ಮಹಿಳೆಯರು, ಮಕ್ಕಳು ತಮ್ಮ ಸಮಸ್ಯೆಗೆ ಪರಿಹಾರ ಸಿಗದಿದ್ದರೆ ಗೃಹ ಕಚೇರಿಗೆ ಆಗಮಿಸಿ: ಸಚಿವ ಡಾ. ಜಿ.ಪರಮೇಶ್ವರ್

Date:

Advertisements

ರಾಜ್ಯದಲ್ಲಿ ಮಹಿಳಾ ಮತ್ತು ಮಕ್ಕಳ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದ್ದು, ಅವರ ಮೇಲೆ ದೌರ್ಜನ್ಯ ನಡೆದರೆ ಸಹಿಸುವುದಿಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದರು.

ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ನಡೆದ ‘ಮಹಿಳೆಯರ ಮೇಲಿನ ದೌರ್ಜನ್ಯ ಕುರಿತ ಸಂಕಿರಣದಲ್ಲಿ ಭಾಗವಹಿಸಿ, ವಿವಿಧ ಮಹಿಳಾ ಸಂಘಟನೆಗಳು ಹಾಗೂ ಎನ್‌ಜಿಓಗಳಿಂದ ಸಲಹೆಗಳನ್ನು ಆಲಿಸಿ ಮಾತನಾಡಿದ ಅವರು, “ಮಹಿಳೆಯರು ಮತ್ತು ಮಕ್ಕಳು ತಮ್ಮ ಸಮಸ್ಯೆಗೆ ಪರಿಹಾರ ಸಿಗದಿದ್ದರೆ, ವಿಧಾನಸೌಧದ ಕಾರ್ಯಾಲಯ ಅಥವಾ ಗೃಹ ಕಚೇರಿಗೆ ಆಗಮಿಸಿ ನನ್ನನ್ನು ಭೇಟಿಯಾಗಿ, ಸಮಸ್ಯೆಯನ್ನಿ ಹೇಳಿಕೊಳ್ಳಿ” ಎಂದು ತಿಳಿಸಿದರು.

“ಪೊಲೀಸರು ಜನಸ್ನೇಹಿಯಾಗಿ ಕೆಲಸ ಮಾಡಬೇಕು ಎಂದು ಸೂಚಿಸಿದ್ದೇನೆ. ಮಹಿಳೆಯರು ತಮ್ಮ ಸಮಸ್ಯೆಗಳ ಕುರಿತು ದೂರು ನೀಡಲು ಠಾಣೆಗೆ ಬಂದರೆ ಕೂಡಲೆ ಸಮಸ್ಯೆಗಳನ್ನು ಆಲಿಸಬೇಕು. ‘ನಮ್ಮ ಬೆನ್ನಿಗೆ ಪೊಲೀಸರು ಇದ್ದಾರೆ ಎಂಬ ಧೈರ್ಯ ಅವರಲ್ಲಿ ಮೂಡಬೇಕು. ಅವರ ದೂರುಗಳ ಬಗ್ಗೆ ತಾತ್ಸರ ಮಾಡಿದರೆ ಸಹಿಸುವುದಿಲ್ಲ. ಮಹಿಳೆಯರು ಧೈರ್ಯವಾಗಿದ್ದರೆ ಒಳ್ಳೆ ಆಡಳಿತ, ಜನಸ್ನೇಹಿ ಪೊಲೀಸ್ ಎನಿಸಿಕೊಳ್ಳಲು ಸಾಧ್ಯ” ಎಂದು ಅಧಿಕಾರಿಗಳಿಗೆ ಕಿವಿಮಾತು ಹೇಳಿದರು.

