ಶಿವಮೊಗ್ಗ | ಕುವೆಂಪು ವಿವಿಯ ನೂತನ ಕುಲಪತಿಯಾಗಿ ಪ್ರೊ. ಶರತ್ ಅನಂತಮೂರ್ತಿ

Date:

Advertisements

ಕರ್ನಾಟಕ ನಾನಾ ವಿಶ್ವವಿದ್ಯಾಲಯಗಳಿಗೆ ನೂತನ ಕುಲಪತಿಗಳನ್ನು ನೇಮಕ ಮಾಡಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಆದೇಶ ಹೊರಡಿಸಿದ್ದಾರೆ.

ಅದರಂತೆ ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಪ್ರೊ. ಶರತ್ ಅನಂತಮೂರ್ತಿ ಅವರನ್ನು ನೇಮಕ ಮಾಡಲಾಗಿದೆ.

ಪ್ರೊ. ಶರತ್ ಅನಂತಮೂರ್ತಿಯವರು ಹೈದ್ರಾಬಾದ್ ವಿಶ್ವವಿದ್ಯಾಲಯದ ಸ್ಕೂಲ್ ಆಫ್ ಫಿಸಿಕ್ಸ್ ನಲ್ಲಿ ಪ್ರಾಧ್ಯಾಪಕರಾಗಿದ್ದಾರೆ. ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ದಿವಂಗತ ಯು.ಆರ್.ಅನಂತಮೂರ್ತಿ ಅವರ ಮಗನಾಗಿರುವ ಶರತ್ ಅನಂತಮೂರ್ತಿ, ಅವರು ಮುಂದಿನ ನಾಲ್ಕು ವರ್ಷಗಳ ಕಾಲ ಕುವೆಂಪು ವಿಶ್ವವಿದ್ಯಾಲಯದ ಕುಲಪತಿಯಾಗಿ ಮುಂದುವರೆಯಲಿದ್ದಾರೆ.

Advertisements

ಕುವೆಂಪು ವಿಶ್ವವಿದ್ಯಾಲಯದ ಕುಲಪತಿಯಾಗಿದ್ದ ಬಿ ಪಿ ವೀರಭದ್ರಪ್ಪ ಅವರು ಕಳೆದ 2023ರ ಆಗಸ್ಟ್‌ನಲ್ಲಿ ನಿವೃತ್ತಿ ಹೊಂದಿದ್ದರು. ತೆರವಾದ ಸ್ಥಾನಕ್ಕೆ ಶರತ್ ಅನಂತಮೂರ್ತಿಯವರು ನೇಮಕಗೊಂಡಿದ್ದಾರೆ.

ಉಳಿದಂತೆ ಮಂಗಳೂರು, ಬಾಗಲಕೋಟೆ ತೋಟಗಾರಿಕಾ ವಿವಿ, ವಿಜಯನಗರದ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯ, ಹಂಪಿ ಕನ್ನಡ ವಿಶ್ವವಿದ್ಯಾಲಯ, ಬೆಳಗಾವಿ ರಾಣಿ ಚೆನ್ನಮ್ಮ ವಿವಿಗೂ ಕೂಡ ಹೊಸ ಕುಲಪತಿಗಳನ್ನು ನೇಮಿಸಲಾಗಿದೆ.

ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿಯಾಗಿ ಪ್ರೊ.ಪಿ.ಎಲ್.ಧರ್ಮ ಅವರನ್ನು ನೇಮಕ ಮಾಡಲಾಗಿದೆ. ಧರ್ಮ ಅವರು, ಮಂಗಳೂರು ವಿವಿಯ ರಾಜ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾಗಿದ್ದರು.

ಬಾಗಲಕೋಟೆ ತೋಟಗಾರಿಕಾ ವಿಶ್ವವಿದ್ಯಾನಿಲಯದ ಕುಲಪತಿಯಾಗಿ ಡಾ. ವಿಷ್ಣುವರ್ಧನ್ ಅವರನ್ನು ನೇಮಿಸಲಾಗಿದೆ. ಡಾ.ವಿಷ್ಣುವರ್ಧನ್ ಅವರು ಮೈಸೂರು ತೋಟಗಾರಿಕಾ ಕಾಲೇಜಿನ ಡೀನ್ ಆಗಿದ್ದರು.

ಇದನ್ನು ಓದಿದ್ದೀರಾ? ಮಂಡ್ಯ | ದ್ವಿಚಕ್ರ ವಾಹನಕ್ಕೆ ಅಡ್ಡ ಬಂದಿದ್ದಕ್ಕೆ ವಿದ್ಯಾರ್ಥಿನಿ ಮೇಲೆ ಹಲ್ಲೆ ನಡೆಸಿದ ಸವಾರ: ಎಫ್ಐಆರ್ ದಾಖಲು

ವಿಜಯನಗರದ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾನಿಲಯದ ಕುಲಪತಿಯಾಗಿ ಡಾ.ಮೇತ್ರಿ ನೇಮಕ ಮಾಡಲಾಗಿದೆ. ಡಾ.ಕೆ.ಎಂ.ಮೇತ್ರಿ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯದ ಪ್ರಾಧ್ಯಾಪಕರಾಗಿದ್ದರು.

ಬೆಳಗಾವಿ ರಾಣಿ ಚೆನ್ನಮ್ಮ ವಿಶ್ವವಿದ್ಯಾನಿಲಯದ ಕುಲಪತಿಯಾಗಿ ಪ್ರೊ.ಸಿ.ಎಂ.ತ್ಯಾಗರಾಜ್ ನೇಮಿಸಲಾಗಿದೆ. ತ್ಯಾಗರಾಜ್ ಅವರು ರಾಣಿ ಚೆನ್ನಮ್ಮ ವಿವಿಯ ವಾಣಿಜ್ಯ ವಿಭಾಗದ ಡೀನ್ ಆಗಿದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

ಧಾರವಾಡ | ಹಾಳುಬಿದ್ದ ಸಂಶಿ ಎಪಿಎಂಸಿ; ವಾರದ ಸಂತೆ ಸ್ಥಳಾಂತರಿಸಲು ಒತ್ತಾಯ

ಸರ್ಕಾರದ ಮಟ್ಟದಲ್ಲಿ ಆಗುವ ಯೋಜನೆಗಳ ಅನುಷ್ಠಾನ ಮಾಡುವಲ್ಲಿ ನಿರ್ಲಕ್ಷ್ಯ ವಹಿಸುವುದರಿಂದ ಇತ್ತ...

Download Eedina App Android / iOS

X