ಸಂಪ್‌ನಿಂದ ಮಗು ರಕ್ಷಣೆ | ‘ಮಗುವಿನ ಅಳು ಕೇಳಿ ನಿರಾಳನಾದೆ’ ಎಂದ ಪೊಲೀಸ್ ಅಧಿಕಾರಿಯ ಅಂತಃಕರಣಕ್ಕೆ ಮೆಚ್ಚುಗೆಯ ಮಹಾಪೂರ

Date:

Advertisements

ಸಮಯಕ್ಕೆ ಸರಿಯಾಗಿ ಸ್ಥಳಕ್ಕೆ ಧಾವಿಸಿ ಸಂಪ್‌ನಲ್ಲಿ ಮುಳುಗಿದ್ದ 2 ವರ್ಷ 6 ತಿಂಗಳ ಮಗುವಿನ ರಕ್ಷಿಸುವಲ್ಲಿ ಪಿಎಸ್ಐಯೊಬ್ಬರು ಸಫಲರಾಗಿದ್ದಾರೆ.

ಬೆಂಗಳೂರು ನಗರದ ಬ್ಯಾಡರಹಳ್ಳಿಯ ವಿಶ್ವೇಶ್ವರಯ್ಯ ಲೇಔಟ್‌ನಲ್ಲಿ ಈ ಘಟನೆ ನಡೆದಿದೆ. ಬ್ಯಾಟರಾಯನಪುರ ಸಂಚಾರ ಪೊಲೀಸ್ ಠಾಣೆಯ ಪಿಎಸ್ಐ ನಾಗರಾಜ ಎ ಆರ್ ಎಂಬುವರು ಮಗುವಿನ ಜೀವ ಉಳಿಸಿದ್ದು, ಅವರ ಈ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಪೊಲೀಸ್‌ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ನಾಗರಾಜ ಅವರ ಈ ಸಾಹಸವನ್ನು ಶ್ಲಾಘಿಸಿದ್ದಾರೆ.

ಮಗುವಿನ ರಕ್ಷಣೆ ಮಾಡಿದ ಪಿಎಸ್ಐ ನಾಗರಾಜ ಅವರು ಈ ದಿನ.ಕಾಮ್‌ ಜೊತೆ ಮಾತನಾಡಿ, “ಬುಧವಾರ ಮಧ್ಯಾಹ್ನ 3.30ರ ಸುಮಾರಿಗೆ ಕರ್ತವ್ಯಕ್ಕೆ ಅದೇ ಮಾರ್ಗದಲ್ಲಿ ತೆರಳುತ್ತಿದ್ದೆ. ಮನೆಯ ಆವರಣದಲ್ಲಿ ಮಹಿಳೆಯರು ‘ಮಗು ಕಾಪಾಡಿ..’ ಎಂದು ಕೂಗುತ್ತಿದ್ದರು. ನಾನೇನೋ ಹಾವು ಕಡಿದಿರಬಹುದು ಎಂದುಕೊಂಡು ಕೂಡಲೇ ಅಲ್ಲಿಗೆ ಹೋದೆ. ಮಗು ನೀರಿನಲ್ಲಿ ಬಿದ್ದಿರುವುದು ಗೊತ್ತಾಯಿತು” ಎಂದರು.

Advertisements

ಮುಂದುವರಿದು, “ಮಗು ಬಿದ್ದ ಸಂಪ್‌ 10 ಅಡಿ ಆಳ ಇತ್ತು. ಅದರಲ್ಲಿ ಐದು ಅಡಿ ನೀರು ಇತ್ತು. ಮಗು ಬಿದ್ದು 2-3 ನಿಮಿಷ ಆಗಿರಬಹುದು. ಹಿಂದೆ ಮುಂದೆ ಯೋಚಿಸದೇ ಸಂಪ್‌ನೊಳಗೆ ಇಳಿದೆ. ನೋಡಿದ್ರೆ ಮಗು ಮೂಲೆಯಲ್ಲಿ ಇತ್ತು. ಮಗುವನ್ನು ಮೇಲೆ ಎತ್ತಿಕೊಟ್ಟೆ. ಅಷ್ಟೊತ್ತಿಗಾಗಲೇ ಮಗು ನೀರು ಕುಡಿದು ಚೂರು ಹೊಟ್ಟೆ ಉಬ್ಬಿದಂತೆ ಕಂಡಿತು. ಮಗುವಿನ ಹೊಟ್ಟೆ ಒತ್ತಿದರೆ ಪ್ರಾಣಕ್ಕೆ ತೊಂದರೆ ಆಗಬಹುದು ಎಂದು ಅರಿತು ಮೀನಿನ ತರ ಮಲಗಿಸಿ ಸ್ವಲ್ಪ ಸ್ವಲ್ಪ ಬೆನ್ನು ಒತ್ತಿ ನೀರು ತೆಗೆದೆ. ಅರ್ಧ ಲೀಟರ್‌ ನೀರು ಹೊರಗೆ ಬಂತು. ಕೂಡಲೇ ಆಸ್ಪತ್ರೆಗೆ ಕಳುಹಿಸಿಕೊಟ್ಟೆವು. ಆಸ್ಪತ್ರೆಯಲ್ಲಿ ಮಗುವಿನ ಅಳು ಕೇಳಿ ನಿರಾಳನಾದೆ” ಎಂದು ತಮ್ಮ ಅನುಭವ ಹಂಚಿಕೊಂಡರು.

ಮಗು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಅಪಾಯದಿಂದ ಪಾರಾಗಿದೆ, ಬುಧವಾರ ಸಂಜೆಯೇ ಮಗುವನ್ನು ಪಾಲಕರು ಮನೆಗೆ ಕರೆದೊಯ್ದಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಮಾರ್ಗಸೂಚಿ ಪ್ರಕಟ, ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್‌ ಕೇಸ್‌ ದಾಖಲು

ಬೆಂಗಳೂರು ನಗರದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪೂಜಿಸಬೇಕಾಗಿ ಮತ್ತು...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

Download Eedina App Android / iOS

X