ಬೆಂಗಳೂರು | ಚುರುಕುಗೊಂಡ ಕೆ.ಆರ್ ಪುರಂ-ಕೆಐಎ ಮೆಟ್ರೋ ಮಾರ್ಗ ಕಾಮಗಾರಿ

Date:

Advertisements

ಬೆಂಗಳೂರಿನ ಕೆ.ಆರ್‌ ಪುರಂ ಮತ್ತು ಕೆಐಎ (ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ) ನಡುವಿನ ಮೆಟ್ರೋ ಮಾರ್ಗ ಕಾಮಗಾರಿ ಭರದಿಂದ ಸಾಗುತ್ತಿದೆ. ಚಿಕ್ಕಜಾಲ ಬಳಿ ಎರಡು ಜೊತೆ ಯು-ಗ್ರಿಡರ್‌ಗಳನ್ನು (ಮೆಟ್ರೋ ಕಂಬಿಗಳನ್ನು ಅಳವಡಿಸುವ ಕಾಂಕ್ರೀಟ್ ಬೆಡ್‌ಗಳು) ಅಳವಡಿಸಲಾಗಿದೆ ಎಂದು ಬಿಎಂಆರ್‌ಸಿಎಲ್‌ ಹೇಳಿದೆ.

“ಸಿಲ್ಕ್‌ ಬೋರ್ಡ್‌ ಮತ್ತು ಕೆಐಎ ನಡುವೆ ಎರಡು ಹಂತಗಳಲ್ಲಿ ಕಾಮಗಾರಿ ನಡೆಯುತ್ತಿದೆ. ಮೊದಲ ಹಂತದಲ್ಲಿ ಸಿಲ್ಕ್‌ ಬೋರ್ಡ್‌ನಿಂದ ಕೆ.ಆರ್‌ ಪುರಂವರೆಗೆ ಹಾಗೂ ಎರಡನೇ ಹಂತದಲ್ಲಿ ಕೆ.ಆರ್‌ ಪುರಂನಿಂದ ಕೆಐಎ ನಿಲ್ದಾಣ ಕಾಮಗಾರಿ ನಡೆಯುತ್ತಿದೆ. ಪ್ಯಾಕೇಜ್‌-3ರಲ್ಲಿ ಎರಡನೇ ಹಂತದ 15.01 ಕಿ.ಮೀ ಕಾಮಗಾರಿ ಪ್ರಗತಿಯಲ್ಲಿದೆ. ಪ್ಯಾಕೇಜ್-3ರಲ್ಲಿ ಒಟ್ಟು 784 ಯು-ಗ್ರಿಡರ್‌ಗಳನ್ನು ಅಳವಡಿಸಲಾಗುತ್ತಿದೆ” ಎಂದು ಬಿಎಂಆರ್‌ಸಿಎಲ್ ಮುಖ್ಯ ಎಂಜಿನಿಯರ್ ಡಿ.ಸಿ.ನಟರಾಜ್ ತಿಳಿಸಿದ್ದಾರೆ.

“ಪ್ರತಿ ಮೆಟ್ರೋ ಗ್ರಿಡರ್‌ಗಳು 28 ಮೀಟರ್ ಉದ್ದ ಇವೆ. ಏಪ್ರಿಲ್ 14ರಂದು ಬೆಳಿಗ್ಗೆ 5ಗಂಟೆಗೆ ಮೊದಲ ಹಂತದ ಕಾಮಗಾರಿ ಪೂರ್ಣಗೊಂಡಿದೆ. ಮೊದಲ ಹಂತದ ಕಾಮಗಾರಿಯ ಅನುಭದಿಂದ ಎರಡನೇ ಹಂತದ ಕಾಮಗಾರಿಯನ್ನು ನಡೆಸಲಾಗುತ್ತಿದೆ” ಎಂದು ತಿಳಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ತಂಬಾಕು ಮಾರಾಟಕ್ಕೆ ಪ್ರತ್ಯೇಕ ಪರವಾನಗಿ ಕಡ್ಡಾಯ : ಬಿಬಿಎಂಪಿ

