ಶಾಸಕ, ಸಂಸದರಿಗೆ ಲಂಚ ಪ್ರಕರಣದಿಂದ ವಿನಾಯಿತಿಗೊಳಿಸುವ ತೀರ್ಪು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

Date:

Advertisements

ಶಾಸಕ ಹಾಗೂ ಸಂಸದರು ಭಾಷಣ ಮಾಡಲು ಹಾಗೂ ಮತಕ್ಕಾಗಿ ಪಡೆಯುವ ಲಂಚಕ್ಕೆ ವಿನಾಯಿತಿ ನೀಡುವ 1998ರ ತೀರ್ಪನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ.

“ಲಂಚ ತೆಗೆದುಕೊಂಡಾಗ ಅದು ಸಂಪೂರ್ಣ ಲಂಚವಾಗುತ್ತದೆ” ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ತಿಳಿಸಿದ್ದಾರೆ.

ಸುಪ್ರೀಂ ಕೋರ್ಟ್‌ನ ಏಳು ಸದಸ್ಯರ ಸಾಂವಿಧಾನಿಕ ಪೀಠ ಸರ್ವಾನುಮತದ ತೀರ್ಪು ನೀಡಿದೆ.

Advertisements

“ಶಾಸಕ ಸದಸ್ಯರು ಪಡೆಯುವ ಲಂಚ ಹಾಗೂ ಭ್ರಷ್ಟಾಚಾರವು ಸಾರ್ವಜನಿಕ ಜೀವನದಲ್ಲಿನ ಪ್ರಾಮಾಣಿಕತೆಯನ್ನು ಹಾಳುಗೆಡುವುತ್ತದೆ. ವಿವಾದದ ಎಲ್ಲ ಅಂಶಗಳಿಂದ ನಾವು ಸ್ವತಂತ್ರವಾಗಿ ತೀರ್ಪು ನೀಡಿದ್ದೇವೆ. ಸಂಸದರು ವಿನಾಯಿತಿಯಿಂದ ಸಂತಸ ಪಡುತ್ತಾರೆಯೆ? ಬಹುತೇಕ ಈ ಅಂಶವನ್ನು ಒಪ್ಪುವುದಿಲ್ಲ,  ರದ್ದುಗೊಳಿಸುತ್ತೇವೆ” ಎಂದು ಹೇಳಿದರು.

1998ರ ತೀರ್ಪಿನಲ್ಲಿ ಐದು ಸದಸ್ಯರ ಪೀಠವು ಸಂವಿಧಾನದ 105(2) ಹಾಗೂ 194(2)ರ ವಿಧಿಗಳಿಂದ ನೀಡಲಾದ ಸವಲತ್ತುಗಳ ಅಡಿಯಲ್ಲಿ ಶಾಸಕರು ಮತ್ತು ಸಂಸದರು ಭಾಷಣ ಹಾಗೂ ಮತ ಪಡೆಯಲು ನೀಡುವ ಲಂಚಕ್ಕೆ ವಿನಾಯಿತಿ ನೀಡುವ ಕಾನೂನು ನೀಡಿ ತೀರ್ಪು ನೀಡಿತ್ತು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ‘ಬ್ರ್ಯಾಂಡ್ ಬೆಂಗಳೂರು’ ಬಡವರು ಬದುಕಲು ಯೋಗ್ಯವಾದ ನಗರವೂ ಆಗಲಿ

ಆದಾಗ್ಯೂ, 2012ರ ಮನವಿಯಲ್ಲಿ ಜೆಎಂಎಂ ನಾಯಕ ಸೀತಾ ಸೊರೆನ್ ರಾಜ್ಯಸಭೆಯಲ್ಲಿ ಮತ ಪಡೆಯಲು ಲಂಚ ಸ್ವೀಕರಿಸಿದ್ದಕ್ಕೆ ಆರೋಪಿಸಲಾಗಿತ್ತು. ಇವರು 105ರ ವಿಧಿಯಡಿ ವಿನಾಯಿತಿ ಕೋರಿದ್ದರು. ಅರ್ಜಿದಾರರ ಮನವಿಯನ್ನು ಜಾರ್ಖಂಡ್‌ ಕೋರ್ಟ್ ವಜಾಗೊಳಿಸಿತ್ತು. ನಂತರ ಇದನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು.

2023ರ ಅಕ್ಟೋಬರ್‌ನಲ್ಲಿ ಸುಪ್ರೀಂ ಕೋರ್ಟ್‌ನ 7 ಸದಸ್ಯರ ಪೀಠವು ಅಟಾರ್ನಿ ಜನರಲ್, ಸಾಲಿಸಿಟರ್ ಜನರಲ್ ಮತ್ತು ಅಮಿಕಸ್ ಕ್ಯೂರಿ ಪಿ.ಎಸ್.ಪಟ್ವಾಲಿಯಾ ಸೇರಿದಂತೆ ವಕೀಲರ ತಂಡ ಎರಡು ದಿನಗಳ ಸುದೀರ್ಘ ವಾದಗಳನ್ನು ಮಂಡಿಸಿದ ನಂತರ ತೀರ್ಪನ್ನು ಕಾಯ್ದಿರಿಸಿತ್ತು.

ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ಏಳು ಸದಸ್ಯರ ಸಾಂವಿಧಾನಿಕ ಪೀಠದಲ್ಲಿ ನ್ಯಾಯಮೂರ್ತಿಗಳಾದ ಎ.ಎಸ್.ಬೋಪಣ್ಣ, ಎಂ.ಎಂ.ಸುಂದರೇಶ್, ಪಿ.ಎಸ್.ನರಸಿಂಹ, ಜೆ.ಬಿ.ಪರ್ಡಿವಾಲ, ಸಂಜಯ್ ಕುಮಾರ್ ಮತ್ತು ಮನೋಜ್ ಮಿಶ್ರಾ ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

Download Eedina App Android / iOS

X