Advertisements

“ಈ ಹಿಂದೆ ಪೊಲೀಸ್ ಸಹಾಯ ವಾಣಿ ಮೂಲಕ ಬಂದ ದೂರುಗಳನ್ನು ಆಧರಿಸಿ, ಹೋಯ್ಸಳ ಸಿಬ್ಬಂದಿ ಸ್ಥಳಕ್ಕೆ ಹೋಗಲು 20 ನಿಮಿಷ ತೆಗೆದುಕೊಳ್ಳುತ್ತಿದ್ದರು. ಪ್ರಸ್ತುತ 7 ನಿಮಿಷದೊಳಗೆ ಸ್ಥಳದಲ್ಲಿ ಹಾಜರಿರುತ್ತಾರೆ. ಬೆಂಗಳೂರು ನಗರದಲ್ಲಿ 7500 ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಪೊಲೀಸರು ನಿರಂತರ ಕಣ್ಗಾವಲು ಇಟ್ಟಿರುತ್ತಾರೆ. ನಮ್ಮ ಸರ್ಕಾರವು ಮಹಿಳಾ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳುತ್ತಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಎಲ್ಲ ಇಲಾಖೆಗಳಲ್ಲಿ ಪರಿಶಿಷ್ಟರ ಅಭಿವೃದ್ಧಿಗೆ ಯೋಜನೆ ರೂಪಿಸಿ: ಸಚಿವ ಹೆಚ್ ಸಿ ಮಹದೇವಪ್ಪ ಸೂಚನೆ

“ನಗರದಲ್ಲಿ ಹೊಸದಾಗಿ 6 ಪೊಲೀಸ್ ಠಾಣೆಗಳನ್ನು ಸ್ಥಾಪಿಸಲಾಗುತ್ತಿದೆ. ಈಗಿರುವ ಪೊಲೀಸ್ ಸಿಬ್ಬಂದಿಗಳಲ್ಲಿ ಶೇ 8ರಷ್ಟು ಮಹಿಳೆಯರಿದ್ದಾರೆ. ಶೇ.25ರಷ್ಟಾಗಬೇಕು ಎಂಬುದು ಗುರಿ ಹೊಂದಲಾಗಿದೆ. ಮಹಿಳಾ‌ ಪೊಲೀಸ್ ಠಾಣೆಗಳಲ್ಲಿ ಮಹಿಳಾ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ನೇಮಿಸಲು ಕ್ರಮ ಕೈಗೊಳ್ಳಲಾಗುವುದು. ಆ್ಯಸಿಡ್ ಮಾರಾಟ ನಿಷೇಧ ಮಾಡಲಾಗುವುದು. ಆ್ಯಸಿಡ್ ದಾಳಿಗೆ ಒಳಗಾದ ಸಂತ್ರಸ್ತರಿಗೆ ನಿವೇಶನ ನೀಡಲಾಗುವುದು” ಎಂದು ತಿಳಿಸಿದರು.

“ಮಹಿಳಾ ಸಬಲೀಕರಣದ ನಿಟ್ಟಿನಲ್ಲಿ ನಮ್ಮ ಸರ್ಕಾರವು ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಗ್ರಾಮೀಣ ಭಾಗದ ಮಹಿಳೆಯರ ಆರ್ಥಿಕ ಶಕ್ತಿ ಹೆಚ್ಚಿಸಬೇಕು ಎಂಬುದು ನಮ್ಮ ಸರ್ಕಾರದ ಉದ್ದೇಶ. ಮಹಿಳೆಯರ ಬಗ್ಗೆ ಅವಹೇಳನ ಮಾಡುವುದು, ಅವಾಚ್ಯ ಮಾತುಗಳನ್ನು ಹಾಗೂ ತಿರುಚಿದ ವೀಡಿಯೋಗಳನ್ನು ಪ್ರಕಟಿಸುವರ ವಿರುದ್ಧ ಕಾನೂನು ರಿತ್ಯ ಕ್ರಮ ಜರುಗಿಸಲಾಗುವುದು”‌ ಎಂದು ಎಚ್ಚರಿಸಿದರು.

ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್, ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್, ನಿಮ್ಹಾನ್ಸ್‌ನ ಡೀನ್ ಪ್ರಭಾಚಂದ್ರ, ವಕೀಲೆ ಸುಮಿತ್ರಾ ಆಚಾರ್ಯ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X