ಎಸ್‌ ಟಿ ಸೋಮಶೇಖರ್‌ ವಿರುದ್ಧ ಕ್ರಮ; ಹಿರಿಯ ವಕೀಲರ ಜೊತೆ ಚರ್ಚಿಸಿ ನಿರ್ಧಾರ: ಆರ್‌ ಅಶೋಕ್‌

Date:

Advertisements

ಯಶವಂತಪುರ ಕ್ಷೇತ್ರದ ಬಿಜೆಪಿ ಶಾಸಕ ಎಸ್‌ ಟಿ ಸೋಮಶೇಖರ್‌ ಅವರು ಅಡ್ಡಮತದಾನ ಮಾಡಿರುವ ಬಗ್ಗೆ ಪ್ರತಿಪಕ್ಷದ ನಾಯಕ ಆರ್‌ ಅಶೋಕ್‌ ಪ್ರತಿಕ್ರಿಯಿಸಿದ್ದು, “ಹೈಕೋರ್ಟ್‌ನ ಹಿರಿಯ ವಕೀಲರ ಜೊತೆ ಚರ್ಚಿಸಿ ಮುಂದಿನ ನಿರ್ಧಾರ ತಗೆದುಕೊಳ್ಳಲಾಗುವುದು” ಎಂದು ತಿಳಿಸಿದರು.

ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಅಥವಾ ಮೈತ್ರಿ ಅಭ್ಯರ್ಥಿಗೆ ಮತ ಹಾಕುವ ಬದಲು ಕಾಂಗ್ರೆಸ್‌ನ ಮೂರನೇ ಅಭ್ಯರ್ಥಿಗೆ ಮತ ಹಾಕಿದ್ದಾರೆ ಎಂದು ತಿಳಿದುಬಂದಿದೆ. ಹೀಗಾಗಿ ಅವರ ವಿರುದ್ಧ ಕ್ರಮಕೈಗೊಳ್ಳುತ್ತೇವೆ” ಎಂದರು.

“ಎಸ್ ಟಿ ಸೋಮಶೇಖರ್ ಮತ್ತು ಶಿವರಾಮ ಹೆಬ್ಬಾರ್‌ಗೂ ವಿಪ್ ಕಳಿಸಿದ್ದೆವು. ಕೊನೆಯ ಕ್ಷಣದವರೆಗೂ ನಮ್ಮ ಜೊತೆ ಮಾತಾಡಿದ್ದಾರೆ. ಪದೇ ಪದೇ ಮೋಸ ಮಾಡುವುದನ್ನು ಜನ ಸಹಿಸಲ್ಲ” ಎಂದು ಹೇಳಿದರು.

Advertisements

“ಸೋಮಶೇಖರ್ ಅವರು ಡಿ ಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಜೊತೆಗೆ ಓಡಾಡುವಾಗಲೇ ಗುಮಾನಿ ಇತ್ತು. ಜನ ಅವರನ್ನು ಕ್ಷಮಿಸಲ್ಲ. ಅವರನ್ನು ಮಂತ್ರಿ ಮಾಡಿ, ಮೈಸೂರು ಉಸ್ತುವಾರಿ ಮಾಡಿದ್ದೆವು. ಅಭಿವೃದ್ಧಿಗೆ ಹಣ ಅಂತಾರೆ. ಹಿಂದೆ ಎಷ್ಟು ಬಾರಿ ಹಣ ಕೊಟ್ಟಿಲ್ಲ? ಇಂದು ಸೋಮಶೇಖರ್ ರಾಜಕೀಯವಾಗಿ ಸೂಸೈಡ್ ಮಾಡಿಕೊಂಡಿದ್ದಾರೆ” ಎಂದರು.

ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ‘ಪ್ರಸಾದ ಬೇಡ ಬಸ್ ಬೇಕು’ ಎಂದ ಬಾಲಕಿಯ ಮನವಿಯಲ್ಲಿದೆ ಮಹತ್ವದ ಸಂದೇಶ

ಎನ್​ ರವಿಕುಮಾರ್​ ಕಿಡಿ

“ನಮ್ಮ ಇಬ್ಬರು ಶಾಸಕರ ಮತ ಪಡೆಯಲು ಕಾಂಗ್ರೆಸ್ ದುಷ್ಟರಾಜಕಾರಣ ಮಾಡಿದೆ. ಕಾಂಗ್ರೆಸ್​ಗೆ ಮತ ಹಾಕಿದವರಿಗೆ ಇದು ಆತ್ಮದ್ರೋಹ ಎಂದು ಹೇಳುತ್ತೇವೆ. ಅವರಾಗಿಯೇ ಬಂದು ಪಕ್ಷ ಸೇರಿದರು, ಅಧಿಕಾರ ಅನುಭವಿಸಿದರು. ಮುಂದಿನ ದಿನಗಳಲ್ಲಿ ಆ ಎರಡೂ ಕ್ಷೇತ್ರದಲ್ಲಿ ನಾವು ಗೆಲ್ಲುತ್ತೇವೆ” ಎಂದು ವಿಧಾನ‌ ಪರಿಷತ್‌ನ ಬಿಜೆಪಿ ಸದಸ್ಯ ಎನ್​ ರವಿಕುಮಾರ್ ಹೇಳಿದರು.

ಎಸ್​ ಟಿ ಸೋಮಶೇಖರ್​​, ಶಿವರಾಮ್​ ಹೆಬ್ಬಾರ್ ವಿರುದ್ಧ ನಮ್ಮ ಪಕ್ಷದ ರಾಜ್ಯಾಧ್ಯಕ್ಷರು, ಕರ್ನಾಟಕದ ಉಸ್ತುವಾರಿಗಳು ಹೈಕಮಾಂಡ್​​ಗೆ ದೂರು ನೀಡಲಿದ್ದಾರೆ. ಪಕ್ಷದಲ್ಲಿ ಇಬ್ಬರೂ ಶಾಸಕರಿಗೂ ಯಾವುದೇ ಸಮಸ್ಯೆ ಆಗಿರಲಿಲ್ಲ. ಇದು ಅನುಕೂಲ ಸಿಂಧು ರಾಜಕಾರಣ ಎಂದು ಹೇಳಿದರು.

ರಾಜಕಾರಣದ ವ್ಯಭಿಚಾರ: ಸಿ ಟಿ ರವಿ

“ವ್ಯಕ್ತಿಯ ಸಂಬಂಧಕ್ಕಾಗಿ ರಾಜೀ ರಾಜಕಾರಣ ಒಳ್ಳೆಯದ್ದಲ್ಲ. ರಾಜಕಾರಣ ವ್ಯಭಿಚಾರ ಮಾಡುವವರು ಎಲ್ಲಾ ಕಡೆ ಸೆಟ್ ಆಗುತ್ತಾರೆ. ಹಾರ್ಡ್​ಕೋರ್, ಸಿದ್ಧಾಂತ ರಾಜಕಾರಣ ಮಾಡುವುದು ನಿಷ್ಠೂರ ಆಗುತ್ತಾರೆ. ವ್ಯಭಿಚಾರದ ರಾಜಕಾರಣಕ್ಕೆ ಯಾರೂ ಮಣೆ ಹಾಕಬಾರದು. ಪಕ್ಷದೊಳಗಿದ್ದು ರಾಜಕೀಯ ವ್ಯಭಿಚಾರ ಮಾಡುವುದು ಶೂನ್ಯ ಸಹನೆ” ಎಂದು ಸಿ ಟಿ ರವಿ ವಾಗ್ದಾಳಿ ನಡೆಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

Download Eedina App Android / iOS

X