ಧಾರವಾಡ | ಮನರೇಗಾ ಕೂಲಿಕಾರ್ಮಿಕರ 270.5 ಕೋಟಿ ರೂ. ವೇತನ ಬಾಕಿ; ಕೇಂದ್ರದ ವಿರುದ್ಧ ಆಕ್ರೋಶ

Date:

Advertisements

ಗ್ರಾಮೀಣ ಪ್ರದೇಶದಲ್ಲಿ ಉದ್ಯೋಗ ಕಲ್ಪಿಸುವ ಉದ್ದೇಶದಿಂದ ಜಾರಿಯಾದ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ (ಮನರೇಗಾ) ಯೋಜನೆ ಹಲವಾರು ಕೂಲಿ ಕಾರ್ಮಿಕರಿಗೆ ಜೀವನಾಡಿಯಾಗಿದೆ. ಆದರೆ, ಸರಿಯಾದ ಸಮಯಕ್ಕೆ ವೇತನ ಸಿಗದೆ ಈ ಕಾರ್ಮಿಕರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ.

ರಾಜ್ಯದ 13 ಜಿಲ್ಲೆಗಳು ಸೇರಿದಂತೆ ಉತ್ತರ ಕರ್ನಾಟಕ ಭಾಗದ ಮನರೇಗಾ ಕೂಲಿಕಾರ್ಮಿಕರ ಅಂದಾಜು 270.5 ಕೋಟಿ ರೂ. ವೇತನವನ್ನು ಕೇಂದ್ರ ಸರ್ಕಾರ ನೀಡುವುದು ಬಾಕಿ ಇದೆ ಎಂದು ಕೂಲಿ ಕಾರ್ಮಿಕರು ಹೇಳಿದ್ದಾರೆ.

ಮನರೇಗಾ ಯೋಜನೆಯು ಗ್ರಾಮೀಣ ಕಾರ್ಮಿಕರಿಗೆ ವರದಾನವಾಗಿದ್ದು, ಗ್ರಾಮೀಣ ಕಾರ್ಮಿಕರಿಗೆ ಅವರ ಸ್ವಂತ ಗ್ರಾಮಗಳಲ್ಲಿ ಉದ್ಯೋಗ ನೀಡುವುದು ಯೋಜನೆಯ ಉದ್ದೇಶ. ಗ್ರಾಮ ಪಂಚಾಯತಿಯಿಂದ ಅನುಷ್ಠಾನಗೊಳ್ಳುವ ಯೋಜನೆಗಳಿಗೆ, ಜಿಲ್ಲಾ ಪಂಚಾಯತಿಯಿಂದ ಅನುಮೋದನೆ ಪಡೆದು ಗ್ರಾಮೀಣ ಪ್ರದೇಶದ ಕೂಲಿಕಾರರನ್ನು ಬಳಸಿಕೊಳ್ಳಬೇಕು. ಹೆಸರು ನೋಂದಾಯಿಸಿದ ಹಾಗೂ ಜಾಬ್ ಕಾರ್ಡ್ ಹೊಂದಿರುವ ಕೂಲಿಕಾರ್ಮಿಕರಿಗೆ ದಿನಕ್ಕೆ 316 ರೂ. ಪಾವತಿಸಿ ಗ್ರಾಮೀಣ ಕಾಮಗಾರಿಗೆ ಬಳಸಿಕೊಳ್ಳಬೇಕು ಎಂಬ ನಿರ್ದೇಶನವಿದೆ. ಮೊತ್ತವನ್ನು ನೇರವಾಗಿ ಕಾರ್ಮಿಕರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ.

