ದಾವಣಗೆರೆ | ಎರಡು ಕ್ವಿಂಟಲ್ ಬೆಳ್ಳುಳ್ಳಿ ಕದ್ದ ಕಳ್ಳರು; ರೈತ ಕಂಗಾಲು

Date:

Advertisements

ಈವರೆಗೆ ದಾವಣಗೆರೆ ಜಿಲ್ಲೆಯ ವ್ಯಾಪ್ತಿಯಲ್ಲಿ ಅಡಿಕೆ, ತೆಂಗಿನಕಾಯಿಗಳನ್ನು ಕುದಿಯುತ್ತಿದ್ದ ಕಳ್ಳರು, ಈಗ ಬೆಳ್ಳುಳ್ಳಿಯನ್ನೂ ಕದಿಯಲಾರಂಭಿಸಿದ್ದಾರೆ ಬೆಲೆ ಏರಿಕೆಯಾಗುತ್ತಿರುವ ಫಸಲುಗಳನ್ನು ಕದಿಯುತ್ತಿರುವ ಕಳ್ಳರು, ಹರಿಹರ ತಾಲೂಕಿನ ಕಡರನಾಯ್ಕನಹಳ್ಳಿಯಲ್ಲಿ ಬೆಳ್ಳುಳ್ಳಿ ಕದಿದ್ದಾರೆ. ಬೆಳ್ಳುಳ್ಳಿ ಕಳವಾಗಿರುವುದು ರೈತರಲ್ಲಿ ಆತಂಕ ಹುಟ್ಟುಹಾಕಿದೆ.

ಕಡರನಾಯ್ಕನಹಳ್ಳಿಯ ಚಂದ್ರಮ್ಮ ಎಂಬುವವರು ಎರಡು ಎಕರೆ ಜಮೀನನ್ನು ಗುತ್ತಿಗೆ ಪಡೆದಿದ್ದರು. ಮಳೆಯಾಗದೇ ನೀರಿಲ್ಲದೇ ಬರಗಾಲದಲ್ಲೂ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಬೆಳ್ಳುಳ್ಳಿ ಬೆಳೆದಿದ್ದರು. ಆದರೆ, ಮಂಗಳವಾರ (ಫೆ.27) ಬೆಳಗಿನ ಜಾವ ಸುಮಾರು ಎರಡು ಕ್ವಿಂಟಲ್ ತೂಕದ ಬೆಳ್ಳುಳ್ಳಿಯನ್ನು ದುಷ್ಕರ್ಮಿಗಳು ಕದ್ಯೋಯ್ದಿದ್ದಾರೆ.

ಕಳ್ಳತನವಾಗಿರುವ ಬೆಳ್ಳುಳ್ಳಿ ಮೌಲ್ಯ ಸುಮಾರು 80,000ರೂ. ಎಂದು ಅಂದಾಜು ಮಾಡಲಾಗಿದೆ. ಗ್ರಾಮದಲ್ಲಿ ರೇಣುಕಾ ಯಲ್ಲಮ್ಮನ ಜಾತ್ರೆಯ ನಡೆಯುತ್ತಿತ್ತು ಈ ಸಂದರ್ಭದಲ್ಲಿ ಈ ಘಟನೆ ನಡದಿದೆ ಎನ್ನುತ್ತಿದ್ದಾರೆ ಗ್ರಾಮಸ್ಥರು.

Advertisements

ಈ ಗ್ರಾಮದ ಸುತ್ತಮುತ್ತಲ ಪ್ರದೇಶದಲ್ಲಿ ಈರುಳ್ಳಿ, ಬೆಳ್ಳುಳ್ಳಿ ಹಾಗೂ ತರಕಾರಿ ಬೆಳೆಗಳನ್ನು ಹೆಚ್ಚಾಗಿ ಬೆಳೆಯಲಾಗುತ್ತದೆ. ಭದ್ರಾ ಅಚ್ಚುಕಟ್ಟು ಪ್ರದೇಶವಾಗಿದ್ದೂ, ಕಾಲುವೆ ನೀರು ಇಲ್ಲಿಗೆ ತಲುಪುವುದಿಲ್ಲ. ಮಳೆಯಾಶ್ರಿತ ಬೆಳೆಗಳ ಮೇಲೆ ರೈತರು ಅವಲಂಬಿತರಾಗಿದ್ದಾರೆ.

ಬೋರ್‌ವೆಲ್ ನೀರು ಬಳಸಿ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಬೆಳೆದ ಬೆಳೆಗಳಿಗೆ ಇಂತಹ ಪರಿಸ್ಥಿತಿ ಎದುರಾದರೆ ರೈತರು ಫಸಲನ್ನು ಹೇಗೆ ರಕ್ಷಣೆ ಮಾಡಿಕೊಳ್ಳಬೇಕು ಎಂದು ರೈತರು ಕಣ್ಣೀರಾಗುತ್ತಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X