ದಾವಣಗೆರೆ | ನಾಲೆಯ ಕೊನೆ ಭಾಗಕ್ಕೆ ನೀರು ಹರಿದಿಲ್ಲ; ಸಚಿವರು ರೈತರ ಹಿತ ಕಾಯುತ್ತಿಲ್ಲ: ಶಾಸಕ ಹರೀಶ್

Date:

Advertisements

ದಾವಣಗೆರೆ ಜಿಲ್ಲೆಯ ರೈತರಿಗೆ ಭದ್ರಾ ಜಲಾಶಯದಿಂದ ಸಮರ್ಪಕವಾಗಿ ನೀರು ಹರಿಸುವಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ನಿರ್ಲಕ್ಷ್ಯ ವಹಿಸಿದ್ದಾರೆ. ಕೊನೆ ಭಾಗದ ರೈತರಿಗೆ ನೀರುಸಿಗದೆ ಅನ್ಯಾಯವಾಗಿದೆ ಆದರೆ ಸಚಿವರು ರೈತರ ಬಗ್ಗೆ ಯಾವುದೇ ಜವಾಬ್ದಾರಿ ವಹಿಸಿಲ್ಲ ಎಂದು ಶಾಸಕ ಬಿ.ಪಿ.ಹರೀಶ್ ಆಕ್ರೋಶ ವ್ಯಕ್ತಪಡಿಸಿದರು.

ದಾವಣಗೆರೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭದ್ರಾಜಲಾಶಯದ ನಾಲೆ ಹೊಂದಿರುವ ದಾವಣಗೆರೆ ಜಿಲ್ಲೆಗೆ ಸಚಿವರು ಭದ್ರ ಜಲಾಶಯದ ನೀರನ್ನು ಕೊನೆ ಭಾಗದ ಗ್ರಾಮಗಳಿಗೆ ನೀರು ಹರಿಸುವಲ್ಲಿ ಸಂಪೂರ್ಣವಾಗಿ ಎಡವಿದ್ದಾರೆ. ಭದ್ರಾ ಕಾಡಾ ಜವಾಬ್ದಾರಿಯನ್ನು ನೀರಾವರಿ ಸಚಿವರು ಶಿವಮೊಗ್ಗ ಜಿಲ್ಲೆಯ ಸಚಿವರಾದ ಮಧುಬಂಗಾರಪ್ಪ ಅವರಿಗೆ ನೀಡಿದ್ದಾರೆ. ಆದರೆ, ಸಚಿವ ಮಧು ಬಂಗಾರಪ್ಪ ಅವರು ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗೆ ಮಾತ್ರ ಅನುಕೂಲ ಮಾಡಿಕೊಟ್ಟಿದ್ದಾರೆ ಎಂದು ಆರೋಪಿಸಿದರು.

ದಾವಣಗೆರೆ ಜಿಲ್ಲೆಯ ರೈತ ಬಗ್ಗೆ ಕಾಳಜಿ ವಹಿಸಬೇಕಾಗಿದ್ದ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಜವಾಬ್ದಾರಿ ವಹಿಸಲಿಲ್ಲ ಹಾಗೂ ಯಾವುದೇ ಹೋರಾಟ ಮಾಡಲಿಲ್ಲ ಅವರಿಗೆ ಜಿಲ್ಲೆಯ ರೈತರ ಹಿತ ಬೇಕಾಗಿಲ್ಲ ಎಂದರು.

Advertisements

ಅಡಿಕೆ ತೋಟಕ್ಕೆ ಹತ್ತು ದಿನ ನೀರು ಬಿಟ್ಟು ನಿಲ್ಲಿಸಿದರೆ ಜಲಾಶಯದಲ್ಲಿ ನೀರು ಉಳಿಯುತ್ತದೆ ಎಂಬುದು ಮೇಲ್ಬಾಗದ ರೈತರದ್ದಾಗಿದೆ. ಕೇವಲ 12 ದಿನನೀರು ಬಿಟ್ಟರೆ ಕೊನೆ ಭಾಗಕ್ಕೆ ತಲುಪುವುದಿಲ್ಲ. ಮುಂದಿನ ದಿನದಲ್ಲಿ ಇನ್ನೊಂದು ವೇಳೆ ನೀರು ಹರಿಸಲಾಗುತ್ತದೆ. ಈ ವೇಳೆಯಾದರೂ ಎಸ್. ಎಸ್. ಮಲ್ಲಿಕಾರ್ಜುನ್ ಅವರು, ಭದ್ರಾ ಜಲಾಶಯದಿಂದ ನೀರು ಹರಿಸಲು ಕ್ರಮ ಕೈಗೊಳ್ಳಲಿ ಎಂದು ಒತ್ತಡ ಹಾಕಲಿ ಎಂದರು

ಸಚಿವರಿಗೆ ಬಡ ರೈತನಿಗಿಂತ ಕಾರ್ಖಾನೆ ಮುಖ್ಯವಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರು ಮಧು ಬಂಗಾರಪ್ಪಗೆ ಒತ್ತಡ ಹಾಕಲಿಲ್ಲ.ಸರ್ಕಾರ ಬಜೆಟ್ ಅಧಿವೇಶನ ನಡೆಸಿದ ವೇಳೆ ಬರಗಾಲದ ಬಗ್ಗೆ ಕುಡಿಯುವ ನೀರಿನ ವಿಚಾರವಾಗಿ ಮಾತನಾಡಲಿಲ್ಲ. ಈ ಬಾರಿಯ ಬಜೆಟ್‌ನಲ್ಲಿ ದಾವಣಗೆರೆ ಜಿಲ್ಲೆಗೆ ಯಾವ ಕೊಡುಗೆ ನೀಡಿಲ್ಲ. ಈ ಭಾಗದ ಸಚಿವರು ಶಾಸಕರು ಸರ್ಕಾರಕ್ಕೆ ಒತ್ತಡ ಹಾಕಿಲ್ಲ ಎಂದರು.   ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮುಖಂಡ ಬಿ. ಎಂ. ಸತೀಶ್‌, ಹೆಚ್. ಪಿ. ವಿಶ್ವಾಸ್, ಕ್ರೋಟೇಶ್ ಗೌಡ ಹಾಜರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಶಾಲೆಗೆ ರಸ್ತೆ ಅಭಿವೃದ್ಧಿಪಡಿಸಲು ಆರನೇ ತರಗತಿ ವಿದ್ಯಾರ್ಥಿನಿ ಗ್ರಾ.ಪಂ. ಮುಂದೆ ಧರಣಿ

ಶಾಲೆಗೆ ಹೋಗುವ ರಸ್ತೆ ಸರಿಪಡಿಸಿ ಅಭಿವೃದ್ಧಿಪಡಿಸಲು ಒತ್ತಾಯಿಸಿ ಆರನೇ ತರಗತಿ ವಿದ್ಯಾರ್ಥಿನಿಯೊಬ್ಬಳು...

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

ಬೀದರ್‌ | ಅತಿವೃಷ್ಟಿ : ತ್ವರಿತ ಬೆಳೆ ಹಾನಿ ಪರಿಹಾರಕ್ಕೆ ಕಿಸಾನ್‌ ಸಭಾ ಒತ್ತಾಯ

ಮೇ ತಿಂಗಳಿಂದ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉದ್ದು, ಹೆಸರು, ತೊಗರಿ ಸೇರಿದಂತೆ ಹಲವು...

Download Eedina App Android / iOS

X