ಅಮೇಥಿಯಲ್ಲಿ ರಾಹುಲ್ ಗಾಂಧಿ vs ಸೃತಿ ಇರಾನಿ?

Date:

Advertisements

ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರು ಉತ್ತರ ಪ್ರದೇಶದ ಅಮೇಥಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಮತ್ತೆ ಕಣಕ್ಕಿಳಿದಿದ್ದಾರೆ. ಬಿಜೆಪಿ ಸ್ಮೃತಿ ಇರಾನಿಗೆ ಟಿಕೆಟ್ ಘೋಷಣೆ ಮಾಡುವ ಮುನ್ನವೇ ಅಮೇಥಿಯಲ್ಲಿ ಇರಾನಿ ಮನೆಯೊಂದನ್ನೂ ಕೂಡಾ ಖರೀದಿ ಮಾಡಿದ್ದಾರೆ. ಆ ಮೂಲಕ, 50 ವರ್ಷಗಳಿಂದ ಕಾಂಗ್ರೆಸ್ ಭದ್ರಕೋಟೆಯಾಗಿದ್ದ ಈ ಕ್ಷೇತ್ರದಲ್ಲಿ ತಾನು ದೀರ್ಘಾವಧಿಯ ಯೋಜನೆ ಹೊಂದಿರುವುದನ್ನು ಸ್ಮೃತಿ ಇರಾನಿ ಸಾಬೀತುಪಡಿಸಿದ್ದಾರೆ.

ಕಳೆದ ತಿಂಗಳಷ್ಟೇ ಸ್ಮೃತಿ ಇರಾನಿಯ ಮನೆಯ ಗೃಹ ಪ್ರವೇಶ ನಡೆದಿದೆ. ಈ ನಡುವೆ 2019ರವರೆಗೆ ತಮ್ಮ ಪಕ್ಷದ ಭದ್ರಕೋಟೆಯಾಗಿದ್ದ ಈ ಕ್ಷೇತ್ರವನ್ನು ಮರಳಿ ತನ್ನ ತೆಕ್ಕೆಗೆ ಪಡೆಯುವ ಪ್ರಯತ್ನದಲ್ಲಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಇದ್ದಾರೆ. ಈ ಕ್ಷೇತ್ರದಲ್ಲಿ ರಾಹುಲ್‌ ಗಾಂಧಿಯ ತಂದೆ ರಾಜೀವ್‌ ಗಾಂಧಿ ಮತ್ತು ತಾಯಿ ಸೋನಿಯಾ ಗಾಂಧಿ ಸಂಸದರಾಗಿದ್ದರು. ರಾಹುಲ್‌ ಗಾಂಧಿ ಕೂಡ ಎರಡು ಬಾರಿ ಇದೇ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿದ್ದರು.

ಆದರೆ, 2019ರಲ್ಲಿ ಅಮೇಥಿಯಲ್ಲಿ ಸೋಲುಂಡಿದ್ದ ರಾಹುಲ್ ಗಾಂಧಿ, ಈ ಬಾರಿಯೂ ಅಮೇಥಿಯಿಂದ ಸ್ಪರ್ಧಿಸಲಿದ್ದಾರೆ ಎಂದು ಉತ್ತರ ಪ್ರದೇಶದ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಪ್ರದೀಪ್ ಸಿಂಘಾಲ್ ಹೇಳಿದ್ದಾರೆ. ಆದರೆ, ಇನ್ನೂ ಕೂಡಾ ರಾಹುಲ್‌ ಗಾಂಧಿ ಸ್ಪರ್ಧೆ ಅಧಿಕೃತವಾಗಿಲ್ಲ. ಕಾಂಗ್ರೆಸ್‌ನ ಕೇಂದ್ರ ಚುನಾವಣಾ ಸಮಿತಿ ಸದಸ್ಯರೂ ಆಗಿರುವ ಪಕ್ಷದ ಹಿರಿಯ ನಾಯಕ ಜೈರಾಮ್ ರಮೇಶ್, “ಅಮೇಥಿಯಿಂದ ಯಾರು ಸ್ಪರ್ಧಿಸುತ್ತಾರೆಂದು ಪಕ್ಷವು ನಿರ್ಧಾರ ಮಾಡುತ್ತದೆ,” ಎಂದಿದ್ದಾರೆ.

Advertisements

ರಾಹುಲ್ ಗಾಂಧಿ ಅಮೇಥಿಯಿಂದ ಸ್ಪರ್ಧಿಸುವುದು ಪಕ್ಕಾ ಆದಲ್ಲಿ ಈ ಕ್ಷೇತ್ರದಲ್ಲಿ ಪ್ರಬಲ ನಾಯಕರ ನಡುವೆ ಮತ್ತೊಮ್ಮೆ ಮುಖಾಮುಖಿ ನಡೆಯಲಿದೆ. 2009 ಮತ್ತು 2014ರಲ್ಲಿ ಅಮೇಥಿಯಿಂದ ಸ್ಪರ್ಧಿಸಿ ರಾಹುಲ್ ಗಾಂಧಿ ಜಯ ಸಾಧಿಸಿದ್ದರು. 2014ರಲ್ಲಿ ರಾಹುಲ್ ಎದುರು ಸ್ಮೃತಿ ಇರಾನಿ ಸೋಲು ಕಂಡಿದ್ದರು.

ಆದರೆ ಐದು ವರ್ಷದ ಅವಧಿಯಲ್ಲಿ ಎಲ್ಲ ಹಬ್ಬದ ಸಂದರ್ಭದಲ್ಲಿಯೂ ಜನರಿಗೆ ಉಡುಗೊರೆಗಳನ್ನು ನೀಡುತ್ತಾ ಜನರನ್ನು ಓಲೈಸುವಲ್ಲಿ ಸಫಲರಾದ ಸ್ಮೃತಿ ಇರಾನಿ, 2019ರಲ್ಲಿ ಅಮೇಥಿಯಲ್ಲಿ ಜಯದ ಗದ್ದುಗೆ ಪಡೆದಿದ್ದರು. ಈಗ, ಮತ್ತೆ ರಾಹುಲ್ ಗಾಂಧಿಗೆ ಸವಾಲು ಹಾಕಿದ್ದು, ‘ಧೈರ್ಯವಿದ್ದರೆ ವಯನಾಡು ಬಿಟ್ಟು (ರಾಹುಲ್ ಗಾಂಧಿ ಸಂಸದರಾಗಿರುವ ಕ್ಷೇತ್ರ) ಅಮೇಥಿಯಲ್ಲಿ ಸ್ಪರ್ಧಿಸಿ’ ಎಂದಿದ್ದಾರೆ. ಈಗ ರಾಹುಲ್ ಗಾಂಧಿ ಸವಾಲು ಸ್ವೀಕರಿಸಿ ಅಮೇಥಿಯಿಂದಲೇ ಸ್ಪರ್ಧಿಸುತ್ತಾರಾ ಕಾದುನೋಡಬೇಕಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X