ನ್ಯೂಸ್‌ ಚಾನೆಲ್‌ಗಳಲ್ಲಿ ಕೋಮು ದ್ವೇಷ ಪ್ರಸಾರ: ಟೈಮ್ಸ್‌ ನೌ, ನ್ಯೂಸ್‌18ಗೆ ದಂಡ; ಆಜ್ ತಕ್‌ಗೆ ಎಚ್ಚರಿಕೆ

Date:

Advertisements

ದ್ವೇಷ ಮತ್ತು ಕೋಮು ಸೌಹಾರ್ದತೆ ಕದಡುವಂತಹ ಕಾರ್ಯಕ್ರಮಗಳನ್ನು ಪ್ರಸಾರ ಮಾಡಿದ ಟೈಮ್ಸ್‌ ನೌ, ನವಭಾರತ್, ನ್ಯೂಸ್‌18 ಮತ್ತು ಆಚ್‌ ತಕ್ ಸುದ್ದಿ ಚಾನೆಲ್‌ಗಳಿಗೆ ನ್ಯೂಸ್‌ ಬ್ರಾಡ್‌ಕಾಸ್ಟಿಂಗ್‌ ಅಥಾರಿಟಿಯು (ಎನ್‌ಬಿಡಿಎಸ್‌ಎ) ದಂಡ ವಿಧಿಸಿದೆ. ಅಲ್ಲದೆ, ಆ ಕಾರ್ಯಕ್ರಮಗಳನ್ನು ಯೂಟ್ಯೂಬ್‌ಗಳಿಂದ ತೆಗೆಯುವಂತೆ ಆದೇಶಿಸಿದೆ.

ಟೈಮ್ಸ್‌ ನೌಗೆ 1 ಲಕ್ಷ  ರೂ., ನ್ಯೂಸ್‌ 18ಗೆ 50,000 ರೂ. ದಂಡ ವಿಧಿಸಲಾಗಿದೆ. ಆಜ್‌ ತಕ್‌ಗೆ ಎಚ್ಚರಿಕೆ ನೀಡಲಾಗಿದೆ. ಈ ಮೂರು ಚಾನೆಲ್‌ಗಳು ಪ್ರಕಟಿಸಿದ್ದ ದ್ವೇಷ ಮತ್ತು ಕೋಮು ಸೌಹಾರ್ದತೆಗೆ ಧಕ್ಕೆ ತರುವ ಕಾರ್ಯಕ್ರಮಗಳ ಆನ್‌ಲೈನ್ ಆವೃತ್ತಿಗಳನ್ನು ಏಳು ದಿನಗಳಲ್ಲಿ ತೆಗೆದುಹಾಕಬೇಕೆಂದು ಎನ್‌ಬಿಡಿಎಸ್‌ಎ ಮುಖ್ಯಸ್ಥ, ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಾಧೀಶ ಎ.ಕೆ ಸಿಕ್ರಿ ಆದೇಶಿಸಿದ್ದಾರೆ.

ಸಾಮಾಜಿಕ ಕಾರ್ಯಕರ್ತ ಇಂದ್ರಜಿತ್ ಘೋರ್ಪಡೆ ಅವರು ಈ ಮೂರು ಚಾನೆಲ್‌ಗಳ ವಿರುದ್ಧ ಕೋಮುವಾದಿ ಮತ್ತು ಪ್ರಚೋದನಾಕಾರಿ ಕಾರ್ಯಕ್ರಮಗಳನ್ನು ನಡೆಸಿದ ಆರೋಪದ ಮೇಲೆ ದೂರು ದಾಖಲಿಸಿದ್ದರು. ನಿಷ್ಪಕ್ಷಪಾತ, ವಸ್ತುನಿಷ್ಠತೆ, ತಟಸ್ಥತೆ ಮತ್ತು ನಿಖರತೆಗೆ ಸಂಬಂಧಿಸಿದಂತೆ ಈ ಮೂರು ಚಾನೆಲ್‌ಗಳು ನೀತಿ ಸಂಹಿತೆ ಮತ್ತು ಪ್ರಸಾರ ಮಾನದಂಡಗಳ ಉಲ್ಲಂಘನೆ ಉಲ್ಲೇಖಿಸಿದ್ದಾರೆ ಎಂದು ದೂರುದಾರರು ಆರೋಸಿದ್ದರು.