ಮೆಟ್ರೋ ಪಿಲ್ಲರ್‌ ಕಾಮಗಾರಿಗೆ ಅಗತ್ಯವಿರುವ 2,172 ಪಿಲ್ಲರ್‌ಗಳ ಪೈಕಿ 1,619 ಪಿಲ್ಲರ್ ನಿರ್ಮಾಣ ಕಾಮಗಾರಿ ಪೂರ್ಣಗೊಂಡಿದೆ. 489 ಪಿಲ್ಲರ್‌ಗಳಲ್ಲಿ 244 ಪಿಲ್ಲರ್‌ಗಳ ಕ್ಯಾಪ್ ಮಾಡಲಾಗಿದೆ, 195 ಪಿಲ್ಲರ್‌ಗಳು ಸಿದ್ಧವಾಗಿವೆ. ಕೆ.ಆರ್‌ ಪುರಂ – ಕೆಐಎ ಮೆಟ್ರೋ ಮಾರ್ಗವನ್ನು ಜೂನ್‌ 2026ರ ವೇಳೆಗೆ ಮುಗಿಸಲು ಗಡುವು ನಿಗದಿಯಾಗಿದೆ ಎಂದು ಅವರು ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಪಿಂಚಣಿ ಪರಿಷ್ಕರಣೆಗೆ ಆಗ್ರಹಿಸಿ ನಿವೃತ್ತ ಉದ್ಯೋಗಿಗಳಿಂದ ಉಪವಾಸ ಸತ್ಯಾಗ್ರಹ

ಸರಕಾರಿ ಬ್ಯಾಂಕ್ ಪಿಂಚಣಿದಾರಿಗೆ ಮತ್ತು ನಿವೃತ್ತಿ ವೇತನದಾರರಿಗೆ ಪಿಂಚಣಿ ಪರಿಷ್ಕರಣೆ ಮಾಡಬೇಕು...

ದ್ವೇಷ, ಸುಳ್ಳಿನ ವಿರುದ್ಧ ಕಾನೂನು ತರುವುದಕ್ಕೂ ಮುನ್ನ ಸರ್ಕಾರ ಸಮಗ್ರವಾದ ಚರ್ಚೆ ನಡೆಸಲಿ: ಶಿವಸುಂದರ್

ಕರ್ನಾಟಕದಲ್ಲಿ ಹೆಚ್ಚಾಗುತ್ತಿರುವ ದ್ವೇಷ, ಸುಳ್ಳು ಸುದ್ದಿಗಳ ಪ್ರಚಾರದ ವಿರುದ್ಧ ಕಾನೂನು ತರಲು...

ಬೆಂಗಳೂರು | ಉದ್ಧಟತನ ತೋರಿದ ಜಿ. ಪಲ್ಲವಿಯವರ ಆಪ್ತ ಕಾರ್ಯದರ್ಶಿ ವರ್ಗ, ನಮ್ಮ ಹೋರಾಟಕ್ಕೆ ಜಯ: ಲೋಹಿತಾಕ್ಷ ಬಿ ಆರ್

ಕರ್ನಾಟಕ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ....

ಅನೇಕ ಪ್ರಕರಣಗಳಲ್ಲಿ ಸಾಕ್ಷಿಯಿದ್ದರೂ ತದ್ವಿರುದ್ಧ ತೀರ್ಪು: ಮಾಲೆಗಾಂವ್ ತೀರ್ಪಿಗೆ ಪ್ರಿಯಾಂಕ್ ಖರ್ಗೆ ಅಸಮಾಧಾನ

ಅನೇಕ ಪ್ರಕರಣಗಳಲ್ಲಿ ಸಾಕ್ಷಿಗಳಿದ್ದರೂ ಕೂಡ ತದ್ವಿರುದ್ಧವಾಗಿ ತೀರ್ಪು ಪ್ರಕಟವಾಗಿರುವ ಉದಾಹರಣೆಗಳು ಇವೆ....

Download Eedina App Android / iOS

X