ಶಹಜಹಾನ್ ಶೇಖ್‌ನನ್ನು 6 ವರ್ಷಗಳ ಕಾಲ ಅಮಾನತುಗೊಳಿಸಿದ ಟಿಎಂಸಿ

Date:

Advertisements

ಪಶ್ಚಿಮ ಬಂಗಾಳ ಪೊಲೀಸರು ಸಂದೇಶ್‌ಖಾಲಿ ಹಾಗೂ ಇ.ಡಿ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಶೇಖ್ ಶಹಜಹಾನ್‌ನನ್ನು ಬಂಧಿಸಿದ ನಂತರ ಟಿಎಂಸಿ ಶಹಜಹಾನ್‌ನನ್ನು ಪಕ್ಷದಿಂದ ಆರು ವರ್ಷಗಳ ಕಾಲ ಅಮಾನತುಗೊಳಿಸಿದೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಟಿಎಂಸಿ ಸಂಸದ ಡೆರಿಕ್ ಓ ಬ್ರಿಯೆನ್, “ನಾವು ಶೇಖ್ ಶಹಜಹಾನ್‌ನನ್ನು 6 ವರ್ಷಗಳ ಕಾಲ ಅಮಾನತುಗೊಳಿಸಲು ನಿರ್ಧರಿಸಿದ್ದೇವೆ. ಹೇಳಿದ ಮಾತಿನಂತೆ ನಾವು ನೆಡೆಯುತ್ತೇವೆ. ನಾವು ಹಿಂದೆ ಹೇಳಿದ್ದನ್ನು ಈಗ ಮಾಡುತ್ತಿದ್ದೇವೆ” ಎಂದು ತಿಳಿಸಿದರು.

“ಭ್ರಷ್ಟಾಚಾರ ಪ್ರಕರಣಗಳು, ಹಲವು ಕ್ರಿಮಿನಲ್ ಪ್ರಕರಣಗಳಿರುವ ಆರೋಪಿಗಳನ್ನು ಅಮಾನತುಗೊಳಿಸಿದ್ದೇವೆ. ಆದರೆ ಬಿಜೆಪಿ ಈ ಧೈರ್ಯವನ್ನು ತೋರಿಸಬೇಕು.ನೀವು ಯಾರೆ ಆಗಿದ್ದರೂ ಜನರಿಗೆ ತೊಂದರೆ ನೀಡಿದ್ದರೆ ನಿಮ್ಮ ವಿರುದ್ಧ ಕ್ರಮ ಜರುಗಿಸುತ್ತೇವೆ ಎಂಬುದನ್ನು ತೋರಿಸಿದ್ದೇವೆ.  ನಮ್ಮಿಂದ ಅಮಾನತುಗೊಂಡವರು ನರೇಂದ್ರ ಮೋದಿ ಅವರ ಸಭೆಗಳಲ್ಲಿ ಪಾಲ್ಗೊಂಡರೆ ನಮಗೆ ಯಾವುದೇ ಆಶ್ಚರ್ಯ ಉಂಟಾಗುವುದಿಲ್ಲ” ಎಂದು ಡೆರಿಕ್ ಓ ಬ್ರಿಯೆನ್ ತಿಳಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಭುತ್ವ ಪೋಷಿತ ಮೈತೇಯಿ ಮಿಲಿಟೆಂಟ್‌ ಅಟ್ಟಹಾಸ ಮತ್ತು ಮಣಿಪುರ ಪೊಲೀಸರ ಅಸಹಾಯಕತೆ

ಶೇಖ್ ಶಹಜಹಾನ್‌ ಸಂದೇಶ್‌ಖಾಲಿ ವಿಧಾನಸಭೆಯ ಪಕ್ಷದ ವಕ್ತಾರನಾಗಿದ್ದು, ಟಿಎಂಸಿಯ 24 ಉತ್ತರ ಪರಗಣದ ಜಿಲ್ಲಾ ಪರಿಷತ್‌ನ ಸದಸ್ಯನಾಗಿದ್ದಾನೆ.

ಸಂದೇಶ್‌ಖಾಲಿ ಹಾಗೂ ಇ.ಡಿ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಳಿಗ್ಗೆ 53 ವರ್ಷದ ಶೇಖ್ ಶಹಜಹಾನ್‌ನ್ನು ಬಂಧಿಸಲಾಗಿದ್ದು, 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ. ಇ.ಡಿ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ ನಂತರ ಈತ ಕಳೆದ 55 ದಿನಗಳಿಂದ ಪೊಲೀಸರಿಂದ ತಲೆ ತಪ್ಪಿಸಿಕೊಂಡಿದ್ದ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X