ಅಲ್ಪಸಂಖ್ಯಾತರ ಮೇಲೆ ಆರೋಪ ಬಂದರೆ ಪ್ರಕರಣ ಮುಚ್ಚಿಹಾಕಲು ಸರ್ಕಾರದಿಂದ ನಿರ್ದೇಶನ: ಆರ್‌ ಅಶೋಕ್‌ ಆರೋಪ

Date:

Advertisements

ಅಲ್ಪಸಂಖ್ಯಾತರ ಮೇಲೆ ಆರೋಪ ಬಂದರೆ ಅದನ್ನು ಮುಚ್ಚಿಹಾಕಿ, ಬಹು ಸಂಖ್ಯಾತರ ಮೇಲೆ ಆರೋಪ ಬಂದರೆ ಕೂಡಲೇ ಕ್ರಮ ಕೈಗೊಳ್ಳಿ ಎಂದು ಪೊಲೀಸ್ ಇಲಾಖೆಗೆ ಸರ್ಕಾರದಿಂದ ನಿರ್ದೇಶನ ಹೋಗಿದೆ ಎಂದು ವಿಧಾನಸಭಾ ಪ್ರತಿಪಕ್ಷದ ನಾಯಕ ಆರ್‌ ಅಶೋಕ್‌ ಅರೋಪಿಸಿದರು.

ಬೆಂಗಳೂರನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಪಾಕಿಸ್ತಾನ ಪರ ಘೋಷಣೆಯ ಆರೋಪ ಸಾಬೀತಾದರೆ ಸರ್ಕಾರ ವಿಸರ್ಜನೆ ಮಾಡುತ್ತಾರೆಯೇ?” ಎಂದು ಸವಾಲು ಹಾಕಿದರು.

ಕೆಪೆ ಸ್ಪೋಟ ವಿಚಾರವಾಗಿ ಮಾತನಾಡಿ, “ಉದ್ಯಮ ಸಂಘರ್ಷದಿಂದ ದಾಳಿ ಎಂದು ಹೇಳಿದ್ದು ಯಾರು? ಹೀಗೆ ಹೇಳಿದರೆ ಕರ್ನಾಟಕದಲ್ಲಿ ಭಯೋತ್ಪಾದನಾ ಚಟುವಟಿಕೆ ಮುಂದುವರಿಸುತ್ತಾರೆ. ತಪ್ಪಿತಸ್ಥರ ವಿರುದ್ಧ ಕೂಡಲೇ ಕ್ರಮ ತೆಗೆದುಕೊಳ್ಳಬೇಕು” ಎಂದು ಒತ್ತಾಯಿಸಿದರು.

Advertisements

“ಕಾಂಗ್ರೆಸ್ ಸರ್ಕಾರದ ಮನಸ್ಥಿತಿಗೆ ನೊಬೆಲ್ ಪ್ರಶಸ್ತಿಯನ್ನೇ ಕೊಡಬೇಕು. ಗೃಹ ಸಚಿವರು ಈಗ ಯಾರದ್ದೋ ಹಿತಾಸಕ್ತಿಯ ಕೈವಾಡಕ್ಕೆ ಸಿಲುಕಿ ಒದ್ದಾಡುತ್ತಿದ್ದಾರೆ. ಇಲ್ಲದಿದ್ದರೆ ಇದ್ದ ರಿಪೋರ್ಟ್‌ ಇದ್ದ ಹಾಗೆ ಅವರು ಕೊಡುತ್ತಿದ್ದರು. ಅವರ ಮೇಲೆ ಒತ್ತಡ ಇರುವುದು ಸತ್ಯ” ಎಂದರು.

“ಖಾಸಗಿ ಎಫ್​ಎಸ್​ಎಲ್ ರಿಪೋರ್ಟ್​​ನಲ್ಲಿ ಪಾಕ್​ ಪರ ಘೋಷಣೆ ಕೂಗಿದ್ದು ದೃಢವಾಗಿದೆ. ಸರ್ಕಾರಕ್ಕೆ ಕೂಡ ಈಗಾಗಲೇ ಎಫ್​ಎಸ್​ಎಲ್​ ವರದಿ ಬಂದಿದೆ. ಯಾರನ್ನೋ ಕಾಪಾಡಲು ರಾಜ್ಯ ಸರ್ಕಾರ ಮುಚ್ಚಿಡುವ ಕೆಲಸ ಮಾಡುತ್ತಿದೆ” ಎಂದು ಆರೋಪಿಸಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

Download Eedina App Android / iOS

X