ದಾವಣಗೆರೆ | ಕನ್ನಡೇತರ ನಾಮಫಲಕ ತೆರವು ಕಾರ್ಯಾಚರಣೆ

Date:

Advertisements

ದಾವಣಗೆರೆಯಲ್ಲಿ ಕನ್ನಡ ನಾಮಫಲಕ ಅಳವಡಿಸದ ವಾಣಿಜ್ಯ ಮಳಿಗೆಗಳು ಮತ್ತು ಇತರೆಡೆಗಳಲ್ಲಿ ನಾಮಫಲಕಗಳನ್ನು ತೆರವುಗೊಳಿಸುವ ಕಾರ್ಯಾಚರಣೆಯನ್ನು ದಾವಣಗೆರೆ ಮಹಾನಗರ ಪಾಲಿಕೆ ಅಧಿಕಾರಿಗಳು ಪ್ರಾರಂಭಿಸಿದ್ದಾರೆ.

ಇತ್ತೀಚೆಗೆ, ಶೇ.60ರಷ್ಟು ನಾಮಪಲಕಗಳನ್ನು ಅಳವಡಿಸದ ಮಳಿಗೆಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಈ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಅಧಿಕಾರಿಗಳು ಬುಧವಾರ ಕಾರ್ಯಾಚರಣೆ ಆರಂಭಿಸಿದ್ದಾರೆ.

ದಾವಣಗೆರೆ ನಗರದ ರೈಲ್ವೆ ಸ್ಟೇಷನ್ ಹಿಂಭಾಗ ಗಡಿಯಾರ ಕಂಬದಿಂದ ಮಂಡಿಪೇಟೆಯಲ್ಲಿ ಆಂಗ್ಲ ಭಾಷೆಯ ನಾಮಫಲಕಗಳನ್ನು ಎರಡು ಬದಿಗಳಲ್ಲಿ ತೆರವು ಗೊಳಿಸುವ ಕಾರ್ಯಚರಣೆ ನಡೆಯಿತು. ಈ ವೇಳೆ ಕೆಲವು ಅಂಗಡಿಯ ಮಾಲೀಕರು ಅವರು ಬರುವುದನ್ನು ಕಂಡು ತಾವೆ ಸ್ವತಃ ತೆರವುಗೊಳಿಸುತ್ತಿದ್ದರು. ಒಟ್ಟಿನಲ್ಲಿ ತಡವಾಗಿಯಾದರೂ ಕನ್ನಡ ಪರ ಆದೇಶದ ಪಾಲನೆಯಾಗುತ್ತಿರುವುದು ಕನ್ನಡ ಪ್ರಿಯರಲ್ಲಿ ಮತ್ತು ಹೋರಾಟಗಾರರಲ್ಲಿ ನಾಗರಿಕರಲ್ಲಿ ಸಂತಸ ಗೊಂಡಿದ್ದಾರೆ.

Advertisements

‌ಈ ಬಗ್ಗೆ ಮಾಹಿತಿ ನೀಡಿದ ಸಿಬ್ಬಂದಿ ಮಾರುತಿ ಎರಡು ಮೂರು ತಂಡಗಳು ದಾವಣಗೆರೆಯಲ್ಲಿ ಶೇಕಡಾ 60ರಷ್ಟು ಕನ್ನಡ ಆದೇಶ ಪಾಲಿಸದ ನಾಮ ಫಲಕಗಳನ್ನು ತೆರವುಗೊಳಿಸಲು ಗೊಳಿಸುವ ಕೆಲಸ ಮಾಡುತ್ತಿದ್ದಾರೆ. ಈ ಮುಂಚೆ ಹಲವು ಬಾರಿ ಆದೇಶ ಪಾಲಿಸದವರಿಗೆ ಎಚ್ಚರಿಸಿದ್ದರೂ , ಯಾರು ಆದೇಶ ಪಾಲನೆ ಮಾಡಿಲ್ಲವೋ ಅಲ್ಲಿ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುತ್ತೇವೆ. ಎಲ್ಲೆಡೆಯೂ ತೆರವು ಗೊಳಿಸಬೇಕು ಎಂದು ಅಭಿಪ್ರಾಯ ಇದ್ದು, ದಾವಣಗೆರೆಯಲ್ಲಿ ಎಲ್ಲಾ ಕಡೆ ಹಂತ ಹಂತವಾಗಿ ತೆರವು ಗೊಳಿಸುವ ಕೆಲಸ ನಡೆಯುತ್ತದೆ ಎಂದು ತಿಳಿಸಿದರು.

ಈ ಕುರಿತು ಕರ್ನಾಟಕ ರಕ್ಷಣಾ ವೇದಿಕೆಯ ದಾವಣಗೆರೆ ಘಟಕ ಮಂಗಳವಾರ ಪ್ರತಿಭಟನೆ ನಡೆಸಿ ಆದೇಶ ಪಾಲನೆ ಮಾಡದವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿತ್ತು. ನಿನ್ನೆ ನಡೆದ ದಾವಣಗೆರೆ ತಾಲೂಕು ಸಾಹಿತ್ಯ ಸಮ್ಮೇಳನದಲ್ಲೂ ಈ ಕುರಿತು ಕೂಗು ಕೇಳಿ ಬಂದಿತ್ತು.

ತೆರವು ಕಾರ್ಯಾಚರಣೆಯಲ್ಲಿ ಮಹಾನಗರ ಪಾಲಿಕೆಯ ಆರೋಗ್ಯ ವಿಭಾಗದ ಸಿಬ್ಬಂದಿಗಳಾದ ಆರೋಗ್ಯ ನಿರೀಕ್ಷಕ ರಾದ ಡಾ. ಚಂದ್ರಮೋಹನ್, ರಮೇಶ್ ಚಿನ್ನಿಕಟ್ಟೆ ವಿನಾಯಕ್, ರಾಘವೇಂದ್ರ, ಮಾರುತಿ, ಇನ್ನಿತರರು ಹಾಜರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X