ತೆಲಂಗಾಣ | ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದ ರೈತನನ್ನು 2 ಕಿ.ಮಿ ಹೊತ್ತು ಜೀವ ಉಳಿಸಿದ ಪೊಲೀಸ್

Date:

Advertisements

ಪೊಲೀಸರು ಕಾನೂನು ಪಾಲನೆ ಮಾತ್ರವಲ್ಲದೆ ಸಾಮಾಜಿಕ ಸೇವೆಯನ್ನು ಕೈಗೊಳ್ಳುತ್ತಾರೆ ಎಂಬುದಕ್ಕೆ ಈ ಪ್ರತ್ಯಕ್ಷ ಘಟನೆ ಸಾಕ್ಷಿಯಾಗಿದೆ. ಕೀಟನಾಶಕ ಕುಡಿದು ಆತ್ಮಹತ್ಯೆಗೆ ಯತ್ನಿಸಿ ಜೀವನ್ಮರಣ ಹೋರಾಟ ನಡೆಸುತ್ತಿದ್ದ ರೈತರೊಬ್ಬರನ್ನು ಕಾನ್ಸ್‌ಟೇಬಲ್‌ ಒಬ್ಬರು ತನ್ನ ಭುಜದ ಮೇಲೆ 2 ಕಿ.ಮೀ ಹೊತ್ತು ಪ್ರಾಣ ಉಳಿಸಿದ್ದಾರೆ. ಈ ಘಟನೆಯು ತೆಲಂಗಾಣ ಕರೀಮ್‌ ನಗರದ ವೀನಾವನಕ ಮಂಡಲ್‌ನ ಬೇತಿಗಲ್‌ ಗ್ರಾಮದಲ್ಲಿ ನಡೆದಿದೆ.

ಮನೆಯಲ್ಲಿ ಉಂಟಾದ ಜಗಳದಿಂದಾಗಿ ರೈತರೊಬ್ಬರು ತಮ್ಮ ಜಮೀನಿನಲ್ಲಿ ಕೀಟನಾಶಕ ಸೇವಿಸಿ ಹೊರಳಾಡುತ್ತಿದ್ದರು. ರೈತನ ಪರಿಸ್ಥಿಯನ್ನು ಗಮನಿಸಿದ ಹತ್ತಿರದಲ್ಲಿದ್ದ ಇತರ ರೈತರು ಆರೋಗ್ಯ ತುರ್ತು ಸೇವೆಗೆ ಮಾಹಿತಿ ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಆಂಧ್ರ ಪ್ರದೇಶ | ವಿಧಾನಸಭೆಯಿಂದ 8 ಶಾಸಕರು ಅನರ್ಹ

Advertisements

ಸಂಕಷ್ಟದ ತುರ್ತು ಕರೆಗೆ ಪ್ರತಿಕ್ರಿಯೆ ನೀಡಿ ಆಗಮಿಸಿದ ಕಾನ್ಸ್‌ಟೇಬಲ್ ಜಯ್‌ಪಾಲ್ ಅವರು ಹೊಲದಲ್ಲಿ ಪ್ರಜ್ಞೆತಪ್ಪಿ ಬಿದ್ದಿದ್ದ ರೈತನನ್ನು ಗಮನಿಸಿದರು. ಯಾವುದೇ ಹಿಂಜರಿಕೆಯಿಲ್ಲದೆ ಜಯಪಾಲ್‌ ಅವರು ತನ್ನ ಭುಜದ ಮೇಲೆ ರೈತನನ್ನು ಹೊತ್ತು ಹೊಲಗಳ ಕಾಲುದಾರಿಗಳ ನಡುವೆಯೆ ಎರಡು ಕಿ.ಮೀ ಸಾಗಿದರು.

ಜಯ್‌ಪಾಲ್‌ ರೈತನನ್ನು ಸುರಕ್ಷಿತವಾಗಿ ಸ್ಥಳೀಯ ಜಮ್ಮಿಕುಂಟ ಆಸ್ಪತ್ರೆಗೆ ದಾಖಲಿಸಿದರು. ಸಮಯಕ್ಕೆ ಸರಿಯಾಗಿ ರೈತನನ್ನು ದಾಖಲಿಸಿದ ಕಾರಣ ವೈದ್ಯರು ತುರ್ತು ಚಿಕಿತ್ಸೆ ನೀಡಿ ಪ್ರಾಣಾಪಾಯದಿಂದ ಪಾರು ಮಾಡಿದ್ದಾರೆ. ತುರ್ತು ಸಮಯದಲ್ಲಿ ರೈತನ ಪ್ರಾಣ ಉಳಿಸಿದ್ದಕ್ಕೆ ಜಯಪಾಲ್‌ ಅವರನ್ನು ಸ್ಥಳೀಯ ಜನಪ್ರತಿನಿಧಿಗಳು, ನೆಟ್ಟಿಗರು ಸಾಮಾಜಿಕ ಜಾಲತಾಣದಲ್ಲಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X