ಬೆಂಗಳೂರು | ಮಾತೃಭಾಷೆ ಕಡ್ಡಾಯವಾಗಬೇಕೆಂಬ ಕುವೆಂಪು ಅವರ ಅಭಿಪ್ರಾಯಕ್ಕೆ ನನ್ನ ಸಹಮತವಿದೆ: ನ್ಯಾ. ಎನ್‌ ವಿ ಅಂಜಾರಿಯ

Date:

Advertisements

ಆಂಗ್ಲಭಾಷೆಯ ಜತೆಗೆ ಮಾತೃಭಾಷೆ ಕಡ್ಡಾಯವಾಗಬೇಕೆಂಬ ರಾಷ್ಟ್ರಕವಿ ಕುವೆಂಪು ಅವರ ಅಭಿಪ್ರಾಯಕ್ಕೆ ನನ್ನ ಸಹಮತವಿದೆ ಎಂದು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್ ವಿ ಅಂಜಾರಿಯ ಅಭಿಪ್ರಾಯಪಟ್ಟಿದ್ದಾರೆ.

ಬೆಂಗಳೂರಿನ ಹೈಕೋರ್ಟ್‌ನಲ್ಲಿ ರಾಜ್ಯ ವಕೀಲರ ಪರಿಷತ್‌ನಿಂದ ಆಯೋಜಿಸಿದ್ದ ಸ್ವಾಗತ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

“ಕುವೆಂಪು ಅವರು ಆಂಗ್ಲಭಾಷೆಯ ಜತೆ ಮಾತೃಭಾಷೆ ಕಡ್ಡಾಯಗೊಳಿಸಬೇಕು ಎಂದಿದ್ದರು. ಅದಕ್ಕೆ ನನ್ನ ಬೆಂಬಲವಿದೆ. ಗುಜರಾತಿ ನನಗೆ ಮಾತೃಭಾಷೆಯಾಗಿತ್ತು, ಕನ್ನಡ ನನ್ನ ಕರ್ಮಭೂಮಿ ಭಾಷೆಯಾಗಿದೆ” ಎಂದು ನುಡಿದರು.

Advertisements

“ಕರ್ನಾಟಕದೊಂದಿಗೆ ನನಗೆ ಸಂಬಂಧವಿದ್ದು, ಗುಜರಾತ್ ನ್ಯಾಯಾಲಯಲ್ಲಿ ವಕೀಲನಾಗಿ ಸೇವೆ ಪ್ರಾರಂಭಿಸಿದ ಸಂದರ್ಭದಲ್ಲಿ ನವೀನ್ ಚಂದ್ರ ಲಾ ಫೌಂಡೇಷನ್ ವತಿಯಿಂದ ಫೆಲೋಶಿಪ್ (ಶಿಷ್ಯವೇತನ) ಲಭ್ಯವಾಗಿತ್ತು. ಈ ಫೆಲೋಶಿಪ್‌ಅನ್ನು ಸುಪ್ರಿಂ ಕೋರ್ಟ್‌ನ ಅಂದಿನ ಮುಖ್ಯ ನ್ಯಾಯಮೂರ್ತಿಗಳಾಗಿದ್ದ ಕನ್ನಡಿಗ ಎಂ ಎನ್ ವೆಂಕಟಾಚಲಯ್ಯ ಪ್ರದಾನ ಮಾಡಿದ್ದರು” ಎಂದು ಸ್ಮರಿಸಿದರು.

“ನಾನು ನ್ಯಾಯಮೂರ್ತಿಯಾಗಿ ನೇಮಕಗೊಂಡ ವೇಳೆ ಕನ್ನಡಿಗರಾಗಿದ್ದ ಎಂ ವೀರಪ್ಪ ಮೋಯ್ಲಿ ಅವರು ಕೇಂದ್ರ ಕಾನೂನು ಸಚಿವರಾಗಿದ್ದರು. ಗುಜರಾತ್ ಹೈಕೋರ್ಟ್‌ಗೆ ನ್ಯಾಯಮೂರ್ತಿಯಾಗಿ ನೇಮಕಗೊಂಡ ಬಳಿಕ ಕರ್ನಾಟಕ ಹೈಕೋರ್ಟ್‌ನ ಸಿಜೆ ಸೇವೆ ಸಲ್ಲಿಸಿದ್ದ ನ್ಯಾ ಡಿ ಎಚ್ ವಘೇಲಾ ಅವರೊಂದಿಗೆ ಮೊದಲ ಬಾರಿ ವಿಭಾಗೀಯ ಪೀಠ ಹಂಚಿಕೊಂಡಿದ್ದೆ” ಎಂದು ವಿವರಿಸಿದರು.

ಈ ಸುದ್ದಿ ಓದಿದ್ದೀರಾ? ತುಮಕೂರು | ಬೀಡಿ ಕಾರ್ಮಿಕರಿಗೆ ಪರ್ಯಾಯ ಪರಿಹಾರ ನೀಡದೆ ಮಾರಾಟ ನಿಷೇಧ ವಿಧೇಯಕ ಜಾರಿ; ಕಾರ್ಮಿಕರ ವಿರೋಧ

ಈ ವೇಳೆ ಹೈಕೋರ್ಟ್‌ ನ್ಯಾಯಮೂರ್ತಿಗಳು, ಅಡ್ವೋಕೇಟ್ ಜನರಲ್ ಕೆ ಶಶಿಕಿರಣ ಶೆಟ್ಟಿ, ವಕೀಲರ ಪರಿಷತ್ ಅಧ್ಯಕ್ಷ ವಿಶಾಲ್ ರಘು ಸೇರಿದಂತೆ ಹಲವು ವಕೀಲರು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X