ಕುಡಿಯುವ ನೀರು ಕೊಡದೆ ಯಾವ ಬ್ರ್ಯಾಂಡ್ ಬೆಂಗಳೂರು ಮಾಡ್ತೀರಾ; ಮೋಹನ್ ದಾಸರಿ ಪ್ರಶ್ನೆ

Date:

Advertisements

ಟ್ಯಾಂಕರ್ ಮಾಫಿಯಾದಲ್ಲಿ ಕಾರ್ಪೊರೇಟರ್‌ಗಳು, ಮಾಜಿ ಕಾರ್ಪೊರೇಟರ್‌ಗಳು, ಶಾಸಕರ ಸಂಬಂಧಿಗಳು ಮತ್ತು ಶಾಸಕರ ಹಿಂದೆ ಮುಂದೆ ತಿರುಗುವವರೇ ಇದ್ದಾರೆ. ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಇದೆಲ್ಲವೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಮೂಗಿನ ನೇರಕ್ಕೆ ನಡೆಯುತ್ತಿದ್ದರೂ ಕಂಡೂ ಕಾಣದಂತಿರುವುದು ಅನುಮಾನ ಹುಟ್ಟಿಸುತ್ತಿದೆ. ಮಾಫಿಯಾದಲ್ಲಿ ಶಿವಕುಮಾರ್ ಪಾತ್ರದ ಬಗ್ಗೆ ಶಂಕೆ ಮೂಡುತ್ತದೆ ಎಂದು ಆಮ್ ಆದ್ಮಿ ಪಾರ್ಟಿ ರಾಜ್ಯ ಸಂಘಟನಾ ಕಾರ್ಯದರ್ಶಿ ಮೋಹನ್ ದಾಸರಿ ಹೇಳಿದರು.

ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಕಾವೇರಿ ನೀರಿಗೆ ಪರ್ಯಾಯವಾಗಿ ಬಿಡಬ್ಲ್ಯುಎಸ್‌ಎಸ್‌ಬಿ ಏನನ್ನೂ ಮಾಡಿಲ್ಲ. ಇಡೀ ಬೆಂಗಳೂರಿನಲ್ಲಿ ಬಿಡಬ್ಲ್ಯುಎಸ್‌ಎಸ್‌ಬಿ 108 ಬೋರ್‌ವೆಲ್‌ಗಳನ್ನು ಮಾತ್ರ ಹಾಕಿಸಿದೆ ಎನ್ನುವುದು ಮಾಹಿತಿ ಹಕ್ಕು ಕಾಯ್ದೆಯಡಿ ತಿಳಿದುಬಂದಿದೆ. ಇದರರ್ಥ ಬಿಡಬ್ಲ್ಯುಎಸ್‌ಎಸ್‌ಬಿ ಬೆಂಗಳೂರಿಗೆ ಸಂಪೂರ್ಣವಾಗಿ ನೀರು ಸರಬರಾಜು ಮಾಡಲು ಕೆಲಸವನ್ನೇ ಮಾಡಿಲ್ಲ” ಎಂದರು.

“ಕಾವೇರಿ ನೀರು ಬೆಂಗಳೂರಿನ ಎಲ್ಲ ಮನೆಗಳಿಗೂ ತಲುಪುತ್ತಿಲ್ಲ. ಬಿಬಿಎಂಪಿ ಕೂಡ 1,534 ಬೋರ್‌ವೆಲ್‌ಗಳನ್ನು ಕೊರೆಸಿದ್ದು, ಈ ಎರಡೂ ಸಂಸ್ಥೆಗಳು ಎಲ್ಲ ಮನೆಗಳಿಗೂ ನೀರು ಒದಗಿಸುವಲ್ಲಿ ಸಂಪೂರ್ಣವಾಗಿ ವಿಫಲವಾಗಿವೆ. ಅನಧಿಕೃತ ಟ್ಯಾಂಕರ್ ಮಾಫಿಯಾದಲ್ಲಿ ಸಕ್ರಿಯವಾಗಿ ಕೆಲಸ ಮಾಡುತ್ತಿವೆ” ಎಂದರು.

Advertisements

“ಟ್ಯಾಂಕರ್ ನೀರು ಸರಬರಾಜು ಅನಧಿಕೃತ, ಇದಕ್ಕೆ ಕಾನೂನಿನಲ್ಲಿ ಅನುಮತಿಯೇ ಇಲ್ಲ. ಆದರೂ ಬೆಂಗಳೂರಿನಲ್ಲಿ ನೀರು ಸರಬರಾಜು ಮಾಫಿಯಾ ತೀವ್ರವಾಗಿದೆ ಎಂದರು. ಬೇಸಿಗೆ ಆರಂಭವಾಗುವ ಮುನ್ನವೇ ₹600 ಇರಬೇಕಿದ್ದ ಟ್ಯಾಂಕರ್ ನೀರಿನ ಬೆಲೆ ₹3000 ದವರೆಗೆ ಮುಟ್ಟಿದೆ” ಎಂದರು.

