ಕನ್ನಡಿಗರಿಗಾದ ತೆರಿಗೆ ಅನ್ಯಾಯ ಸಮರ್ಥಿಸಿಕೊಳ್ಳಲು ಬಿಜೆಪಿಯವರಿಗೆ ನಾಚಿಕೆಯಾಗಬೇಕು: ಸಿಎಂ ಸಿದ್ದರಾಮಯ್ಯ

Date:

Advertisements

ಏಳು ಕೋಟಿ ಕನ್ನಡಿಗರಿಗೆ ಆಗಿರುವ ಅನ್ಯಾಯವನ್ನು ಸಮರ್ಥಿಸಿಕೊಳ್ಳಲು ಬಿಜೆಪಿಯವರಿಗೆ ನಾಚಿಕೆಯಾಗುವುದಿಲ್ಲವೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಾರವಾಗಿಯೇ ಪ್ರಶ್ನಿಸಿದರು.

ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಗೆ ಉತ್ತರ ನೀಡಿದ ಅವರು, “1.40 ಸಾವಿರ ಕೋಟಿ ನಮ್ಮಿಂದ ಕೇಂದ್ರ ಸರ್ಕಾರಕ್ಕೆ ತೆರಿಗೆ ಹೋಗುತ್ತದೆ. 100 ರೂ.ತೆರಿಗೆ ಕೊಟ್ಟರೆ ನಮಗೆ 12 ರೂ.ಗಳು ಮಾತ್ರ ಕೇಂದ್ರದಿಂದ ತೆರಿಗೆ ಬರುತ್ತಿದೆ. ಇದನ್ನು ಸಮರ್ಥಿಸಿಕೊಳ್ಳಲು ಬಿಜೆಪಿ ಗೆ ನಾಚಿಕೆಯಾಗಬೇಕು” ಎಂದರು.

“14ನೇ ಹಣಕಾಸು ಆಯೋಗದಲ್ಲಿ 4.7 % ಹಾಗೂ 15 ನೇ ಹಣಕಾಸು ಆಯೋಗದಲ್ಲಿ 3.64 % ರಾಜ್ಯಕ್ಕೆ ನಿಗಡಿಯಾಗಿ ಶೇ 1.07% ರಷ್ಟು ಕಡಿಮೆಯಾಗಿದೆ. ದೇಶದಲ್ಲಿಯೇ ಅತಿ ಹೆಚ್ಚು ತೆರಿಗೆ ಸಂಗ್ರಹಿಸುವ 2 ನೇ ರಾಜ್ಯವಾಗಿರುವ ಕರ್ನಾಟಕಕ್ಕೆ ಅತಿ ಹೆಚ್ಚು ಅನ್ಯಾಯವಾಗಿದೆ. ಕೇಂದ್ರದ ಅನ್ಯಾಯವನ್ನು ಬೆಂಬಲಿಸುವ ಬಿಜೆಪಿಗೆ ಕನ್ನಡಿಗರ ಬಗ್ಗೆ ಕಾಳಜಿ ಇದೆಯೇ?” ಎಂದು ಕೇಳಿದರು.

Advertisements

ಇದೇ ವೇಳೆಗೆ ಮೋದಿ ಮೋದಿ, ಜೈ ಶ್ರೀ ರಾಮ್ ಎಂದು ಕೂಗು ಹಾಕುತ್ತಿದ್ದ ವಿರೋಧಪಕ್ಷದವರನ್ನು ಉದ್ದೇಶಿಸಿ, “ನಿಮ್ಮದು ಕೇವಲ ನಿಶಕ್ತಿ. ಮೋದಿ ಹೆಸರಿನ ಮೇಲೆ ನಡೆಸುತ್ತಿದ್ದೀರಿ. ಸಮಾಜ ಒಡೆಯುವ ಕೆಲ್ಸ ನಿಮ್ಮದು. ನಾವು ಜೈ ಸೀತಾ ರಾಮ್ ಎನ್ನುತ್ತೇವೆ” ಎಂದು ಮುಖ್ಯಮಂತ್ರಿಗಳು ಘೋಷಣೆ ಕೂಗಿದರು.

