ಬೆಂಗಳೂರು | ಮೂರು ವರ್ಷದ ಮಗುವಿಗೆ ದೌರ್ಜನ್ಯ ಪ್ರಕರಣ: ತಾಯಿ, ಆಕೆಯ ಪ್ರಿಯಕರನ ಬಂಧನ

Date:

Advertisements

ಹೆತ್ತ ತಾಯಿಯೇ ಮೂರು ವರ್ಷದ ಮಗುವನ್ನು ಮನೆಯಲ್ಲಿ ಕೂಡಿ ಹಾಕಿ, ಮನಬಂದಂತೆ ಥಳಿಸಿ ಚಿತ್ರಹಿಂಸೆ ನೀಡಿರುವ ಅಮಾನುಷ ಘಟನೆ ಬೆಂಗಳೂರಿನ ವಿಜಯನಗರದ ವೀರಭದ್ರನಗರದಲ್ಲಿ ನಡೆದಿತ್ತು. ಈ ಹಿನ್ನೆಲೆಯಲ್ಲಿ ತಾಯಿ ಶಾರಿನ್‌ ಮತ್ತು ಆಕೆಯ ಪ್ರಿಯಕರನನ್ನು ಗಿರಿನಗರ ಪೊಲೀಸರು ಬಂಧಿಸಿದ್ದಾರೆ.

ಶಾರಿನ್‌ ಎಂಬ ಮಹಿಳೆ ತನ್ನ ಮೂರು ವರ್ಷದ ಮಗುವಿಗೆ ಕೊಡಬಾರದ ಹಿಂಸೆ ಕೊಟ್ಟಿದ್ದು, ಮಗುವಿನ ಮೈ ತುಂಬಾ ಗಾಯಗಳಾಗಿದ್ದವು. ಕುಕ್ಕರ್‌ನಿಂದ ಬಡಿದಿರುವುದಾಗಿ ಹೇಳಿಕೊಂಡಿದ್ದ ಮಗುವಿನ ಹಣೆ, ತಲೆಗೂ ಗಾಯಗಳಾಗಿದ್ದವು. ಮಗುವಿನ ಕೈ ಬೆರಳುಗಳಲ್ಲಿ ರಕ್ತ ಹೆಪ್ಪುಗಟ್ಟಿ ಊದಿಕೊಂಡಿದ್ದವು.

ಮೂರು ವರ್ಷದ ಮಗು ತನ್ನ ತೊದಲು ನುಡಿಯಲ್ಲೇ, “ಅಮ್ಮ ತನಗೆ ಹೊಡೆದು ಕೂಡಿ ಹಾಕಿದ್ದಾಳೆ, ಹಸಿವಾಗಿದೆ ಎಂದರೂ ಊಟ ಕೊಡುತ್ತಿಲ್ಲ. ನನಗೆ ನೀನು ಬೇಡ ಆಚೆ ಹೋಗೆಂದು ಹೊಡೆಯುತ್ತಿದ್ದಾಳೆ. ಮನೆಗೆ ಬಂದ ಅಂಕಲ್‌ ಕೂಡ ಕುಕ್ಕರ್‌ನಿಂದ ತಲೆಗೆ ಹೊಡೆದಿದ್ದಾರೆ” ಎಂದು ಹೇಳಿಕೊಂಡಿರುವ ದೃಶ್ಯ ಸಾಮಾಜಿಕ ಜಾಲಾತಾಣದಲ್ಲಿ ವೈರಲಾಗಿತ್ತು.

