ಕಲಬುರಗಿ | ನಾನಾ ಕಾಮಗಾರಿಗಾಗಿ ರಸ್ತೆ ನಾಶ; ಗ್ರಾಮಸ್ಥರ ಆಕ್ರೋಶ

Date:

Advertisements

ಕಲಬುರಗಿ ಜಿಲ್ಲೆಯ ದಕ್ಷಿಣ ಕ್ಷೇತ್ರದ ಸೀತಾನೂರ ಗ್ರಾಮದಲ್ಲಿ ನಾನಾ ಯೋಜನೆಗಳ ಕಾಮಗಾರಿಗಾಗಿ ರಸ್ತೆಯನ್ನು ಹಗೆಯಲಾಗಿದ್ದು, ರಸ್ತೆ ಸಂಪೂರ್ಣ ಹಾಳಾಗಿದೆ. ರಸ್ತೆಯನ್ನು ರಿಪೇರಿ ಮಾಡದೇ, ಹಾಗೆ ಬಿಟ್ಟು ಹೋಗಿರುವ ಗುತ್ತಿಗೆದಾರರು ಮತ್ತು ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಹಿಡಿ ಶಾಪ ಹಾಕುತ್ತಿದ್ದಾರೆ.

ಜಲ ಜೀವನ ಮಷೀನ್ ಮನೆ ಮನೆಗೆ ನಲ್ಲಿ ನಿರ್ಮಿಸಿ ನೀರು ಬರುವಂತೆ ಮಾಡಿರುವುದರಿಂದ ಎಷ್ಟರ ಮಟ್ಟಿಗೆ ಫಲಕಾರಿ ಆಗಿದೆಯೋ ಗೊತ್ತಿಲ್ಲ? ಆದರೆ, ಜೆ.ಜೆ.ಎಮ್ ಕಾಮಗಾರಿ ಕಳಪೆ ಮಟ್ಟದಾಗಿದೆ ಎಂಬುವ ಆರೋಪ ಕೂಡ ಗ್ರಾಮದಲ್ಲಿ ಕೇಳಿಬರುತ್ತಿದ್ದು, ಈ ಕಾಮಗಾರಿಯಿಂದ ಎಷ್ಟು ಉಪಯೋಗವಾಗಿದೆಯೋ ಗೊತ್ತಿಲ್ಲ. ಇದರಿಂದ ರಸ್ತೆಯಂತೂ ಹಾಳಾಗಿದ್ದು ನಿಜ ಎನ್ನುತ್ತಾರೆ ಗ್ರಾಮಸ್ಥರು.

ಚನ್ನಾಗಿದ್ದ ರಸ್ತೆಗಳನ್ನು ಒಡೆದು ರಸ್ತೆ ಮಧ್ಯಭಾಗದಲ್ಲಿ ಪೈಪ್ ಅಳವಡಿಸಿದ್ದಾರೆ. ಈಗ ಈ ರಸ್ತೆಗಳ ಸ್ಥಿತಿ ನೋಡಲು ಆಗುತ್ತಿಲ್ಲ. ತುಂಬಾ ಭೀಕರ ಸ್ಥಿತಿಗೆ ರಸ್ತೆಗಳು ತಲುಪಿದ್ದು ಕಾಮಗಾರಿ ಮುಗಿದ ಬಳಿಕ ಒಡೆದ ರಸ್ತೆ ದುರಸ್ತಿ ಮಾಡದೇ ಹಾಗೆ ಬಿಟ್ಟಿರುವುದಕ್ಕೆ ಗ್ರಾಮಸ್ಥರು ನಿಷಾದ ವ್ಯಕ್ತ ಪಡಿಸುತ್ತಿದ್ದಾರೆ.

Advertisements

ರಸ್ತೆ ಒಡೆದು ಪೈಪ್ ಹಾಕಿ ಕಾಂಕ್ರೇಟ್ ಚೂರುಗಳಿಂದ ಗುಂಡಿಗಳು ಮುಚ್ಚಿ ಬಿಟ್ಟಿದ್ದು, ಕಾಮಗಾರಿ ಮುಗಿದ ಬಳಿಕ ರಸ್ತೆ ಪ್ಯಾಚ್ ವರ್ಕ್ ಕೂಡ ಮಾಡದೇ ಬಿಟ್ಟಿದ್ದು, ಇರುವುದರಿಂದ ಬೈಕ್ ಸವಾರರಿಗೆ ತುಂಬಾ ತೊಂದರೆಯಾಗುತ್ತಿದ್ದು, ಬೈಕ್ ಕಂಟ್ರೋಲ್ ತಪ್ಪಿ ಗಾಡಿ ಸ್ಕಿಡ್ ಆಗಿ ಸವಾರರು ಬಿದ್ದಿರುವ ಘಟನೆಗಳು ನಡೆದಿವೆ. ಇದರಿಂದ ಬೈಕ್ ಸವಾರರು ತುಂಬಾ ಆತಂಕ, ಭಯದಿಂದ ಬೈಕ್ ಓಡಿಸುತ್ತಾರೆ ಎನ್ನುತ್ತಾರೆ ಸ್ಥಳೀಯರು.

ಸಣ್ಣ ಮಕ್ಕಳು, ವಯಸ್ಸಾದ ವೃದ್ಧರು, ಕಣ್ಣು ಕಾಣದೆ ಇರುವವರು ರಸ್ತೆಯಲ್ಲಿ ನಡೆದುಕೊಂಡು ಹೋಗಲು ಆಗುವುದಿಲ್ಲ. ಕಲ್ಲುಗಳು ಕಾಲಿಗೆ ತಾಗಿ ಬೀಳುತ್ತಿದ್ದಾರೆ. ಜೆ.ಜೆ.ಎಮ್ ಕಾಮಗಾರಿಯಿಂದ ಸಂಪೂರ್ಣ ರಸ್ತೆ ಹದಗೆಟ್ಟಿದೆ ಸಂಬಂಧಪಟ್ಟ ಅಧಿಕಾರಿಗಳು ಆದಷ್ಟು ಬೇಗಾ ಈ ರಸ್ತೆ ದುರಸ್ತಿ ಮಾಡಿಕೊಡಬೇಕು ಎಂದು ಸೀತಾನೂರು ಗ್ರಾಮಸ್ಥರು ಈ ದಿನ. ಕಾಮ್‌ ಮೂಲಕ ಆಗ್ರಹಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಗೀತಾ ಹೊಸಮನಿ
ಗೀತಾ ಹೊಸಮನಿ
ಯಾದಗಿರಿ, ಕಲಬುರಗಿ ಜಿಲ್ಲಾ ಸಂಯೋಜಕರು, NCCಯಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಚಿನ್ನದ ಪದಕ(NRAI ಫೈರಿಂಗ್ ವಿಭಾಗ) ವಿಜೇತೆ.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X