ಬೆಂಗಳೂರು | ಬಸವೇಶ್ವರ ಮೂರ್ತಿ ಲೋಕಾರ್ಪಣೆಗೆ ಮನವಿ

Date:

Advertisements

ಬೆಂಗಳೂರಿನ ಹೃದಯ ಭಾಗವಾದ ರಾಜಾಜಿನಗರದ ಮೆಟ್ರೋ ನಿಲ್ದಾಣದ ಸಮೀಪವಿರುವ ಪ್ಲೇ ಓವರ ಮೇಲೆ ಇಟ್ಟು 5 ತಿಂಗಳಾದರೂ ಕಾಮಗಾರಿ ಪೂರ್ಣವಾಗಿಲ್ಲ ಆದಷ್ಟುಬೇಗ ಇದನ್ನು ಪೂರ್ಣಗಿಳಿಸಿ ಲೋಕಾರ್ಪಣೆ ಮಾಡುವಂತೆ ಕೋರಿ ಶ್ರೀಬಸವೇಶ್ವರ ಪ್ರಚಾರ ಸಮಿತಿ ಮಹಾನಗರ ಪಾಲಿಕೆಗೆ ಮನವಿ ಮಾಡಿದೆ.

ಮನವಿ ಪತ್ರದಲ್ಲಿ, ಸಕಲ ಜೀವಿಗಳಿಗೂ ಲೇಸನೇ ಬಯಸಿದ ಮಾನವೀಯತೆಯ ಸಾಕಾರ ಮೂರ್ತಿ, ಕನ್ನಡದ ಮೊದಲ ಗುರು, ಪ್ರಜಾಪ್ರಭುತ್ವ ವ್ಯವಸ್ಥೆಗೆ ಬುನಾದಿ ಹಾಕಿದ ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಮೂರ್ತಿಯನ್ನು 2023ರ ಸೆಪ್ಟೆಂಬರ್ 2ರಂದು ಬೆಂಗಳೂರಿನ ಹೃದಯ ಭಾಗವಾದ ರಾಜಾಜಿನಗರದ ಮೆಟ್ರೋ ನಿಲ್ದಾಣದ ಸಮೀಪವಿರುವ ಪ್ಲೇ ಓವರ ಮೇಲೆ ಇಡಲಾಗಿದೆ.

ಮೂರ್ತಿ ಇಟ್ಟು 5 ತಿಂಗಳಾದರೂ, ಅದರ ಸುತ್ತಮುತ್ತ ನಡೆಯಬೇಕಾದ ಕೆಲಸಗಳು ಇನ್ನೂ ಆಗಿಲ್ಲ. ಮೂರ್ತಿಯನ್ನು ಮುಚ್ಚಿದ  ಕವರ್ ಹರಿದು ಹೋಗುತ್ತಿದೆ. ಆದಷ್ಟು ಬೇಗ ಆ ಕೆಲಸಗಳನ್ನು ಪೂರ್ಣಗೊಳಿಸಿ ಬಸವೇಶ್ವರರವರ ಮೂರ್ತಿಯು ಲೋಕಾರ್ಪಣೆಗೊಳಿಸಬೇಕು ಎಂದು ಬವಣ್ಣನವರ ಅಭಿಮಾನಿಗಳ ಬೇಡಿಕೆ ಎಂದಿದ್ದಾರೆ.

Advertisements

ಈ ನಿಟ್ಟಿನಲ್ಲಿ ಬೆಂಗಳೂರು ಮಹಾನಗರ ಪಾಲಿಕೆಯ ಸಂಬಂಧಪಟ್ಟ ಅಧಿಕಾರಿಗಳು, ಈ ನಿರ್ಮಾಣದ ಹೊಣೆ ಹೊತ್ತ ಗುತ್ತಿಗೆದಾರರು ಮತ್ತು ಸ್ಥಳೀಯ ಶಾಸಕರು ಗಮನಿಸಬೇಕು ಎಂದು ಶ್ರೀಬಸವೇಶ್ವರ ಪ್ರಚಾರ ಸಮಿತಿ ಮನವಿ ಮಾಡಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X