ದಾವಣಗೆರೆ | ಬೋರ್‌ವೆಲ್‌ ಕೊರೆಯಲು ಬಂದಿದ್ದ ಲಾರಿ ಬೆಂಕಿಗಾಹುತಿ

Date:

Advertisements

ಬೋರ್‌ವೆಲ್‌ ಕೊರೆಯಲು ಬಂದಿದ್ದ ಲಾರಿ ಸುಟ್ಟು ಭಸ್ಮವಾದ ಘಟನೆ ದಾವಣಗೆರೆ ತಾಲೂಕಿನ ಕುಕ್ಕುವಾಡ ಗ್ರಾಮದಲ್ಲಿ ನಡೆದಿದೆ.

ಮಳೆಯ ಅವಕೃಪೆಯಿಂದಾಗಿ ಬೆಳೆ, ತೋಟಗಳನ್ನು ಉಳಿಸಿಕೊಳ್ಳಲು ಅನ್ನದಾತ ಅಂತರ್ಜಲಕ್ಕಾಗಿ ಬೋರ್‌ವೆಲ್ ಮೊರೆ ಹೋಗಿದ್ದು, ಹತ್ತಾರು ಬೋರ್‌ವೆಲ್ ಗಾಡಿಗಳ ಸದ್ದು ಹಳ್ಳಿಗಳಲ್ಲಿ ಕೇಳಿಬರುತ್ತಿದೆ. ಆದರೆ ಕೊಳವೆಬಾವಿ ಕೊರೆಯಲು ಬಂದ ಗಾಡಿಯೊಂದು ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ಲಾರಿಗೆ ಬೆಂಕಿ ಹತ್ತಿಕೊಂಡಿದ್ದು, ಲಾರಿಯು ಧಗಧಗನೇ ಹೊತ್ತಿ ಉರಿದಿದೆ. ಬೆಂಕಿ ನಂದಿಸಲು ಯತ್ನಿಸಲಾಯಿತಾದರೂ ಅಗ್ನಿಶಾಮಕ ದಳ ವಾಹನ ಬರುವ ವೇಳೆಗಾಗಲೇ ಸಂಪೂರ್ಣವಾಗಿ ಬೆಂಕಿಯಿಂದ ಸುಟ್ಟು ಕರಕಲಾಯಿತು.

ಈ ಸುದ್ದಿ ಓದಿದ್ದೀರಾ? ಉಡುಪಿ | ಗ್ಯಾರೇಜ್ ಕಾರ್ಮಿಕರ ಸಮಸ್ಯೆಗಳಿಗೆ ಧನಾತ್ಮಕವಾಗಿ ಸ್ಪಂದಿಸಿದ ಶಾಸಕ ಯಶಪಾಲ್ ಸುವರ್ಣ

Advertisements

ದಾವಣಗೆರೆ ತಾಲೂಕಿನ ಹದಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಕುಕ್ಕುವಾಡ ಗ್ರಾಮದಲ್ಲಿ ಧರ್ಮರಾಯ ಎನ್ನುವವರ ಜಮೀನಿನಲ್ಲಿ ನೀರಿಗಾಗಿ ಬೋರ್‌ವೆಲ್ ಕೊರೆಸಲು ಉದ್ದೇಶಿಸಲಾಗಿತ್ತು. ಲಾರಿಯೂ ಬಂದಿತ್ತು. ಜತೆಗೆ ಸಹಾಯಕ್ಕೆ ಎಂದು ಮತ್ತೊಂದು ಲಾರಿ ಬಂದಿತ್ತು. ಈ ವೇಳೆ ಬೋರ್‌ವೆಲ್ ಕೊರೆಸಲು ಸಹಾಯಕ್ಕೆ ಬಂದಿದ್ದ ಲಾರಿ ಹೊತ್ತಿ ಉರಿದಿದೆ. ಧರ್ಮರಾಯ ಎಂಬುವವರ ಜಮೀನಿನಲ್ಲಿ ಲಾರಿ ಸುಟ್ಟು ಕರಕಲಾಗಿದ್ದು, ಪ್ರಾಣಾಪಾಯ ಸಂಭವಿಸಿಲ್ಲ. ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದರು. ಹದಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X