ಭಾರತೀಯರಾದ ಎಲ್ಲರೂ ಸಮಭಾವ ಸಹಬಾಳ್ವೆಯಿಂದ ಜೀವನವನ್ನು ಸಾಗಿಸಬೇಕು ಎಂದು ಅಮೇರಿಕದ ಆಕ್ಸ್ಫರ್ಡ್ ವಿಶ್ವವಿದ್ಯಾನಿಲಯದ ಅಸೋಸಿಯೆಟ್ ಎಡಿಟರ್ ಡಾ.ಅಸಂಗ ವಾಂಖೇಡೆ ಹೇಳಿದರು.
ವಿಜಯಪುರ ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಡಾ. ಬಿ.ಆರ್. ಅಂಬೇಡ್ಕರ್ ಅಧ್ಯಯನ ಕೇಂದ್ರ ಹಾಗೂ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಕೋಶದ ವತಿಯಿಂದ ಆಯೋಜಿಸಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಡಾ. ಬಿ.ಆರ್. ಅಂಬೇಡ್ಕರ್ ರವರ ಸಮಗ್ರತೆಯ ವಿಚಾರದಲ್ಲಿ ಸಾಮಾಜಿಕ ನ್ಯಾಯ ಮತ್ತು ಅದರ ಶ್ರೇಯೋಭಿವೃದ್ಧಿ ಹಾಗೂ ಭಾರತೀಯ ದಂಡ ಸಂಹಿತೆ ಮತ್ತು ಸಮಾನತೆ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಿದರು ಹಾಗೂ ಡಾ. ಬಿ. ಆರ್.ಆರ್ ಅಂಬೇಡ್ಕರ್ ರವರ ಜೀವನದ ಹೋರಾಟದ ಬಗ್ಗೆ ವಿವರಿಸಿದರು.
ಕಾರ್ಯಕ್ರಮದಲ್ಲಿ ವಿವಿಯ ಕುಲಪತಿ ಪ್ರೊ. ಬಿ. ಕೆ. ತುಳಸಿಮಾಲಾ ಮಾತನಾಡಿ, ಡಾ. ಬಿ. ಆರ್. ಅಂಬೇಡ್ಕರ್ ಅಧ್ಯಯನ ಕೇಂದ್ರ ಹಾಗೂ ಪಾ. ಜಾ/ಪ. ಪಂ ನಿಂದ ಇಂತಹ ವಿಶೇಷ ಉಪನ್ಯಾಸಗಳನ್ನು ಏರ್ಪಡಿಸುವುದರಿಂದ ವಿದ್ಯಾರ್ಥಿಗಳಿಗೆ ಅಭ್ಯಾಸ ಮಾರ್ಗದರ್ಶಿ ಮತ್ತು ವಿದೇಶದಲ್ಲಿ ಪ. ಜಾ/ಪ. ಪಂ ವಿದ್ಯಾರ್ಥಿಗಳಿಗೆ ಲಭಿಸುವ ಪ್ರಾಯೋಜಕತ್ವ ಕುರಿತು ಮಾಹಿತಿ ಲಭಿಸುತ್ತದೆ. ಅಂತಹ ವಿದೇಶಿ ಪ್ರಾಯೋಗಿಕತ್ವಗಳನ್ನು ನಮ್ಮ ವಿದ್ಯಾರ್ಥಿನಿಯರು ಕೂಡ ಪಡೆದುಕೊಳ್ಳಬೇಕೆಂದು ತಿಳಿಸಿದರು.
ಕೇಂದ್ರ ಹಾಗೂ ಪ.ಜಾ/ಪ.ಪಂ ನಿಂದ ಇಂತಹ ವಿಶೇಷ ಉಪನ್ಯಾಸಗಳನ್ನು ಏರ್ಪಡಿಸುವುದರಿಂದ ವಿದ್ಯಾರ್ಥಿಗಳಿಗೆ ಅಭ್ಯಾಸ ಮಾರ್ಗದರ್ಶಿ ಲಭಿಸಿದಂತಾಗುತ್ತದೆ ಮತ್ತು ವಿದೇಶದಲ್ಲಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಗೆ ಲಭಿಸುವ ಪ್ರಾಯೋಜಕತ್ವ ಕುರಿತು ಮಾಹಿತಿ ಲಭಿಸುತ್ತಿದೆ. ಅಂತಹ ವಿದೇಶಿ ಪ್ರಾಯೋಜಕತ್ವಗಳನ್ನು ನಮ್ಮ ವಿದ್ಯಾರ್ಥಿನಿಯರು ಕೂಡ ಪಡೆದುಕೊಳ್ಳಬೇಕೆಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಮಹಿಳಾ ವಿವಿಯ ಕುಲ ಸಚಿವ ಶಂಕರಗೌಡ ಸೋಮನಾಳ ಮಾತನಾಡಿ, ಭಾರತೀಯರಾದ ನಾವು-ನೀವೆಲ್ಲ ಒಂದೇ, ಜಾತಿಮತ ಬೇಧ-ಭಾವ ಇಲ್ಲದೆ ಸಮಾನ ಮನಸ್ಸಿನಿಂದ ಬದುಕಬೇಕೆಂದು ಹೇಳಿದರು.
ಕಾರ್ಯಕ್ರಮದಲ್ಲಿ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಕೋಶದ ನಿರ್ದೇಶಕಿ ಪ್ರೊ. ಲಕ್ಷ್ಮಿದೇವಿ ವಾಯ್, ಡಾ. ಬಿ.ಆರ್.ಅಂಬೇಡ್ಕರ್ ಅಧ್ಯಯನ ಕೇಂದ್ರದ ನಿರ್ದೇಶಕ ಡಾ. ಸಂಜೀವಕುಮಾರ ಗಿರಿ, ವಿವಿಧ ಅಧ್ಯಯನ ವಿಭಾಗಗಳ ಭೋಧಕ, ಭೋಧಕೇತರ ವರ್ಗದವರು, ಸಂಶೋಧನಾ ವಿದ್ಯಾರ್ಥಿನಿಯರು, ಅತಿಥಿ ಉಪನ್ಯಾಸಕರು ಮತ್ತು ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಡಾ. ಸಂಜೀವ್ ಕುಮಾರ್ ಗಿರಿ ಸ್ವಾಗತಿಸಿದರು. ಜೈವಿಕ ಮಾಹಿತಿ ಅಧ್ಯಯನ ವಿಭಾಗದ ಸಂಯೋಜಕ ಡಾ. ಬಾಬು ಆರ್.ಎಲ್ ಹೊಂದಿಸಿದರು. ಸಂಶೋಧನಾ ವಿದ್ಯಾರ್ಥಿನಿ ವಿದ್ಯಾಶ್ರೀ ಎನ್. ಸೂರ್ಯವಂಶಿ ಕಾರ್ಯಕ್ರಮ ನಿರೋಪಿಸಿದರು.