ಹಾಸನ | ಆಕಸ್ಮಿಕ ಬೆಂಕಿ; ನೂರಾರು ಎಕರೆ ಕಾಫಿ ತೋಟ ಬೆಂಕಿಗಾಹುತಿ

Date:

Advertisements
  • 100 ಎಕರೆಗೂ ಹೆಚ್ಚು ಪ್ರದೇಶದ ಕಾಫಿ ಗಿಡಗಳಿಗೆ ಹಾನಿ
  • ಅಗ್ನಿ ಅವಘಡ ಕಂಡು ಕಣ್ಣೀರಿಟ್ಟ ತೋಟದ ಮಾಲೀಕರು  

ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಅಪಾರ ಪ್ರಮಾಣ ಕಾಫಿ ತೋಟ ಸುಟ್ಟುಹೋಗಿರುವ ಘಟನೆ ಹಾಸನ ಸಕಲೇಶಪುರ ತಾಲೂಕಿನಲ್ಲಿ ನಡೆದಿದೆ.

ತಾಲೂಕಿನ ಹೆತ್ತೂರು ಹೋಬಳಿ ವಳಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸಹಳ್ಳಿ ಗ್ರಾಮದಲ್ಲಿ ನೂರಾರು ಎಕರೆ ಕಾಫಿ ತೋಟ ಬೆಂಕಿಗೆ ಆಹುತಿಯಾಗಿದೆ.

ಸಕಲೇಶಪುರ

ಹೊಸಹಳ್ಳಿ ಗ್ರಾಮದ ಕಾಫಿ ಬೆಳೆಗಾರರಾದ ಮಲ್ಲೇಶ್, ಪಾರ್ವತಮ್ಮ, ಹಾದಿಮನೆ ಜಗ, ಚೀರಿ ಸುರೇಶ್, ತಮ್ಮಣ್ಣ ಎಂಬುವರಿಗೆ ಸೇರಿದ ಅಂದಾಜು 100 ಎಕರೆಗೂ ಹೆಚ್ಚು ಪ್ರದೇಶದಲ್ಲಿ ಬೆಳೆದಿದ್ದ ಕಾಫಿ ಗಿಡಗಳು ಸುಟ್ಟು ಹೋಗಿವೆ. ಇದರಿಂದಾಗಿ ಅಪಾರ ಪ್ರಮಾಣದ ನಷ್ಟವುಂಟಾಗಿದೆ.

Advertisements

ಹೊಸಹಳ್ಳಿ ಗ್ರಾಮದ ಥಾಳನೇರಿ ಗುಡ್ಡದ ಸುತ್ತಮುತ್ತ ಭಾನುವಾರ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡು ತೋಟದಲ್ಲಿ ವ್ಯಾಪಿಸಿದೆ. ಅಕ್ಕಪಕ್ಕದವರ ತೋಟಗಳಿಗೂ ಬೆಂಕಿ ತಗುಲಿದೆ.

ಸಕಲೇಶಪುರ

ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಮಾಲೀಕರು ಬೆಂಕಿ ನಂದಿಸಲು ಪ್ರಯತ್ನಿಸುವ ಹೊತ್ತಿಗಾಗಲೇ ಅಪಾರ ಪ್ರಮಾಣದಲ್ಲಿ ಹಾನಿ ಉಂಟಾಗಿದೆ. ಕಾಫಿ ಗಿಡಗಳ ಜೊತೆಗೆ ಬೆಲೆ ಬಾಳುವ ಮರಗಳು, ಕಾಳು ಮೆಣಸಿನ ಬಳ್ಳಿ ಬೆಂಕಿಗೆ ಆಹುತಿಯಾಗಿವೆ.

ಈ ಸುದ್ದಿ ಓದಿದ್ದೀರಾ? ಬಾಗಲಕೋಟೆ | ಸೇತುವೆಗೆ ಲಾರಿ ಡಿಕ್ಕಿ; ಒಂದೇ ಕುಟುಂಬದ ಮೂವರು ಸಾವು

ಫಸಲು ನೀಡುವಷ್ಟು ಮಟ್ಟಕ್ಕೆ ಬೆಳೆದು ನಿಂತಿದ್ದ ಕಾಫಿ ಗಿಡಗಳು ಬೆಂಕಿಗೆ ಆಹುತಿಯಾಗಿರುವುದು ಕಂಡು ಕಾಫಿ ತೋಟದ ಮಾಲೀಕರು ಕಣ್ಣೀರಿಟ್ಟಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X