ರಾಮೇಶ್ವರಂ ಕೆಫೆ | ಎನ್‌ಐಎ, ಐಬಿಗೆ ಸ್ಪೋಟದ ಬಗ್ಗೆ ಮಾಹಿತಿ: ಅಲೋಕ್​ ಮೋಹನ್

Date:

Advertisements

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಸ್ಪೋಟದಲ್ಲಿ ಒಟ್ಟು 9 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಈಗಾಗಲೇ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದು, ಸಿಸಿಟಿವಿ ಪರಿಶೀಲನೆ ನಡೆಸಿದ್ದಾರೆ. ಸ್ಪೋಟದ ಬಗ್ಗೆ ಸರಿಯಾದ ಕಾರಣ ಏನು ಎಂಬುದು ಸದ್ಯಕ್ಕೆ ಇನ್ನು ತಿಳಿದುಬಂದಿಲ್ಲ. ಸದ್ಯ ಘಟನೆ ಬಗ್ಗೆ ಪರಿಶೀಲನೆ ನಡೆಸುತ್ತಿದ್ದೇವೆ ಎಂದು ರಾಜ್ಯ ಪೊಲೀಸ್ಮಹಾನಿರ್ದೇಶಕ ಅಲೋಕ್ಮೋಹನ್ ಹೇಳಿದರು.

“ವಿಧಿ ವಿಜ್ಞಾನ ಪ್ರಯೋಗಾಲಯದ ತಜ್ಞರು ಸದ್ಯ ಪರಿಶೀಲನೆ ನಡೆಸುತ್ತಿದ್ದಾರೆ. ಅವರಿಂದ ವರದಿ ಬಂದ ನಂತರ ಸ್ಪಷ್ಟ ಮಾಹಿತಿ ತಿಳಿಯಲಿದೆ. ರಾಮೇಶ್ವರಂ ಕೆಫೆಗೆ ಗ್ರಾಹಕರು ಏನಾದರೂ ತಂದಿದ್ದರಾ? ಅಥವಾ ಈ ಸ್ಪೋಟಕ್ಕೆ ಬೇರೆಯೇ ಕಾರಣ ಇದೇಯಾ ಎಂಬುದನ್ನು ಸದ್ಯಕ್ಕೆ ಹೇಳಲಾಗದು” ಎಂದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ರಾಮೇಶ್ವರಂ ಕೆಫೆ ಸ್ಪೋಟ; ಎಲ್ಲ ಆಯಾಮಗಳಲ್ಲಿ ತನಿಖೆಗೆ ಮುಂದಾದ ಪೊಲೀಸರು

Advertisements

“ಈ ಘಟನೆಗೆ ಕಾರಣನಾದ ಆರೋಪಿಯನ್ನ ನಾವು ಖಂಡಿತ ಪತ್ತೆ ಮಾಡುತ್ತೇವೆ. ಸದ್ಯಕ್ಕೆ ಯಾರ ಮೇಲೂ ಅನುಮಾನ ಇಲ್ಲ. ತನಿಖೆ ನಡೆಯುತ್ತಿದೆ. ಬಗ್ಗೆ ರಾಷ್ಟ್ರೀಯ ತನಿಖಾ ದಳ, ಕೇಂದ್ರ ಗುಪ್ತಚರ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ” ಎಂದು ಡಿಜಿಪಿ ಅಲೋಕ್ ಮೋಹನ್ ಮಾಹಿತಿ ನೀಡಿದ್ದಾರೆ.

“ಮಧ್ಯಾಹ್ನ ಒಂದು ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ಒಂಬತ್ತು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಸಿಎಂ ಮತ್ತು ಗೃಹ ಸಚಿವರಿಗೆ ಮಾಹಿತಿ ನೀಡಲಾಗಿದ್ದು, ಎಫ್​ಎಸ್​ಎಲ್​ ಟೀಮ್​ ಪರಿಶೀಲನೆ ನಡೆಸುತ್ತಿದೆ. ಎಫ್ಎಸ್ಎಲ್ ತಂಡ ಸಂಪೂರ್ಣ ಪರಿಶೀಲನೆ ನಡೆಸಿದ ಬಳಿಕ ಮಾಹಿತಿ ನೀಡುತ್ತೇವೆಎಂದು ಅಲೋಕ್ ಮೋಹನ್ ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X