ಉತ್ತರ ಕನ್ನಡ | ಬಿಜೆಪಿ ಸಂಸದ ಅನಂತ ಕುಮಾರ್ ಹೆಗಡೆ ಹಾರಿಸಿದ್ದ ಹನುಮ ಧ್ವಜ ತೆರವು

Date:

Advertisements

ಭಟ್ಕಳ ತಾಲೂಕಿನ ತಾಲ್ಲೂಕಿನ ತೆಂಗಿನಗುಂಡಿ ಬಂದರಿನ ಸರ್ಕಾರಿ ಜಾಗದಲ್ಲಿ ಅನುಮತಿ ಇಲ್ಲದೆ ಹಾರಿಸಲಾಗಿದ್ದ ಹನುಮ ಧ್ವಜ ಮತ್ತು ಅಲ್ಲಿ ಇರಿಸಲಾಗಿದ್ದ ಸಾವರ್ಕರ್ ನಾಮಫಲಕವನ್ನು ಅಧಿಕಾರಿಗಳು ಬುಧವಾರ ರಾತ್ರಿ ತೆರವುಗೊಳಿಸಿದ್ದಾರೆ.

ಈ ಹಿಂದೆ, ಜನವರಿ 28ರಂದು ಇದೇ ಜಾಗದಲ್ಲಿ ಬಿಜೆಪಿ ಮತ್ತು ಹಿಂದುತ್ವ ಕೋಮು ಕಾರ್ಯಕರ್ತರು ಹನುಮ ಧ್ವಜ ಹಾರಿದ್ದರು. ಅದನ್ನು ಹೆಬಳೆ ಗ್ರಾಮ ಪಂಚಾಯತಿ ಅಧಿಕಾರಿಗಳು ತೆರವುಗೊಳಿಸಿದ್ದರು.

ಆದರೆ, ಹಿಂದುತ್ವವಾದಿಗಳ ಗ್ರಾಮ ಪಂಚಾಯತಿ ವಿರುದ್ಧ ಪ್ರತಿಭಟನೆ ನಡೆಸಿದ್ದರು. ಅಲ್ಲದೆ, ಕಳೆದ ಸೋಮವಾರ ಬಿಜೆಪಿ ಸಂಸದ ಅನಂತ ಕುಮಾರ್ ಹೆಗಡೆ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಸಭೆ ನಡೆಸಿದ್ದರು. ಸಭೆಯಲ್ಲಿ ಭಾಗಿಯಾಗಿದ್ದ ಸಂಸದ ಅನಂತ ಕುಮಾರ್ ಹೆಗಡೆ, ತನ್ನ ಬೆಂಬಲಿಗರನ್ನು ಕರೆದೊಯ್ದು, ತೆರವುಗೊಳಿಸಿದ್ದ ಸ್ಥಳದಲ್ಲೇ ಮತ್ತೆ ಹನುಮ ಧ್ವಜ ಹಾರಿಸಿ, ಸಾವರ್ಕರ್  ನಾಮಫಲಕ ಹಾಕಿದ್ದರು.

Advertisements

ಘಟನೆ ಸಂಬಂಧ ಅನಂತ ಕುಮಾರ್ ಹೆಗಡೆ ಸೇರಿದಂತೆ 21 ಮಂದಿ ವಿರುದ್ಧ ಭಟ್ಕಳ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಇದೀಗ, ಧ್ವಜ ಮತ್ತು ನಾಮಫಲಕವನ್ನು ಪಂಚಾಯತಿ ಅಧಿಕಾರಿಗಳು ತೆರವುಗೊಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X