ಐಪಿಎಲ್ 2023 | ಆರ್‌ಸಿಬಿ vs ಸಿಎಸ್‌ಕೆ; ಗೆಲುವಿನಂಚಿನಲ್ಲಿ ಎಡವಿದ ಬೆಂಗಳೂರು!

Date:

Advertisements

ಐಪಿಎಲ್ 16ನೇ ಆವೃತ್ತಿಯ ‘ದಕ್ಷಿಣ ಡರ್ಬಿ’ಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಗೆಲುವಿನ ನಗೆ ಬೀರಿದೆ.

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸೋಮವಾರ ನಡೆದ ಪಂದ್ಯದಲ್ಲಿ ಆರ್‌ಸಿಬಿ ವಿರುದ್ಧ ಧೋನಿ ಸಾರಥ್ಯದ ಸಿಎಸ್‌ಕೆ 8 ರನ್‌ಗಳ ಸ್ಮರಣೀಯ ಜಯ ಸಾಧಿಸಿದೆ.

ಒಂದು ಹಂತದಲ್ಲಿ ಆರ್‌ಸಿಬಿ ನಿರಾಯಾಸವಾಗಿ ಪಂದ್ಯ ಗೆಲ್ಲುವ ಭರವಸೆ ಮೂಡಿಸಿತ್ತು.

Advertisements

ಚೆನೈ ಮುಂದಿಟ್ಟಿದ್ದ 227 ರನ್‌ಗಳ ಗುರಿ ಬೆನ್ನಟ್ಟುವ ವೇಳೆ 12 ಓವರ್‌ಗಳ ಮುಕ್ತಾಯಕ್ಕೆ ಆರ್‌ಸಿಬಿ, ಕೇವಲ 2 ವಿಕೆಟ್ ನಷ್ಟದಲ್ಲಿ 141 ರನ್ ಗಳಿಸಿತ್ತು.

ಉಳಿದ 8 ಓವರ್‌ಗಳಲ್ಲಿ ಗೆಲುವಿಗೆ 86 ರನ್‌ಗಳ ಅಗತ್ಯವಿತ್ತು. ನಾಯಕ ಫಾಫ್ ಡುಪ್ಲೆಸಿಸ್ ಮತ್ತು ಗ್ಲೆನ್ ಮ್ಯಾಕ್ಸ್ ವೆಲ್ ಸ್ಫೋಟಕ ಅರ್ಧಶತಕ ಸಿಡಿಸಿ ಕ್ರೀಸ್ ನಲ್ಲಿದ್ದರು.

ಹೀಗಾಗಿ ಆತಿಥೇಯ ಆರ್‌ಸಿಬಿ ಸುಲಭ ಗೆಲುವು ಸಾಧಿಸಲಿದೆ ಎಂದು ಅಭಿಮಾನಿಗಳು ನಿರೀಕ್ಷೆಯಲ್ಲಿದ್ದರು.

ಆದರೆ 13ನೇ ಓವರ್‌ನಲ್ಲಿ ಮ್ಯಾಕ್ಸಿ ಮತ್ತು 14ನೇ ಓವರ್‌ನಲ್ಲಿ ಡುಪ್ಲೆಸಿಸ್ ವಿಕೆಟ್ ಪತನವಾಗುತ್ತಲೇ ಪಂದ್ಯ ರೋಚಕ ತಿರುವು ಪಡೆಯಿತು.

ಆ ಬಳಿಕ ಆರ್‌ಸಿಬಿ ನಿರಂತರವಾಗಿ ವಿಕೆಟ್ ಕಳೆದುಕೊಳ್ಳುತ್ತಲೇ ಸಾಗಿತು. ಅಂತಿಮ ಓವರ್‌ನಲ್ಲಿ ಗೆಲುವಿಗೆ 19 ರನ್‌ಗಳ ಅಗತ್ಯವಿತ್ತು. ಆದರೆ 10 ರನ್‌ಗಳಿಸಲಷ್ಟೇ ಆರ್‌ಸಿಬಿ ಶಕ್ತವಾಯಿತು. 8 ರನ್‌ಗಳಿಂದ ಗೆಲುವಿನಿಂದ ದೂರವೇ ಉಳಿಯಿತು.

ಆರ್‌ಸಿಬಿ ಬ್ಯಾಟರ್ ಗಳಿಂದ ದಂಡಿಸಿಕೊಂಡರೂ ಸಹ ನಿರ್ಣಾಯಕ ಹಂತದಲ್ಲಿ ವಿಕೆಟ್ ಪಡೆಯುವ ಮೂಲಕ ಚೆನ್ನೈ ಬೌಲರ್‌ಗಳು ಗೆಲುವಿನಲ್ಲಿ ನಿರ್ಣಾಯಕ ಪಾತ್ರ ವಹಿಸಿದರು.

ಈ ಗೆಲುವಿನೊಂದಿಗೆ ಅಂಕ ಪಟ್ಟಿಯಲ್ಲಿ ಚೆನ್ನೈ ಮೂರನೇ ಸ್ಥಾನಕ್ಕೇರಿದರೆ, ಆರ್‌ಸಿಬಿ 7ನೇ ಸ್ಥಾನಕ್ಕೆ ಜಾರಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X