Advertisements

ಟೈಮ್ಸ್‌ ನೌ ಚಾನೆಲ್‌ನಲ್ಲಿ ನಿರೂಪಕ ಹಿಮಾಂಶು ದೀಕ್ಷಿತ್ ಅವರು ಮುಸ್ಲಿಮರನ್ನು ಸಮುದಾಯವಾಗಿ ಗುರಿಯಾಗಿಸಿಕೊಂಡಿದ್ದಾರೆ ಮತ್ತು ಅಂತರ್-ಧರ್ಮೀಯ ಸಂಬಂಧಗಳನ್ನು ‘ಲವ್ ಜಿಹಾದ್’ ಎಂದು ಕರೆದಿದ್ದಾರೆ. ಇದು ಮತ್ತೊಂದು ಕೋಮುವಿನ ವಿರುದ್ಧ ದ್ವೇಷ ಹರಡುತ್ತದೆ ಎಂದು ಹೇಳಿರುವ ಎನ್‌ಬಿಡಿಎಸ್‌ಎ, ಚಾನೆಲ್‌ಗೆ ದಂಡ ವಿಧಿಸಿದೆ

ನ್ಯೂಸ್ 18 ಇಂಡಿಯಾದಲ್ಲಿ ಪ್ರಸಾರವಾಗಿದ್ದ ಮೂರು ಶೋಗಳ ಕಾರಣಕ್ಕಾಗಿ ಸಂಸ್ಥೆಗೆ ದಂಡ ವಿಧಿಸಲಾಗಿದೆ. ಆ ಮೂರು ಕಾರ್ಯಕ್ರಮಗಳಲ್ಲಿ ಎರಡನ್ನು ಅಮನ್ ಚೋಪ್ರಾ ಮತ್ತು ಒಂದನ್ನು ಅಮಿಶ್ ದೇವಗನ್ ನಿರೂಪಿಸಿದ್ದಾರೆ. ಈ ಪ್ರದರ್ಶನಗಳು ಶ್ರದ್ಧಾ ವಾಕರ್ ಹತ್ಯೆ ಪ್ರಕರಣವನ್ನು ‘ಲವ್ ಜಿಹಾದ್’ ಎಂದು ಬಿಂಬಿಸಿವೆ. ಹೀಗಾಗಿ, 50,000 ರೂ. ದಂಡ ವಿಧಿಸಲಾಗಿದೆ.

ಇಂಡಿಯಾ ಟುಡೇ ಗ್ರೂಪ್‌ನ ಆಜ್ ತಕ್ ಚಾನೆಲ್‌ನಲ್ಲಿ ಸುಧೀರ್ ಚೌಧರಿ ನಿರೂಪಿಸಿದ್ದ ಕಾರ್ಯಕ್ರಮದಲ್ಲಿ, ರಾಮನವಮಿ ಸಂದರ್ಭದಲ್ಲಿ ಹಿಂಸಾಚಾರ ನಡೆಸಲಾಗುತ್ತದೆ ಎಂದು ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಿ, ದ್ವೇಷ ಹರಡಲಾಗಿತ್ತು. ಆ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಚಾನೆಲ್‌ಗೆ ಎಚ್ಚರಿಕೆ ನೀಡಲಾಗಿದೆ.

ಎನ್‌ಬಿಡಿಎಸ್‌ಎ ತನ್ನ ಆದೇಶದಲ್ಲಿ ದ್ವೇಷದ ಭಾಷಣ ತಡೆಯುವಿಕೆಗೆ ಸಂಬಂಧಿಸಿದ ಮಾರ್ಗಸೂಚಿಗಳನ್ನು ಉಲ್ಲಂಘನೆ ಮಾಡಲಾಗಿದೆ. ಘಟನೆಗಳನ್ನು ವರದಿ ಮಾಡುವಲ್ಲಿ ಕೋಮುವಾದವನ್ನು ಸೇರಿಸಲಾಗಿದೆ ಎಂಬುದನ್ನು ಉಲ್ಲೇಖಿಸಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X