ರೈತ ಹೋರಾಟ | ಸರ್ಕಾರದ ದಮನಕ್ಕೆ ಬಗ್ಗದ ‘ದೆಹಲಿ ಚಲೋ’; ಈವರೆಗೆ 6 ರೈತರು ಸಾವು

Date:

Advertisements

ಕನಿಷ್ಟ ಬೆಂಬಲ ಬೆಲೆ (ಎಂಎಸ್‌ಪಿ) ಮತ್ತು ರೈತ ಸಾಲ ಮನ್ನಾಕ್ಕಾಗಿ ಆಗ್ರಹಿಸಿದ ನಡೆಯುತ್ತಿರುವ ‘ದೆಹಲಿ ಚಲೋ’ ರೈತ ಹೋರಾಟ 20ನೇ ದಿನಕ್ಕೆ ಕಾಲಿಟ್ಟಿದೆ. ರೈತರು ದೆಹಲಿ ತಲುಪದಂತೆ ತಡೆಯಲು ಹರಿಯಾಣ ಮತ್ತು ಕೇಂದ್ರ ಬಿಜೆಪಿ ಸರ್ಕಾರಗಳು ಭಾರೀ ಪ್ರಯತ್ನ ನಡೆಸುತ್ತಿವೆ. ರೈತರ ಮೇಲೆ ಟಿಯರ್ ಗ್ಯಾಸ್, ರಬ್ಬರ್‌ ಗುಂಡಿನ ದಾಳಿಗಳೂ ನಡೆದಿವೆ. ಈವರೆಗೆ, ಆರು ಮಂದಿ ರೈತರು ಸಾವನ್ನಪ್ಪಿದ್ದಾರೆ. ಆದರೂ, ಸರ್ಕಾರದ ದಮನಕ್ಕೆ ಬಗ್ಗದ ರೈತರು ಹೋರಾಟ ಮುಂದುವರೆಸಿದ್ದಾರೆ.

ರೈತರ ಹೋರಾಟದಲ್ಲಿ ಕರ್ನೈಲ್ ಸಿಂಗ್ (62), ಜ್ಞಾನ್ ಸಿಂಗ್ (63), ಮಂಜಿತ್ ಸಿಂಗ್ (72), ನರಿಂದರ್‌ಪಾಲ್ ಸಿಂಗ್ (43), ಶುಭಕರನ್ ಸಿಂಗ್ ಮತ್ತು ಗುರ್ಜಂತ್ ಸಿಂಗ್ (23) ಅವರು ಸಾವನ್ನಪ್ಪಿದ್ದಾರೆ ಎಂದು ಗುರುತಿಸಲಾಗಿದೆ. ಅಲ್ಲದೆ, ಸುಮಾರು 100ಕ್ಕೂ ಹೆಚ್ಚು ಮಂದಿ ರೈತರು ಗಾಯಗೊಂಡಿದ್ದಾರೆ. ಕಲವರು ಕಣ್ಣಿನ ದೃಷ್ಟಿಯನ್ನೂ ಕಳೆದುಕೊಂಡಿದ್ದಾರೆ.

ಸಾವನ್ನಪ್ಪಿದ ರೈತರಿಗೆ ಹೋರಾಟದ ಸ್ಥಳದಲ್ಲೇ ಪ್ರತಿಭಟನಾನಿರತ ರೈತರು ಭಾನುವಾರ ಅಂತಿಮ ನಮನ ಸಲ್ಲಿಸಲು ಸಭೆ ನಡೆಸುತ್ತಿದ್ದಾರೆ. ಸಭೆಯ ನಂತರ ಹೋರಾಟದ ಮುಂದಿನ ರೂಪುರೇಷೆಗಳನ್ನು ನಿರ್ಧರಿಸಿ, ತಿಳಿಸುವುದಾಗಿ ರೈತ ಮುಖಂಡರು ಹೇಳಿದ್ದಾರೆ.