“ಬಿಜೆಪಿಗೆ ತಲೆ ಖಾಲಿ, ಮಿದುಳು ಇಲ್ಲ. ರಾಮಾಯಾಣ, ಮಹಾಭಾರತ ಓದಿಕೊಂಡೇ ಇಲ್ಲ. 15ನೇ ಹಣಕಾಸು ಆಯೋಗ ಬಂದಾಗ ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದರು. ನಮಗೆ ದೊಡ್ಡ ಅನ್ಯಾಯ ಆಯಿತು. ನಾನು 14 ನೇ ಹಣಕಾಸು ಆಯೋಗದಲ್ಲಿ ಮುಖ್ಯಮಂತ್ರಿ ಆಗಿದ್ದೆ. ನಮಗೆ ಇಷ್ಟೊಂದು ಅನ್ಯಾಯ ಆಗಲಿಲ್ಲ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಭುತ್ವ ಪೋಷಿತ ಮೈತೇಯಿ ಮಿಲಿಟೆಂಟ್‌ ಅಟ್ಟಹಾಸ ಮತ್ತು ಮಣಿಪುರ ಪೊಲೀಸರ ಅಸಹಾಯಕತೆ

ಬೆಲೆ ಏರಿಕೆ, ಸಂಕಷ್ಟಕ್ಕೆ ಗ್ಯಾರಂಟಿ ಉತ್ತರ

“ಸಬ್‌ ಕಾ ಸಾಥ್‌ ಎಂದವರು ಪೆಟ್ರೋಲ್‌ ಡೀಸೆಲ್‌ ಬೆಲೆ, ಗ್ಯಾಸ್‌ ಬೆಲೆ, ಅಗತ್ಯವಸ್ತುಗಳ ಬೆಲೆ ಏರಿಸಿದರು. ಬಡವರಿಗೆ ನಿರುದ್ಯೋಗ, ಬೆಲೆ ಏರಿಕೆಯಿಂದ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಅವರಿಗೆ ನಾವು ಗ್ಯಾರಂಟಿ ಯೋಜನೆಗಳ ಮೂಲಕ ನಾಲ್ಕರಿಂದ ಐದು ಸಾವಿರ ರೂ. ಕೊಡ್ತಾ ಇದ್ದೀವಿ. 1.2 ಕೋಟಿ ರೂ. ಕುಟುಂಬಗಳು ಅಂದರೆ ಸುಮಾರು 4.5 ಕೋಟಿ ಜನರಿಗೆ ಕೊಡ್ತಾ ಇದ್ದೀವಿ. ಈಗ ಅವರು ನಮ್ಮನ್ನು ಕಾಪಿ ಮಾಡುತ್ತಿದ್ಧಾರೆ” ಎಂದು ಹೇಳಿದರು.

“ಆರ್.ಎಸ್.ಎಸ್.ನವರಿಗೆ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿ ಗೊತ್ತಿಲ್ಲ. ಸ್ವಾತಂತ್ರ್ಯ ಹೋರಾಟ ತೀವ್ರಗೊಂಡಿದ್ದಾಗಲೂ ಸಂಘ ಪರಿವಾರದ ಹೆಡಗೇವಾರ್ ಆಗಲಿ, ಗೋಲ್ವಾಲ್ಕರ್ ಆಗಲಿ ಪಾಲ್ಗೊಂಡಿಲ್ಲ. ಬಿಜೆಪಿ ಯಿಂದ ನಾವು ದೇಶಭಕ್ತಿಯ ಪಾಠ ಕಲಿಯಬೇಕಿಲ್ಲ. ಧರ್ಮದ ಹೆಸರಿನಲ್ಲಿ ದೇಶ ಹಾಗೂ ಸಮಾಜವನ್ನು ಒಡೆಯುವವರು ಬಿಜೆಪಿಯವರು” ಎಂದು ಕಿಡಿಕಾರಿದರು.

“ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿಯ ಇಬ್ಬರು ಕಾಂಗ್ರೆಸ್ ಪರವಾಗಿದ್ದುದ್ದನ್ನು ಮರೆ ಮಾಚಲು ವಿಧಾನ ಸಭೆಯಲ್ಲಿ ಗದ್ದಲ ಎಬ್ಬಿಸಿದ್ದಾರೆ. ಪೈಪೋಟಿಗೆ ಬಿದ್ದಂತೆ ಕೇಂದ್ರ ಸರ್ಕಾರವನ್ನು ಹೊಗಳಿದ್ದಾರೆ. ಜೆಡಿಎಸ್ ತಮ್ಮ ಪಕ್ಷದ ಹೆಸರಿನಲ್ಲಿರುವ “ಎಸ್” ನ್ನು ತೆಗೆದುಹಾಕುವುದು ಉತ್ತಮ. ಏಕೆಂದರೆ ಅದು ಈಗ ಜಾತ್ಯತೀತ ವಾಗಿ ಉಳಿದಿಲ್ಲ” ಎಂದು ಕುಟುಕಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X