ಯಾದಗಿರಿ | ಮನರೇಗಾ ಯೋಜನೆಯಲ್ಲಿ ಅವ್ಯವಹಾರ ಆರೋಪ; ಕ್ರಮಕ್ಕೆ ಆಗ್ರಹ

Date:

Advertisements

ಯಾದಗಿರಿ ತಾಲೂಕಿನ ವ್ಯಾಪ್ತಿಯಲ್ಲಿ ಬರುವ ಗ್ರಾ.ಪಂ.ಗಳಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಕೂಲಿಕಾರರಿಂದ ಕೆಲಸ ಮಾಡಿಸದೇ ಅವ್ಯವಹಾರ ಎಸಗಿದ್ದು, ತನಿಖೆ ಆಗುವವರೆಗೂ ಉದ್ಯೋಗ ಖಾತ್ರಿ ಬಿಲ್ ಪಾವತಿಸದೆ ತಡೆಹಿಡಿಯುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿರುವ, ಅಂಬೇಡ್ಕರ್ ಸ್ವಾಭಿಮಾನಿ ಸೇನೆ ಯಾದಗಿರಿಯ ತಾಲೂಕ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗೆ ಮನವಿ ಸಲ್ಲಿಸಿದೆ.

ಯಾದಗಿರಿ ತಾಲೂಕಿನ ಬಂದಳ್ಳಿ, ಹೊನಗೇರಾ, ಅರಕೇರಾ (ಬಿ), ವರ್ಕನಳ್ಳಿ ವ್ಯಾಪ್ತಿಯ ಗ್ರಾ.ಪಂ.ಗಳಲ್ಲಿ 2023-24ನೇ ಸಾಲಿನ ಉದ್ಯೋಗ ಖಾತ್ರಿ ಯೋಜನೆಯಡಿ ಕಾಮಗಾರಿಗಳು, ಊರಿನಲ್ಲಿ ಇರದೇ ಇರುವ ಕೂಲಿಕಾರರು ಬೆಂಗಳೂರಿನಲ್ಲಿ ದುಡಿಯುವ ಕೂಲಿಕಾರರ ಹೆಸರಿನ ಮೇಲೆ ಎನ್.ಎಂ.ಆ‌ರ್. ತೆಗೆದು, ಕಾಮಗಾರಿ ಮಾಡುತ್ತಿದ್ದಾರೆ ಹಾಗೂ ಕಾಮಗಾರಿಗಳನ್ನು ಜೆ.ಸಿ.ಬಿ. ಯಂತ್ರಗಳಿಂದ ಮಾಡಿಸಿ, ಕೂಲಿಕಾರರಿಗೆ ಕೆಲಸ ನೀಡಿರುವುದಿಲ್ಲ, ಮನರೇಗಾ ಮಾರ್ಗಸೂಚಿ ಪ್ರಕಾರ ಕಾಮಗಾರಿಗಳು ನಡೆಯುತ್ತಿಲ್ಲ. ಬೇಕಾಬಿಟ್ಟಿಯಾಗಿ ಮಾಡಿ, ಪಿಡಿಒ, ಅಧ್ಯಕ್ಷರು, ಜೆ.ಇ. ಕಂ ಆಪರೇಟರ್ ಗ್ರಾ.ಪಂ. ಸದಸ್ಯರು ಹಣ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.

ಉದ್ಯೋಗ ಖಾತ್ರಿ ಯೋಜನೆಯಡಿ ಎನ್.ಎಂ.ಆರ್ ತೆಗೆಯಲು ಹಣ ಕೇಳುತ್ತಾರೆ ಮತ್ತು ಎನ್.ಎಂ.ಆರ್. ಹಾಕುವಾಗ ತನಗೆ ಬೇಕಾದ ಕೂಲಿಕಾರ ಹೆಸರನ್ನು ಸೇರಿಸಿರುತ್ತಾರೆ. ಫಾರಂ ನಂ.6 ತುಂಬಿದ ಕೂಲೀಕಾರರಿಗೆ ಕೆಲಸ ಕೊಡದೇ, ಗ್ರಾ.ಪಂ. ಸದಸ್ಯರಿಗೆ ಕೆಲಸ ನೀಡುತ್ತಾರೆ ಎನ್ನುತ್ತಿರುವ ಪ್ರತಿಭಟನಾಕಾರರು, ಆದ ಕಾರಣ ಮನರೇಗಾ ಯೋಜನೆಯಡಿ ಕಾಮಗಾರಿಗಳ ಸ್ಥಳ ಮತ್ತು ದಾಖಲೆಗಳು ಪರಿಶೀಲನೆ ಆಗುವವರೆಗೂ ಯಾವುದೇ ಎನ್.ಎಂ.ಆರ್ ಮಾಡಬಾರದು. ಕೂಲಿ ಮತ್ತು ಸಾಮಾಗ್ರಿ ಹಣ ತಡೆಹಿಡಿಯಲು ಮನವಿ ಸಲ್ಲಿಸಿದ್ದು, ಒಂದು ವೇಳೆ ಕ್ರಮ ಕೈಗೊಳ್ಳದೇ ಹೋದರೆ, ಕಛೇರಿ ಮುಂದೆ ಹೋರಾಟ ಮಾಡಲಾಗುವುದು ಎಂದು ಮನವಿಯಲ್ಲಿ ಎಚ್ಚರಿಕೆ ನೀಡಿದ್ದಾರೆ.

Advertisements

ಈ ಸಂದರ್ಭದಲ್ಲಿ ಅನೀಲ್‌ ಕುಮಾರ ದೊಡ್ಡಮನಿ, ಹಂಪಯ್ಯ.ಎನ್.ಶೇಂಗಿನೋರ, ಹಣಮಂತ ಚಿಕ್ಕಮೇಟಿ, ದೇವರಾಜ್, ಗೌತಮ್ ಕ್ರಾಂತಿ ಗಂಗಾರಮ್, ಬಂದಪ್ಪ ಇನ್ನಿತರರು ಉಪಸ್ಥಿತರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

Download Eedina App Android / iOS

X