Advertisements

“ಇದು ಕೇವಲ ಅಶ್ರುವಾಯು ಅಥವಾ ಲಘು ಲಾಠಿ ಪ್ರಹಾರದ ಪ್ರಶ್ನೆಯಲ್ಲ… ಅವರು (ಪೊಲೀಸರು) ವಿಷಕಾರಿ ಅನಿಲಗಳನ್ನು ಬಳಸಿದ್ದನ್ನು ನಾವು ನೋಡಿದ್ದೇವೆ. ಯುವ ರೈತ ಶುಭಕರನ್ ಅವರನ್ನು ಹೇಗೆ ಕಳೆದುಕೊಂಡಿದ್ದೇವೆ ಎಂಬುದು ಎಲ್ಲರಿಗೂ ತಿಳಿದಿದೆ. ಪ್ರಜಾಪ್ರಭುತ್ವದಲ್ಲಿ ಬುಲೆಟ್‌ಗಳನ್ನು ಹಾರಿಸುವುದು ಸಮರ್ಥನೆಯ ಸಂಗತಿಯೇ? ನಮ್ಮ ಆಂದೋಲನ ಮುಂದುವರಿಯುತ್ತದೆ. ಅದು ವಿಜಯದತ್ತ ಸಾಗುತ್ತದೆ” ಎಂದು ರೈತ ಮುಖಂಡ ಜಸ್ವಿಂದರ್ ಸಿಂಗ್ ಲೊಂಗೊವಾಲ್ ಹೇಳಿದ್ದಾರೆ.

ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಕರೆ ಕೊಟ್ಟು ಆರಂಭಿಸಿದ ರೈತ ಹೋರಾಟಕ್ಕೆ, ಈಗ ಸಂಯುಕ್ತ ಕಿಸಾನ್ ಮೋರ್ಚಾ ಮತ್ತು ಕಿಸಾನ್ ಮಜ್ದೂರ್ ಮೋರ್ಚಾ (ಕೆಎಂಎಂ) ಬೆಂಬಲ ನೀಡಿವೆ. ಅನೇಕ ಸಂಘಟನೆಗಳು ಜೊತೆಗೂಡಿವೆ.

ರೈತರು 23 ಬೆಳೆಗಳಿಗೆ ಎಂಎಸ್‌ಪಿಯನ್ನು ಕಾನೂನಿ ಮೂಲಕ ಖಾತರಿಪಡಿಸಬೇಕು. ಕೃಷಿ ಉತ್ಪನ್ನಗಳಿಗೆ ಉತ್ಪಾದನಾ ವೆಚ್ಚಕ್ಕಿಂತ 50% ಲಾಭದೊಂದಿಗೆ ಎಂಎಸ್‌ಪಿ ನಿಗದಿಯಾಗಬೇಕು. 2020ರಲ್ಲಿ ಒಂದು ವರ್ಷಗಳ ಕಾಲ ನಡೆದ ರೈತ ಹೋರಾಟದಲ್ಲಿ ಸಾವನ್ನಪ್ಪಿದ ರೈತ ಕುಟುಂಬಗಳಿಗೆ ಪರಿಹಾರ ನೀಡಬೇಕು. ರೈತರ ಸಾಲ ಮನ್ನಾ ಮಾಡಬೇಕು ಎಂಬುದು ಸೇರಿದಂತೆ ಹಲವಾರು ಹಕ್ಕೊತ್ತಾಯಗಳನ್ನು ರೈತರು ಕೇಂದ್ರ ಸರ್ಕಾರದ ಮುಂದಿಟ್ಟಿದ್ದಾರೆ. ಈವರೆಗೆ, ರೈತರು ಮತ್ತು ಸರ್ಕಾರದ ನಡುವೆ 4 ಸುತ್ತಿನ ಸಭೆ ನಡೆದಿದ್ದು, ನಾಲ್ಕೂ ಸಭೆಗಳು ವಿಫಲವಾಗಿವೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X