ಕಲಬುರಗಿ | ಪೋಲಿಯೋ ಲಸಿಕೆ ಹಾಕಿಸಿ, ಮಕ್ಕಳ ಆರೋಗ್ಯ ರಕ್ಷಿಸಿ; ತಹಶೀಲ್ದಾರ್ ಸೈಯದ್ ಷಾಶಾವಲಿ

Date:

Advertisements

ಐದು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿಸಿ ಮಕ್ಕಳ ಆರೋಗ್ಯವನ್ನು ರಕ್ಷಿಸಬೇಕು ಎಂದು ತಹಶೀಲ್ದಾರ್ ಸೈಯದ್ ಷಾಶಾವಲಿ ಸಾರ್ವಜನಿಕರಲ್ಲಿ ಮನವಿ ಮಾಡಿದರು.

ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆರ್‌ಸಿಎಚ್ ವಿಭಾಗ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಪೋಲಿಯೋ ಲಸಿಕಾ ಕಾರ್ಯಕ್ರಮವನ್ನು ಮಕ್ಕಳಿಗೆ ಲಸಿಕೆ ಹಾಕುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.

ಸಾರ್ವಜನಿಕರು ಐದು ವರ್ಷಗಳಿಗಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆಯನ್ನು ಹಾಕಿಸಲು ಹಿಂಜರಿಯದೆ, ಕಡ್ಡಾಯವಾಗಿ ಲಸಿಕೆಯನ್ನು ಹಾಕಿಸಬೇಕು. ಇದರಿಂದ ಮಕ್ಕಳಿಗೆ ಪೋಲಿಯೋ ವೈರಸ್‌ ವಿರುದ್ಧ ಹೋರಾಡಲು ಸಾದ್ಯವಾಗುತ್ತದೆ. ಅಂಗವಿಕಲತೆಯ ಭೀಕರ ಪರಿಣಾಮವನ್ನು ತಡೆಗಟ್ಟಲು ಸಾಧ್ಯ. ಮಾ.6ರವರೆಗೆ ಈ ಅಭಿಯಾನ ನಡೆಯಲಿದೆ ಎಂದರು.

Advertisements

ತಾಲೂಕು ವೈದ್ಯಾಧಿಕಾರಿ ಡಾ.ಸಂತೋಷ್ ಅಲಗೂರ್ ಮಾತನಾಡಿ, “ತಾಲೂಕಿನಾದ್ಯಂತ ಐದು ವರ್ಷಗಳಿಗಿಂತ ಕಡಿಮೆ ವಯಸ್ಸಿನ 53,867 ಮಕ್ಕಳಿದ್ದು, ಅವರಿಗೆ ಲಸಿಕೆ ಹಾಕಲು ಒಟ್ಟು 233 ಟ್ರಾನಜಿಟ್ ಬೂತ್, 22 ಮೊಬೈಲ್ ಟೀಮ್ ರಚಿಸಲಾಗಿದೆ. ನಾಲ್ಕು ದಿನಗಳ ಲಸಿಕಾ ಪ್ರಕ್ರಿಯೆ ಇದ್ದು ಇಂದು ಬೂತ್ ಮಟ್ಟದಲ್ಲಿ ಲಸಿಕೆ ಹಾಕಲಾಗುವುದು” ಎಂದು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ತಾಲೂಕ ಅಧಿಕಾರಿ ಆರತಿ ತುಪ್ಪದ, ಆಸ್ಪತ್ರೆಯ ಅಧಿಕಾರಿ ಡಾ.ಮುಬಾಶೇರ್, ಕಾಳಮ್ಮ ಮಠಪತಿ ಸೇರಿದಂತೆ ಸಿಬ್ಬಂದಿ ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X