತಾರ ರವೀಂದ್ರ ಶೆಟ್ಟಿ, ದಕ್ಷಿಣ ಕನ್ನಡ ಜಿಲ್ಲಾ ಗ್ಯಾರೇಜ್ ಮಾಲೀಕರ ಸಂಘ ಮಂಗಳೂರಿನ ಮಾಜಿ ಅಧ್ಯಕ್ಷ ದಿನೇಶ್ ಕುಮಾರ್, ಪದಾಧಿಕಾರಿಗಳಾದ ದಿನೇಶ್ ಬಂಗೇರ, ಎಂ ನಾರಾಯಣ್, ತಾಲೂಕು ಅಧ್ಯಕ್ಷರುಗಳಾದ ನಾರಾಯಣ ಆಚಾರ್ ಕುಂದಾಪುರ, ಕೃಷ್ಣಯ್ಯ ಮದ್ದೋಡಿ ಬೈಂದೂರು, ನಾರಾಯಣ ಪೂಜಾರಿ ಬ್ರಹ್ಮಾವರ, ಅಬ್ದುಲ್ ಹಮೀದ್ ಕಾರ್ಕಳ, ಗೌರವ ಸಲಹೆಗಾರರಾದ ಪ್ರಭಾಕರ್ ಕೆ, ಯಾದವ ಶೆಟ್ಟಿಗಾರ್, ಉದಯ್ ಕಿರಣ್, ಜಯ ಸುವರ್ಣ, ಉಪಾಧ್ಯಕ್ಷರಾದ ರಾಜೇಶ್ ಜತ್ತನ್, ವಿನಯ್ ಕುಮಾರ್ ಕಲ್ಮಾಡಿ, ಕೋಶಾಧಿಕಾರಿ ಸಂತೋಷ್ ಕುಮಾರ್, ಕ್ರೀಡಾ ಕಾರ್ಯದರ್ಶಿ ಮಧುಸೂದನ್ ಕನ್ನರ್ಪಾಡಿ ಸೇರಿದಂತೆ ಇತರರು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

Download Eedina App Android / iOS

X