ಹಾಸನ | ಬಸ್‌ ಹತ್ತಿಸದ ಕಂಡಕ್ಟರ್‌; ನಡು ರಸ್ತೆಯಲ್ಲೇ ವೃದ್ಧನ ಏಕಾಂಗಿ ಧರಣಿ

Date:

Advertisements
  • ಸಕಲೇಶಪುರದಿಂದ ಆಲೂರಿಗೆ ಹೋಗಬೇಕಿದ್ದ ವೃದ್ಧ
  • ಧರ್ಮಸ್ಥಳದಿಂದ ಬೆಂಗಳೂರಿಗೆ ಸಂಚರಿಸುತ್ತಿದ್ದ ಬಸ್‌

ಕೆಎಸ್‌ಆರ್‌ಟಿಸಿ ಬಸ್‌ ಹತ್ತಲು ಕಂಡಕ್ಟರ್‌ ಅವಕಾಶ ನೀಡಲಿಲ್ಲ ಎಂದು ಆಕ್ರೋಶಗೊಂಡ ವೃದ್ಧರೊಬ್ಬರು ನಡು ರಸ್ತೆಯಲ್ಲಿಯೇ ಬಸ್‌ ಎದುರು ಏಕಾಂಗಿಯಾಗಿ ಧರಣಿ ನಡೆಸಿರುವ ಘಟನೆ ಹಾಸನ ಜಿಲ್ಲೆ ಸಕಲೇಶಪುರದಲ್ಲಿ ಸೋಮವಾರ ನಡೆದಿದೆ.

ಕುಂದಾಪುರ ವಿಭಾಗದ ಕೆಎಸ್‌ಆರ್‌ಟಿಸಿ ಬಸ್‌ ಧರ್ಮಸ್ಥಳದಿಂದ ಸಕಲೇಶಪುರ ಮಾರ್ಗವಾಗಿ ಬೆಂಗಳೂರಿಗೆ ಹೋಗುತ್ತಿತ್ತು. ಸಕಲೇಶಪುರ ಪಟ್ಟಣದ ಹಳೆ ಬಸ್‌ ನಿಲ್ದಾಣದ ಬಳಿ ಬಸ್‌ ನಿಲ್ಲಿಸಿದ್ದ ವೇಳೆ, ವೃದ್ಧ ಬಸ್‌ ಹತ್ತಲು ಮುಂದಾಗಿದ್ದಾರೆ. ವೃದ್ಧನನ್ನು ತಡೆದ ಕಂಡಕ್ಟರ್‌ ಎಲ್ಲಿಗೆ ಹೋಗಬೇಕು ಎಂದು ಪ್ರಶ್ನಿಸಿದ್ದಾರೆ. ತಾನು ಆಲೂರಿಗೆ ಹೋಗಬೇಕೆಂದು ತಿಳಿಸಿ ವೃದ್ಧ ಬಸ್‌ ಹತ್ತಲು ಹೋದಾಗ ಕಂಡಕ್ಟರ್‌ ಉಡಾಫೆಯಿಂದ ವರ್ತಿಸಿ, ಬಸ್‌ನಲ್ಲಿ ಸೀಟ್‌ ಖಾಲಿ ಇಲ್ಲವೆಂದು ವೃದ್ಧನನ್ನು ಬಸ್‌ ಹತ್ತಲು ಬಿಡದೆ ಕೆಳಗಿಳಿಸಿದ್ದಾರೆ.

ಇದರಿಂದ ಕೋಪಗೊಂಡ್ಡ ವೃದ್ಧ ಬಸ್‌ ಎದುರು ರಸ್ತೆಯಲ್ಲಿಯೇ ಏಕಾಂಗಿಯಾಗಿ ಧರಣಿ ಕುಳಿತು ತನ್ನ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಳಿಕ ಅಲ್ಲಿದ್ದ ನಾಗರಿಕರು ವೃದ್ಧನ ಮನವೊಲಿಸಿ ಅದೇ ಬಸ್‌ ಹತ್ತಿಸಿ ಆಲೂರಿಗೆ ಕಳುಹಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಹಾಸನ | ಆಕಸ್ಮಿಕ ಬೆಂಕಿ; ನೂರಾರು ಎಕೆರೆ ಕಾಫಿ ತೋಟ ಬೆಂಕಿಗಾಹುತಿ

ಬೆಂಗಳೂರು – ಮಂಗಳೂರು ನಡುವೆ ಸಂಚರಿಸುವ ಬಹುತೇಕ ಸರ್ಕಾರಿ ಬಸ್‌ಗಳಲ್ಲಿ ಕಂಡಕ್ಟರ್‌ಗಳು ಬಸ್‌ ಪಾಸ್‌ ಹೊಂದಿರುವ ವಿದ್ಯಾರ್ಥಿಗಳು ಮತ್ತು ಸ್ಥಳೀಯ ಪ್ರಯಾಣಿಕರಿಗೆ ಬಸ್‌ ಹತ್ತಲು ಅವಕಾಶ ನೀಡುವುದಿಲ್ಲ. ಸ್ಥಳೀಯರನ್ನು ಬಸ್‌ ಹತ್ತಿಸಿಕೊಂಡರೆ ದೂರದ ಪ್ರಯಾಣಿಕರು ಸಿಗುವುದಿಲ್ಲ ಎಂಬ ಉದ್ದೇಶದಿಂದ ಹೀಗೆ ಸ್ಥಳೀಯ ಪ್ರಯಾಣಿಕರನ್ನು ನಿರ್ಲಕ್ಷ್ಯ ಮಾಡಲಾಗುತ್ತದೆ. ಸಂಬಂಧಪಟ್ಟ ಅಧಿಕಾರಿಗಳು ಕೆಎಸ್‌ಆರ್‌ಟಿಸಿ ಸಿಬ್ಬಂದಿಗೆ ಈ ಕುರಿತು ಸೂಕ್ತ ನಿರ್ದೇಶನ ನೀಡಬೇಕಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

Download Eedina App Android / iOS

X