“ಡಿ.ಕೆ. ಶಿವಕುಮಾರ್ ಅವರೇ ಕುಡಿಯುವ ನೀರು ಅತ್ಯಗತ್ಯ ಎಷ್ಟಿದೆ ಎಂದು ಗೊತ್ತಿದೆ. ಕುಡಿಯುವ ನೀರಿದ್ದರೆ ಅಲ್ಲವೇ ಬ್ರ್ಯಾಂಡ್ ಬೆಂಗಳೂರು ಮಾಡಲು ಸಾಧ್ಯ. ಸರ್ಕಾರ ಟ್ಯಾಂಕರ್ ಮಾಫಿಯಾಗೆ ಕಡಿವಾಣ ಹಾಕಬೇಕು. ಅವರಿಗೆ ತೆರಿಗೆ ವಿಧಿಸಬೇಕು. ಉಚಿತವಾಗಿ ನೀರು ಕೊಡಲು ಆಗದೇ ಇದ್ದರೂ, ಕಡಿಮೆ ಬೆಲೆಯಲ್ಲಿ ನೀರು ಕೊಡುವ ವ್ಯವಸ್ಥೆ ಮಾಡಿ. ಇಲ್ಲವಾದರೆ ನಿಮ್ಮ ಮನೆ ಬಳಿಗೆ ಬಂದು ಜನ ನೀರು ಕೊಡಿ ಎನ್ನುತ್ತಾರೆ” ಎಂದು ಎಚ್ಚರಿಕೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಶೇ.60ರಷ್ಟು ಕನ್ನಡ ಭಾಷೆಯ ನಾಮಫಲಕ ಹಾಕಲು ಬುಧವಾರವೇ ಕೊನೆ ದಿನ

“ನೀವೇ ಒಂದು ಮೊಬೈಲ್ ಆಪ್ ಸಿದ್ದಮಾಡಿ ಟ್ಯಾಂಕರ್ ಬುಕ್ ಮಾಡಲು ಅವಕಾಶ ಕೊಡಿ. ಸಹಾಯವಾಣಿ ಸಂಖ್ಯೆಯನ್ನು ಕೊಟ್ಟು, ಜನರ ಸಮಸ್ಯೆಗೆ ಸ್ಪಂದಿಸಿ. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ನೀರಿಗಾಗಿ ದೊಡ್ಡ ಜಗಳವೇ ನಡೆದರೂ ಅಚ್ಚರಿ ಇಲ್ಲ” ಎಂದರು.

ಎಎಪಿಯ ಬೆಂಗಳೂರು ನಗರಾಧ್ಯಕ್ಷರಾದ ಡಾ. ಸತೀಶ್ ಮಾತನಾಡಿ, “ಜಲಮಂಡಳಿ ಅಧಿಕಾರಿಗಳು ಮತ್ತು ನಗರಾಭಿವೃದ್ಧಿ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ 110 ಹಳ್ಳಿಗಳಿಗೆ 131 ಕೋಟಿ ರೂ.ಗಳನ್ನು ಕೊಳವೆಬಾವಿ ಕೊರೆಸಲು ಅನುದಾನ ಕೊಡುತ್ತಿರುವುದು ಸಾಕಾಗುವುದಿಲ್ಲ. ಬೆಂಗಳೂರಿನಲ್ಲಿ ಕೇವಲ 150 ಸ್ಥಳಗಳಲ್ಲಿ ಮಾತ್ರ ನೀರಿನ ಸಮಸ್ಯೆ ಇದೆ ಎಂದು ಹೇಳಿಕೆ ನೀಡಿದ್ದಾರೆ. ಇದು ಸುಳ್ಳು. ಒಂದು ವಿಧಾನಸಭೆ ಕ್ಷೇತ್ರದಲ್ಲಿ 50 ಕಡೆಗಳಲ್ಲಿ ನೀರಿನ ಸಮಸ್ಯೆ ಇದೆ” ಎಂದು ಹೇಳಿದರು.

ಎಎಪಿಯ ಬೆಂಗಳೂರು ಮಾಧ್ಯಮ ಉಸ್ತುವಾರಿ ಅನಿಲ್ ನಾಚಪ್ಪ, ಬೆಂಗಳೂರು ಸಂಘಟನಾ ಕಾರ್ಯದರ್ಶಿ ಅಶೋಕ್ ಮೃತ್ಯುಂಜಯ, ಮಹಿಳಾ ಮುಖಂಡ ಸತ್ಯವತಿ ಮಾಧ್ಯಮ ಗೋಷ್ಠಿಯಲ್ಲಿ ಹಾಜರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X