ದಾವಣಗೆರೆ | ಶಿವಗಂಗೋತ್ರಿ ಆವರಣದಲ್ಲಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ

Date:

Advertisements

ಸಂವಿಧಾನದ ಮಹತ್ವ ಹಾಗೂ ಆಶಯಗಳ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಸಮಾಜ ಕಲ್ಯಾಣ ಇಲಾಖೆ ಏರ್ಪಡಿಸಿರುವ ‘ಸಂವಿಧಾನ ಜಾಗೃತಿ ಜಾಥಾ’ ಕಾರ್ಯಕ್ರಮವನ್ನು ದಾವಣಗೆರೆ ವಿಶ್ವವಿದ್ಯಾನಿಲಯ ಶಿವಗಂಗೋತ್ರಿ ಆವರಣದಲ್ಲಿ ಏರ್ಪಡಿಸಲಾಗಿತ್ತು.

ಕುಲಪತಿ ಪ್ರೊ. ಬಿ.ಡಿ.ಕುಂಬಾರ ಅವರು ಸಂವಿಧಾನ ಜಾಗೃತಿ ಸ್ತಬ್ಧಚಿತ್ರಕ್ಕೆ ಗೌರವ ಸಲ್ಲಿಸಿದರು. ಬುದ್ಧ, ಬಸವ ಮತ್ತು ಅಂಬೇಡ್ಕರ್ ಅವರ ಪ್ರತಿಮೆಗಳ ಜೊತೆಗೆ ಸಂವಿಧಾನದ ಪೀಠಿಕೆಯ ಫಲಕವನ್ನು ಹೊತ್ತ ಸ್ತಬ್ಧಚಿತ್ರ ಎಲ್ಲರ ಗಮನ ಸೆಳೆಯುತ್ತಿತ್ತು.

ವಿದ್ಯಾರ್ಥಿಗಳಿಗೆ ವಿಧಾನ ಪೀಠಿಕೆಯ ಪ್ರಮಾಣವಚನ ಬೋಧಿಸಿದ ಕುಲಪತಿ ಪ್ರೊ. ಕುಂಬಾರ ಮಾತನಾಡಿ, ಅಂಬೇಡ್ಕರ್ ರಚಿಸಿದ ಸಂವಿಧಾನ ಮಹತ್ವ, ಹಕ್ಕುಗಳು ಮತ್ತು ಮೌಲ್ಯಗಳನ್ನು ಪ್ರತಿಯೊಬ್ಬ ಭಾರತೀಯ ಪ್ರಜೆಯೂ ಅರ್ಥಮಾಡಿಕೊಳ್ಳಬೇಕು. ಸಾಮಾಜಿಕ ನ್ಯಾಯ, ಭ್ರಾತೃತ್ವ ಭಾವನೆ, ಸ್ವಾಭಿಮಾನಿ ಬದುಕಿಗೆ ಪ್ರೇರಣೆಯಾಗಿರುವ ಸಂವಿಧಾನದ ಆಶಯಗಳಿಗೆ ಮನ್ನಣೆ ನೀಡಬೇಕು ಎಂದು ಕರೆ ನೀಡಿದರು.

Advertisements

ವಿಶ್ವವಿದ್ಯಾನಿಲಯದ ಎನ್‌ಎಸ್ಎಸ್ ವಿದ್ಯಾರ್ಥಿಗಳ ನೇತೃತ್ವದಲ್ಲಿ ಆವರಣದ ಒಳಗೆ ಜಾಗೃತಿ ಜಾಥಾ ನಡೆಯಿತು. ವಿದ್ಯಾರ್ಥಿಗಳು ಘೋಷಣೆಗಳನ್ನು ಕೂಡಿ ಸಂವಿಧಾನದ ಜಾಗೃತಿ ಮೂಡಿಸಿದರು.

ಜಾಥಾದಲ್ಲಿ ಕುಲಪತಿ ಪ್ರೊ. ಕುಂಬಾರ, ಕುಲಸಚಿವ ಪ್ರೊ.ವೆಂಕಟರಾವ್ ಪಲಾಟೆ, ಹಣಕಾಸು ಅಧಿಕಾರಿ ಮುದ್ದನಗೌಡ ದ್ಯಾಮನಗೌಡ್ರ, ಸಂಯೋಜನಾಧಿಕಾರಿ ಅಶೋಕಕುಮಾರ ಪಾಳೇದ, ಪ್ರಾಧ್ಯಾಪಕರಾದ ಪ್ರೊ. ಬಿ.ಶಶಿಧರ, ಪ್ರೊ. ಡಾ.ಶಿವಕುಮಾರ ಕಣಸೋಗಿ, ಗೋವಿಂದಪ್ಪ,  ಸಂತೋಷಕುಮಾರ, ಎನ್‌ಎಸ್ಎಸ್ ಕಾರ್ಯಕ್ರಮ ಅಧಿಕಾರಿಗಳಾದ ಡಾ.ಸಿದ್ದಪ್ಪ ಕಕ್ಕಳಮೇಲಿ, ಡಾ. ಸೌಮ್ಯ ಬುಳ್ಳಾ ಮತ್ತಿತರರು ಭಾಗವಹಿಸಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X