Advertisements

ಸ್ಥಳೀಯರ ಪ್ರಕಾರ, “ಶಾರಿನ್ ಎಂಬ ಮಹಿಳೆ ಕೆಲವು ದಿನಗಳ ಹಿಂದೆಯಷ್ಟೇ ವೀರಭದ್ರನಗರಕ್ಕೆ ಬಂದಿದ್ದು, ಈಗ ಏಕಾಏಕಿಯಾಗಿ ಮನೆ ಖಾಲಿ ಮಾಡುವುದಾಗಿ ಹೇಳಿ ಮನೆ ಖಾಲಿ ಮಾಡಲು ಮುಂದಾಗಿದ್ದಾಳೆ. ಈ ವೇಳೆ ಆಕೆಯನ್ನು ಹಿಡಿದಿದ್ದೇವೆ. ಹಲವು ದಿನಗಳಿಂದ ಮಹಿಳೆ ಹಗಲಲ್ಲಿ ತಾನು ಕೆಲಸಕ್ಕೆ ಹೋಗುವಾಗ ಮಗುವನ್ನು ಮನೆಯಲ್ಲಿ ಕೂಡಿಟ್ಟು, ಹೊರಗಡೆ ಬೀಗ ಹಾಕಿ ಹೋಗುತ್ತಿದ್ದಳು. ಮಗು ಹಸಿವು ಎಂದು ಕೂಗಿಕೊಂಡರೂ ಮಗುವಿಗೆ ಏನೂ ಕೊಡದೆ ಹಿಂಸಿಸುತ್ತಿದ್ದರು” ಎಂದು ಮಾಹಿತಿ ನೀಡಿದ್ದಾರೆ.

ಮಗುವಿನ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದ್ದಂತೆ ಮಕ್ಕಳ ಕಲ್ಯಾಣ ಸಮಿತಿಯಿಂದ ಮಗುವನ್ನು ರಕ್ಷಣೆ ಮಾಡಿದ್ದು, ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆಯಲ್ಲಿ ಮಗುವಿಗೆ ಚಿಕಿತ್ಸೆ ನೀಡುತ್ತಿರುವುದಾಗಿ ತಿಳಿದುಬಂದಿದೆ.

ಮಹಿಳೆಯು, “ತನಗೆ ವಿಚ್ಛೇದನಕ್ಕಾಗಿ ಅರ್ಜಿ ಹಾಕಿದ್ದೇನೆ. ನಾನಿರುವ ಸ್ಥಿತಿಯಲ್ಲಿ ನನಗೆ ಮಗು ನೋಡಿಕೊಳ್ಳಲು ಆಗುತ್ತಿಲ್ಲ. ಮಗು ಬುದ್ಧಿ ಕಲಿಯಲಿ, ಸ್ವಂತ ಕಾಲಿನ ಮೇಲೆ ನಿಲ್ಲಲಿ ಎಂದು ಮನೆಗೆ ಬೀಗ ಹಾಕಿ ಹೋಗಿದ್ದೇನೆ. ಆ ವೇಳೆ ಮಗು ಬಿದ್ದು ಗಾಯವಾಗಿದೆ ಅಷ್ಟೇ. ಆದರೆ, ಸುಳ್ಳು ಹೇಳುತ್ತಿದೆ” ಎಂದು ಮಾಧ್ಯಮಗಳ ಮುಂದೆಯೇ ಆರೋಪಿ ತಾಯಿ ಹೇಳಿಕೆ ನೀಡಿದ್ದರು.

ಈ ಸುದ್ದಿ ಓದಿದ್ದೀರಾ? ಕಡಬ | ಮೂವರು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ; ಕಿಡಗೇಡಿ ಬಂಧನ

ತಲೆಮರೆಸಿಕೊಂಡಿದ್ದ ಆಕೆಯ ಪ್ರಿಯಕರ ಮತ್ತು ಆಕೆ ಇಬ್ಬರನ್ನೂ ಗಿರಿನಗರ ಪೊಲೀಸರು ಬಂಧಿಸಿದ್ದು, ಪ್ರಕರಣ ದಾಖಲಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಈ ದಿನ.ಕಾಮ್‌ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ತಿಪ್ಪೇಸ್ವಾಮಿ ಅವರನ್ನು ಸಂಪರ್ಕಿಸಿದೆ. ಆದರೆ ಅವರು ಕರೆಗೆ ಲಭ್ಯವಾಗಿಲ್ಲ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

ಧಾರವಾಡ | ಹಾಳುಬಿದ್ದ ಸಂಶಿ ಎಪಿಎಂಸಿ; ವಾರದ ಸಂತೆ ಸ್ಥಳಾಂತರಿಸಲು ಒತ್ತಾಯ

ಸರ್ಕಾರದ ಮಟ್ಟದಲ್ಲಿ ಆಗುವ ಯೋಜನೆಗಳ ಅನುಷ್ಠಾನ ಮಾಡುವಲ್ಲಿ ನಿರ್ಲಕ್ಷ್ಯ ವಹಿಸುವುದರಿಂದ ಇತ್ತ...

Download Eedina App Android / iOS

X