ಕೊಪ್ಪಳ | ಪ್ರೇಮಿಗಳ ಅಂತರ್ಜಾತಿ ವಿವಾಹ; ಯುವಕನ ಕುಟುಂಬಕ್ಕೆ ಬಹಿಷ್ಕಾರ

Date:

Advertisements

ಪ್ರೇಮಿಗಳಿಬ್ಬರು ಅಂತರ್ಜಾತಿ ವಿವಾಹ ಮಾಡಿಕೊಂಡಿದ್ದಕ್ಕೆ ಯುವಕನ ಕುಟುಂಬಕ್ಕೆ ಗ್ರಾಮದಿಂದ ಬಹಿಷ್ಕಾರ ಹಾಕಿರುವ ಜಾತಿ ದೌರ್ಜನ್ಯದ ಘಟನೆ ಕೊಪ್ಪಳದ ಭಾಗ್ಯ ನಗರದಲ್ಲಿ ಬೆಳಕಿಗೆ ಬಂದಿದೆ.

ಭಾಗ್ಯ ನಗರದ ನಿವಾಸಿ ಶಂಕ್ರಪ್ಪ ಎಂಬವರ ಕುಟುಂಬಕ್ಕೆ ಗ್ರಾಮದವರು ಒಂದೂವರೆ ವರ್ಷದ ಹಿಂದೆ ಬಹಿಷ್ಕಾರ ಹಾಕಿದ್ದು, ಅಂದಿನಿಂದಲೂ ಕುಟುಂಬವನ್ನು ದೂರ ಇಡಲಾಗಿದೆ. ಪ್ರಕರಣ ಇದೀಗ ಬೆಳಕಿಗೆ ಬಂದಿದೆ.

ಶಂಕ್ರಪ್ಪ ಅವರು ವಾಲ್ಮೀಕಿ ಸಮುದಾಯಕ್ಕೆ ಸೇರಿದ್ದಾರೆ. ಅವರ ಪುತ್ರ ಲಿಂಗಾಯತ ಸಮುದಾಯದ ಯುವತಿಯನ್ನು ವಿವಾಹವಾಗಿದ್ದ. ಕಾರಣಕ್ಕಾಗಿ, ಮಾಲ್ಮೀಕಿ ಸಮುದಾಯದ ಮುಖಂಡರು ಶಂಕ್ರಪ್ಪ ಕುಟುಂಬಕ್ಕೆ ಬಹಿಷ್ಕಾರ ಹಾಕಿದೆ ಎಂದು ಹೇಳಲಾಗಿದೆ.

Advertisements

ಕುಟುಂಬಕ್ಕೆ 1 ಲಕ್ಷ ರೂ. ದಂಡ ವಿಧಿಸಲಾಗಿದೆ. ದಂಡ ಪಾವತಿಸುವವರೆಗೂ ಸಮುದಾಯದೊಂದಿಗೆ ಬರೆಯುವಂತಿಲ್ಲ. ಯಾವುದೇ ಸಭೆ, ಸಮಾರಂಭಗಳಿಗೂ ಕುಟುಂಬವನ್ನು ಆಹ್ವಾನಿಸುವುದಿಲ್ಲ. ಯಾವುದೇ ಮನೆಯ ಕಾರ್ಯಕ್ರಮಗಳಲ್ಲಿಯೂ ಭಾಗಿಯಾವುದಂತಿಲ್ಲ ಎಂದು ಸಮುದಾಯದ ಮುಖಂಡರು ತಾಕೀತು ಮಾಡಿದ್ದಾರೆ ಎಂದು ಸಂತ್ರಸ್ತ ಕುಟುಂಬ ಆರೋಪಿಸಿದೆ.

ಬಹಿಷ್ಕಾರದ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದರೂ, ಪೊಲೀಸರು ನಿರ್ಲಕ್ಷ್ಯ ಧೋರಣೆ ತಳೆದಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X