ವಿಜಯಪುರ | ಕೆರೆ ತುಂಬಿಸಲು 1,350 ಅಡಿ ಉದ್ದದ ಕಾಲುವೆಗೆ ತಾಡಪಾಲ ಹಾಕಿದ ರೈತರು

Date:

Advertisements

ತಮ್ಮೂರಿನ ಕೆರೆ ನೀರು ಹರಿಸಲು, ಕಾಲುವೆಗೆ 1,350 ಅಡಿ ಉದ್ದಕ್ಕೆ ತಾಡಪಾಲನ್ನು ಹಾಕಿ ಕೆರೆಗೆ ನೀರು ತುಂಬಿಸಲು ಮುಂದಾಗಿದ್ದಾರೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಅಗಸಬಾಳದ ಗ್ರಾಮದ ರೈತರು.

ಫೆಬ್ರುವರಿ 19ರಿಂದ ಆಲಮಟ್ಟಿ ಜಲಾಶಯದಿಂದ ಕಾಲುವೆಗಳ ಮೂಲಕ ಕೆರೆಗಳನ್ನು ತುಂಬಿಸಲು ನೀರು ಬಿಡಲಾಗುತ್ತಿದೆ. ಮಾರ್ಚ್ ಮೊದಲ ವಾರದಲ್ಲಿ ಮುಳವಾಡ ಏತ ನೀರಾವರಿ ಯೋಜನೆಯಡಿ ಬರುವ ಹೂವಿನಹಿಪ್ಪರಗಿ ಶಾಖಾ ಕಾಲುವೆಯಿಂದ ಅಗಸಬಾಳ ಕೆರೆಗೂ ನೀರು ಹರಿಸುವುದಾಗಿ ಅಧಿಕಾರಿಗಳು ಹೇಳಿದ್ದಾರೆ. ಕಾಲುವೆ ಪೂರ್ಣಗೊಂಡಿಲ್ಲ. ಆದರೆ, ರೈತರು ಕೆಲ ಗುತ್ತಿಗೆದಾರರ ಸಹಾಯದಿಂದ ಕಾಲುವೆಯಲ್ಲಿದ್ದ ಮಣ್ಣು ತೆಗೆಸಿ ತಾತ್ಕಾಲಿಕವಾಗಿ ದುರಸ್ತಿ ಮಾಡಿಸಿದ್ದಾರೆ..

ಬಳಿಕ ಕೃಷಿ ಹೊಂಡಕ್ಕೆ ಬಳಸುವ ತಾಡಪಾಲನ್ನು 100ಕ್ಕೂ ಹೆಚ್ಚು ಜನ ರೈತರು ಸೇರಿ ಶ್ರಮದಾನ ಮಾಡಿ ಕಾಲುವೆಗೆ ಅಳವಡಿಸಿದ್ದಾರೆ.

Advertisements

ಒಟ್ಟು 1,350 ಅಡಿ ಉದ್ದ, 30 ಅಡಿ ಅಗಲದ ತಾಡಪಾಲನ್ನು 1.30 ಲಕ್ಷ ರೂ. ವೆಚ್ಚದಲ್ಲಿ ದಾವಣಗೆರೆಯಿಂದ ಖರೀದಿಸಿ ತಂದು ಕಾಲುವೆಗೆ ಹಾಕಿದ್ದಾರೆ ರೈತರು. ಸಂಬಂಧಿಸಿದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದಾಗ, ನಮ್ಮಿಂದ ಏನು ಮಾಡಲು ಸಾಧ್ಯವಿಲ್ಲ. ನೀವೇ ನೀರು ಹರಿಸಿಕೊಳ್ಳಲು ಏನಾದರೂ ವ್ಯವಸ್ಥೆ ಮಾಡಿಕೊಳ್ಳಿ ಎಂದಿದ್ದರು. ನೀರಿನ ಅವಶ್ಯಕತೆ ನಮಗಿದೆ. ಹೀಗಾಗಿ ತಾತ್ಕಾಲಿಕವಾಗಿ ನಾವೇ ಕಾಲುವೆಗೆ ತಾಡಪಾಲ ಹಾಕಿ ಕೆರೆಗೆ ನೀರು ಹರಿಸಲು ಶ್ರಮದಾನ ಮಾಡಿದ್ದೇವೆ ಎಂದು ರೈತರು ಮಾಧ್ಯಮಗಳಿಗೆ ತಿಳಿಸಿದರು.

ಮುಳವಾಡ ಏತ ನೀರಾವರಿ ಯೋಜನೆಯಡಿ ಈ ಕಾಲುವೆ ನಿರ್ಮಿಸಲಾಗಿದ್ದು, ಕಾಲುವೆಯಲ್ಲಿ ಮಣ್ಣು ತುಂಬಿತ್ತು. ಅದನ್ನು ಜೆಸಿಬಿಯಿಂದ ತೆರವುಗೊಳಿಸಿ, ಪ್ರತೀ ಮನೆಯಿಂದಲೂ ತಲಾ 1,000 ರೂ. ಹಣ ಹಾಕಿ ಈ ಕಾರ್ಯ ಮಾಡಿದ್ದಾರೆ ಎಂದು ಗ್ರಾಮ ಪಂಚಾಯಿತಿ ಸದಸ್ಯರು ಮಾಹಿತಿ ಹಂಚಿಕೊಂಡಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X