ಫೇಸ್‌ಬುಕ್‌ನಲ್ಲಿ ಫೋಟೋ ಹಾಕಿ ಮಹಿಳೆಯರ ತೇಜೋವಧೆ: ಪುನೀತ್ ಕೆರೆಹಳ್ಳಿ ಹಿಂಬಾಲಕ ಪದ್ದು ಮಹಾರಾಜ್‌ಗೆ ಧರ್ಮದೇಟು!

Date:

Advertisements

ಸಾಮಾಜಿಕ ಜಾಲತಾಣವಾದ ಫೇಸ್‌ಬುಕ್‌ನಲ್ಲಿ ಕನ್ನಡಪರ ಹೋರಾಟಗಾರನೋರ್ವ ಹಾಗೂ ಮತ್ತವರ ಕುಟುಂಬದ ಮಹಿಳೆಯರ ಫೋಟೋ ಹಾಕಿ, ತೇಜೋವಧೆ ಮಾಡುತ್ತಿದ್ದ ಕೊಲೆ ಆರೋಪಿ ಪುನೀತ್ ಕೆರೆಹಳ್ಳಿಯ ಹಿಂಬಾಲಕ ಹಾಗೂ ಸಂಘಪರಿವಾರದ ಕಾರ್ಯಕರ್ತನಿಗೆ ಧರ್ಮದೇಟು ಬಿದ್ದಿರುವ ಘಟನೆ ಬೆಂಗಳೂರಿನಲ್ಲಿ ಭಾನುವಾರ ಸಂಜೆ ನಡೆದಿದೆ.

ಸಾರ್ವಜನಿಕರಿಂದ ಪೆಟ್ಟು ತಿಂದ ವ್ಯಕ್ತಿಯನ್ನು ಪದ್ದು ಮಹಾರಾಜ್ ಎಂದು ಗುರುತಿಸಲಾಗಿದೆ.

ಫೇಸ್‌ಬುಕ್‌ನಲ್ಲಿ ‘ತಪ್ಪು ಮಾಡುವವರ ಅಪ್ಪ ನಾನೆ’ ಎಂಬ ಐಡಿಯಲ್ಲಿ ಲೈವ್‌ ಮಾಡುತ್ತಾ, ಹೆಣ್ಣು ಮಕ್ಕಳ ಬಗ್ಗೆ ಅಶ್ಲೀಲವಾಗಿ ಮಾತನಾಡುತ್ತಿದ್ದುದ್ದಲ್ಲದೇ, ಅವಾಚ್ಯ ಶಬ್ದಗಳನ್ನು ಬಳಸುತ್ತಿದ್ದನು. ಇತ್ತೀಚೆಗೆ ಕನ್ನಡಪರ ಹೋರಾಟಗಾರ ನಟರಾಜ್ ಬೊಮ್ಮಸಂದ್ರ ಎಂಬುವವರ ಮನೆಯವರ ಫೋಟೋ ಹಾಕಿ, ಈ ಪೋಸ್ಟ್‌ ಡಿಲೀಟ್ ಮಾಡಬೇಕೆಂದರೆ 50 ಸಾವಿರ ನೀಡುವಂತೆ ಬಹಿರಂಗವಾಗಿ ಬೆದರಿಸಿದ್ದ. ಅಲ್ಲದೇ, ಚಾಕು ತೋರಿಸಿ, ಪಕ್ಕದಲ್ಲೇ ಇಟ್ಟಿರುತ್ತೇನೆ. ತಾಕತ್ತಿದ್ದರೆ ಬನ್ನಿ ಎಂದು ಸವಾಲೆಸೆದು, ಮನೆಯ ವಿಳಾಸವನ್ನೂ ನೀಡಿದ್ದನು. ಫೇಸ್‌ಬುಕ್‌ ಲೈವ್‌ನಲ್ಲೇ ಜೀವ ಬೆದರಿಕೆ ಹಾಕಿದ್ದ.

Advertisements

ಇಂದು ಸಂಜೆ ಈತನನ್ನು ಪತ್ತೆ ಹಚ್ಚಿದ ಅವಮಾನಕ್ಕೊಳಗಾದ ಮಹಿಳೆಯರು ಹಾಗೂ ಸಾರ್ವಜನಿಕರು, ಧರ್ಮದೇಟು ನೀಡಿದ್ದು, ಬಳಿಕ ಪೊಲೀಸರಿಗೆ ಒಪ್ಪಿಸಿದ್ದಾರೆ. ಆ ಬಳಿಕ ಸ್ಥಳಕ್ಕೆ ಪದ್ದು ಮಹಾರಾಜ್‌ನ ತಾಯಿ ಹಾಗೂ ಸಹೋದರಿಯನ್ನು ಕರೆಸಿಕೊಂಡಿದ್ದಾರೆ.

ಈತ ಸಂಘಪರಿವಾರದ ಕಾರ್ಯಕರ್ತನಂತೆ ಫೋಸು ಕೊಟ್ಟು, ಪುನೀತ್ ಕೆರೆಹಳ್ಳಿಯ ಸಹವಾಸ ಕೂಡ ಮಾಡಿದ್ದ. ಸದ್ಯ ಈತನನ್ನು ಕಾಮಾಕ್ಷಿಪಾಳ್ಯ ಪೊಲೀಸರು ವಶಕ್ಕೆ ಪಡೆದಿದ್ದು, ದೂರು ದಾಖಲಿಸಿದ್ದಾರೆ.

ಈತ ಈ ಹಿಂದೆ, ಕನ್ನಡ ಹೋರಾಟಗಾರ ರೂಪೇಶ್ ರಾಜಣ್ಣ‌ನವರಿಗೆ ಕರೆ ಮಾಡಿ ಬಾಯಿಗೆ ಬಂದಂತೆ ಬಯ್ದು ಹೆಣ್ಣುಮಗುವನ್ನು ರೇಪ್ ಮಾಡ್ತಿನಿ ಎಂದು ಬೆದರಿಕೆಯೂ ಹಾಕಿದ್ದ. ಕುಮಾರಸ್ವಾಮಿ ಲೇಔಟ್‌ನ ಪೊಲೀಸರು ಬಂಧಿಸಿ, ಫೋಕ್ಸೋ ಕಾಯಿದೆಯಡಿ ಪ್ರಕರಣ ದಾಖಲಿಸಿದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ಪಾಪ ತಾಯಿ ಮತ್ತು ಸಹೋದರಿ ಗೆ ಎಷ್ಟು ಕಷ್ಟ ಕೊಟ್ಟಿರಬಹುದು ಅಲ್ವಾ?
    ಮನೆಯಲ್ಲಿ ಈತರ ಗುಟ್ಕಾ ತಿಂದು ಬದುಕುತ್ತವೆ ಇವು

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X