Advertisements

ಬಾಗಲಕೋಟೆಯಲ್ಲಿ ಕೂಲಿ ಕಾರ್ಮಿಕರಿಗೆ ಸೇರಬೇಕಿದ್ದ 13.3 ಕೋಟಿ ರೂ. ಬಾಕಿ ಇದೆ, ಬಳ್ಳಾರಿಯಲ್ಲಿ 2.8 ಕೋಟಿ, ಬೆಳಗಾವಿಯಲ್ಲಿ 50.2 ಕೋಟಿ, ಬೀದರ್‌ನಲ್ಲಿ 23.9 ಕೋಟಿ, ಧಾರವಾಡದಲ್ಲಿ 8.6 ಕೋಟಿ, ಗದಗದಲ್ಲಿ 8.9, ಹಾವೇರಿಯಲ್ಲಿ 16.7, ಕಲಬುರಗಿಯಲ್ಲಿ 17. 1 ಕೋಟಿ, ಕೊಪ್ಪಳದಲ್ಲಿ 23.3 ಕೋಟಿ, ರಾಯಚೂರಿನಲ್ಲಿ 23 ಕೋಟಿ, ವಿಜಯನಗರದಲ್ಲಿ 19.1 ಕೋಟಿ, ವಿಜಯಪುರದಲ್ಲಿ 16.2 ಕೋಟಿ, ಯಾದಗಿರಿಯಲ್ಲಿ 28.7 ಕೋಟಿ ರೂ. ವೇತನ ಬಾಕಿ ಇದೆ ಎಂದು ವರದಿಯಾಗಿದೆ.

ʼನಮ್ಮ ಬೇಡಿಕೆಯಂತೆ ಪ್ರತೀ ಕುಟುಂಬಕ್ಕೆ 100 ದಿನಗಳ ವಾರ್ಷಿಕ ಉದ್ಯೋಗಾವಕಾಶವನ್ನು 150 ದಿನಗಳಿಗೆ ಹೆಚ್ಚಳಮಾಡಲಾಗಿದೆ. ಆದರೆ, ತಾಂತ್ರಿಕ ಕಾರಣಗಳಿಂದ ಗ್ರಾಮೀಣ ಭಾಗದಲ್ಲಿ ಜಾರಿಯಾಗುತ್ತಿಲ್ಲ. ಇನ್ನೊಂದೆಡೆ ಕಳೆದ ಎರಡು ತಿಂಗಳಿಂದ ಎಂಜಿಎನ್‌ಇಆರ್‌ಜಿಎ ವೇತನ ಪಾವತಿಯಾಗಿಲ್ಲ. ಗ್ರಾಮೀಣ ಪ್ರದೇಶದಲ್ಲಿ ಕೆಲಸ ಅನಿವಾರ್ಯ. ಆದರೆ, ಬಾಕಿ ಉಳಿಸಿಕೊಂಡಿರುವುದರಿಂದ ಕಾರ್ಮಿಕರಿಗೆ ಸಮಸ್ಯೆಯಾಗುತ್ತಿದೆ,ʼ ಎಂದು ಕಾರ್ಯಕರ್ತೆ ನಿಗಮ್ಮ ಸವಣೂರ ಮಾದ್ಯಮದವರಿಗೆ ಮಾಹಿತಿ ನೀಡಿದ್ದಾರೆ.

ಡಿಸೆಂಬರ್ 2ರಂದು ಕೂಲಿ ಸಿಕ್ಕಿತ್ತು, ಅಂದಿನಿಂದ ವೇತನ ಸಿಕ್ಕಿಲ್ಲ. ಧಾರವಾಡ ಜಿಲ್ಲೆಯಲ್ಲಿ 8.6 ಕೋಟಿ ರೂ. ಬಾಕಿ ಇದೆ. ಜಿಲ್ಲೆಯ ಕಲಘಟಗಿ ತಾಲೂಕಿನಲ್ಲಿ ಉದ್ಯೋಗಕ್ಕೆ ಸಾಕಷ್ಟು ಬೇಡಿಕೆ ಇದೆ. ಅಲ್ಲದೆ ಇತ್ತೀಚೆಗೆ ಕಲಘಟಗಿ ತಾಲೂಕಿನ ತಾವರಗೇರಿ, ದಾಸ್ತಿಕೊಪ್ಪ, ಸೂಳಿಕಟ್ಟಿ, ತಂಬೂರು ಸುತ್ತಮುತ್ತಲಿನ ಗ್ರಾಮಗಳ ಕೂಲಿ ಕಾರ್ಮಿಕರು ವೇತನ ಬಿಡುಗಡೆ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದರು. ಶೀಘ್ರವೇ ವೇತನ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X