ಗ್ಯಾರಂಟಿಗಳಿಂದ ನೆಮ್ಮದಿ ಗಳಿಸಿರುವ ಫಲಾನುಭವಿಗಳ ಗಮನ ಬೇರೆಡೆ ಸೆಳೆಯಲು ಬಿಜೆಪಿ ಡ್ರಾಮಾ: ಸಿದ್ದರಾಮಯ್ಯ ಕಿಡಿ

Date:

Advertisements

ಗ್ಯಾರಂಟಿಗಳಿಂದ ನೆಮ್ಮದಿ ಗಳಿಸಿರುವ ಫಲಾನುಭವಿಗಳ ಗಮನ ಬೇರೆಡೆ ಸೆಳೆಯಲು ಬಿಜೆಪಿ ಡ್ರಾಮಾ ಮಾಡುತ್ತಿದೆ. ಬಿಜೆಪಿಯ ಟೀಕೆ ಡ್ರಾಮಾಗಳಿಗೆ ಮರುಳಾಗಬೇಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.‌

ಹಾಸನದಲ್ಲಿ ವಿವಿಧ ಇಲಾಖೆಗಳ ಪೂರ್ಣಗೊಂಡ ಕಾಮಗಾರಿಗಳ ಉದ್ಘಾಟನೆ, ಹೊಸ ಕಾಮಗಾರಿಗಳ ಶಂಕುಸ್ಥಾಪನೆಯನ್ನು ನೆರವೇರಿಸಿ ಮಾತನಾಡಿದರು.

“ರಾಜ್ಯದಲ್ಲಿ ಜನರ ತಲಾ ಆದಾಯ ಹೆಚ್ಚಳವಾಗಿದೆ. ಈ ಜಿಡಿಪಿ ಬೆಳವಣಿಗೆಗೆ ರಾಜ್ಯದಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳು ಕಾರಣ. ಇಡೀ ದೇಶದಲ್ಲಿ 18% GDP ಬೆಳವಣಿಗೆ ಆಗಿ ದೇಶದ ಅಭಿವೃದ್ಧಿಗೆ ಅತಿ ಹೆಚ್ಚು ಕೊಡುಗೆ ನೀಡಿದ ಪ್ರಥಮ ರಾಜ್ಯ ನಮ್ಮದಾಗಿದೆ. ಈ ಬೆಳವಣಿಗೆ ನಮ್ಮ ಗ್ಯಾರಂಟಿ ಯೋಜನೆಗಳ ಫಲ” ಎಂದು ಅಂಕಿ ಅಂಶಗಳ ಸಮೇತ ವಿವರಿಸಿದರು.

Advertisements

“ಹಾಸನ ಜಿಲ್ಲೆಯ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಮಾಡಿದ್ದಕ್ಕಾಗಿ 166 ಕೋಟಿ ಕೊಟ್ಟಿದ್ದೇವೆ. ಈ ಮಟ್ಟದ ಹಣ ಹಾಸನ ಮಹಿಳೆಯರಿಗೆ ಉಳಿತಾಯವಾಗಿದೆ. ಗೃಹಲಕ್ಷ್ಮಿ ಯೋಜನೆಯಡಿ ಹಾಸನ ಜಿಲ್ಲೆಯ ಮಹಿಳೆಯರಿಗೆ 477 ಕೋಟಿ ರೂಪಾಯಿ ನೀಡಿದ್ದೇವೆ. ಈ ಹಣವೂ ಮಹಿಳೆಯರ ಖಾತೆಗೆ ನೇರವಾಗಿ ಹೋಗಿದೆ. ಉಚಿತ ವಿದ್ಯುತ್ ನಿಂದಾಗಿ ಹಾಸನ ಜಿಲ್ಲೆಯೊಂದರಲ್ಲೇ 89 ಕೋಟಿ ರೂಪಾಯಿ ಹಣ ಜನರಿಗೆ ಉಳಿತಾಯವಾಗಿದೆ. ಅನ್ನಭಾಗ್ಯ ಯೋಜನೆಯಡಿಯಲ್ಲಿ 135.33 ಕೋಟಿ ರೂ. ಹಣ ಹಾಸನ ಜಿಲ್ಲೆಗೆ ನೀಡಲಾಗಿದೆ. ಯುವನಿಧಿಯಲ್ಲಿ ಮಾಡಿರುವ ಹಣ ಕೂಡ ಜಿಲ್ಲೆಯ ಯುವಜನತೆಗೆ ಉಳಿತಾಯವಾಗಿದೆ. ಹೀಗೆ ಪ್ರತೀ ಒಂದೊಂದು ಗ್ಯಾರಂಟಿ ಯೋಜನೆಯಲ್ಲಿ ಜಿಲ್ಲೆಯ ಜನರಿಗೆ ನೂರಾರು ಕೋಟಿ ಹಣ ಉಳಿತಾಯವಾಗಿದೆ” ಎಂದು ಅಂಕಿ ಅಂಶಗಳ ಸಮೇತ ವಿವರಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಭುತ್ವ ಪೋಷಿತ ಮೈತೇಯಿ ಮಿಲಿಟೆಂಟ್‌ ಅಟ್ಟಹಾಸ ಮತ್ತು ಮಣಿಪುರ ಪೊಲೀಸರ ಅಸಹಾಯಕತೆ

“ನಮ್ಮ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಜನರು ನೆಮ್ಮದಿ ಕಂಡುಕೊಳ್ಳುತ್ತಿದ್ದಾರೆ. ಈ ಫಲಾನುಭವಿಗಳ ಗಮನ ಬೇರೆಡೆ ಸೆಳೆಯಲು ಬಿಜೆಪಿ ನಾನಾ ಡ್ರಾಮಗಳನ್ನು ಸೃಷ್ಟಿಸುತ್ತಿದೆ, ಭರ್ಜರಿ ನಾಟಕ ಆಡುತ್ತಿದೆ” ಎಂದು ಟೀಕಿಸಿದರು.

“ಹಾಸನದ ಸರ್ವಾಂಗೀಣ ಅಭಿವೃದ್ಧಿಗೆ ಸರ್ಕಾರ ಬದ್ದವಾಗಿದ್ದು, ಏರ್ ಪೋರ್ಟ್ ನಿರ್ಮಾಣಕ್ಕೆ ರಾಜ್ಯದ ಪಾಲಿನ ಹಣವನ್ನು ನಿರಂತರವಾಗಿ ನೀಡುತ್ತಿದೆ. ಅಭಿವೃದ್ಧಿ ವಿಚಾರದಲ್ಲಿ ಪಕ್ಷ ರಾಜಕಾರಣಕ್ಕೆ ಅವಕಾಶ ಕೊಡದೆ ರಾಜ್ಯದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು” ಎಂದರು.

ಡಿಸಿಎಂ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎನ್.ರಾಜಣ್ಣ, ಕೃಷಿ ಸಚಿವರಾದ ಚಲುವರಾಯಸ್ವಾಮಿ, ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶ್, ಶಾಸಕರಾದ ಶಿವಲಿಂಗೇಗೌಡರು ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

Download Eedina App Android / iOS

X