‘ಪಿಎಫ್‌ ಪಾವತಿಸಲು ಅಪ್ಪನ ಸಾವಿಗಾಗಿ ಕಾಯುತ್ತಿದ್ದರು’; ಇಪಿಎಫ್‌ಒ ವಿರುದ್ಧ ಕಾನೂನು ಹೋರಾಟಕ್ಕೆ ಮುಂದಾದ ಕುಟುಂಬ

Date:

Advertisements

ನನ್ನ ತಂದೆ ಬದುಕಿರುವವರೆಗೂ ಅವರು ಪಿಎಫ್‌ ಹಣವನ್ನು ನೌಕರರ ಭವಿಷ್ಯ ನಿಧಿ ಸಂಸ್ಥೆ(ಇಪಿಎಫ್‌ಒ) ಮರುಪಾವತಿ ಮಾಡಲಿಲ್ಲ. ಅವರು ಸಾವನ್ನಪ್ಪಿದ ಕೂಡಲೇ, ಹಣ ಪಾವತಿ ಮಾಡಿದ್ದಾರೆ. ಅವರು ನನ್ನ ತಂದೆಯ ಪಿಎಫ್‌ ಹಣ ಪಾವತಿಸಲು ಅವರ ಸಾವಿಗಾಗಿ ಕಾಯುತ್ತಿದ್ದರು ಎಂದು ಕೇರಳದಲ್ಲಿ ಇಪಿಎಫ್‌ಒ ಕಚೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಶವರಾಮನ್ ಅವರ ಪುತ್ರ ಪ್ರದೀಪ್ ಆರೋಪಿಸಿದ್ದಾರೆ. ತಮ್ಮ ಕುಟುಂಬಕ್ಕಾದ ಅನ್ಯಾಯ, ದೌರ್ಜನ್ಯ ಬೇರೆ ಕುಟುಂಬಗಳಿಗೆ ಆಗಬಾರದೆಂದುಇಪಿಎಫ್‌ಒ ವಿರುದ್ಧ ಕಾನೂನು ಹೋರಾಟಕ್ಕೆ ಮುಂದಾಗಿದ್ದಾರೆ.

ಕೇರಳದ ತ್ರಿಶೂರ್ ಮೂಲದ ಶಿವರಾಮನ್ ಅವರು ಅಪೋಲೋ ಟೈರ್ಸ್‌ನಲ್ಲಿ ನೌಕರರಾಗಿದ್ದರು. 9 ವರ್ಷಗಳ ಹಿಂದೆ ಅವರು ನಿವೃತ್ತರಾಗಿದ್ದರು. ಅಂದಿನಿಂದಲೂ, ತಮ್ಮ ಪಿಎಫ್‌ ಹಣವನ್ನು ಪಡೆಯಲು ಇಪಿಎಫ್‌ಒ ಕಚೇರಿಗೆ ಅಲೆಯುತ್ತಿದ್ದರು. ಆದರೆ, ದಾಖಲೆಗಳು ಹೋಲಿಕೆಯಾಗುತ್ತಿಲ್ಲವೆಂದು ಅಧಿಕಾರಿಗಳ ಅವರ ಹಣವನ್ನು ಪಾವತಿಸಲು ನಿರಾಕರಿಸಿದ್ದರು ಎನ್ನಲಾಗಿದೆ. ಮನನೊಂದಿದ್ದ ಶಿವರಾಮನ್ ಕಳೆದ ತಿಂಗಳು (ಫೆಬ್ರವರಿ) 7ರಂದು ಕೊಚ್ಚಿಯಲ್ಲಿರುವ ಇಪಿಎಫ್‌ಒ ಕಚೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡು ಕೊನೆಯುಸಿರೆಳೆದಿದ್ದಾರೆ.

ತಮ್ಮ ತಂದೆಯ ಸಾವಿಗೆ ಇಪಿಎಫ್‌ಒ ಅಧಿಕಾರಿಗಳೇ ಕಾರಣವೆಂದು ಆರೋಪಿಸಿರುವ ಪ್ರದೀಪ್, ಫೆಬ್ರವರಿ 7ರಂದು ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದು, ಇದೀಗ, ಪ್ರಕರಣವು ನ್ಯಾಯಾಲಯದಲ್ಲಿ ವಿಚಾರಣೆಗೆ ಬಂದಿದೆ. ನಾವು ನಮ್ಮಂತೆ ಇತರ ಕುಟುಂಬಗಳಿಗೆ ನೋವು ಎದುರಾಗಬಾರದು ಎಂಬ ಕಾರಣಕ್ಕೆ ಕಾನೂನು ಹೋರಾಟ ಮಾಡುತ್ತಿದ್ದೇವೆ ಎಂದು ಪ್ರದೀಪ್ ಹೇಳಿದ್ದಾರೆ.

Advertisements

“ಇಪಿಎಫ್‌ಒ ಅಧಿಕಾರಿಗಳು ದಾಖಲೆಗಳ ಸಮಸ್ಯೆಗಳನ್ನು ಉಲ್ಲೇಖಿಸಿ 9 ವರ್ಷಗಳಿಂದ ನನ್ನ ತಂದೆಯನ್ನು ಸತಾಯಿಸಿದರು. ಹಣ ಮರುಪಾವತಿಸಲು ನಿರಾಕರಿಸಿದ್ದರು. ಆದರೆ, ಅವರು ಸಾವನ್ನಪ್ಪಿದ ಬಳಿಕ, ನಾವು ಯಾವುದೇ ಹೆಚ್ಚುವರಿ ದಾಖಲೆಗಳನ್ನು ಸಲ್ಲಿಸದೇ ಇದ್ದರೂ, ಈಗ ತಂದೆಯ ಪಿಎಫ್‌ ಹಣ ಪಾವತಿಸಿದ್ದಾರೆ. ವಿಪರ್ಯಾಸವೆಂದರೆ, ಅಧಿಕಾರಿಗಳು ನಮ್ಮ ತಂದೆಯ ಮರಣ ಪ್ರಮಾಣಪತ್ರವನ್ನೂ ಸಹ ಕೇಳಿಲ್ಲ” ಎಂದು ಪ್ರದೀಪ್ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ?: ನ್ಯಾಯಾಲಯಗಳಲ್ಲಿ ಪೂಜೆ-ಪುನಸ್ಕಾರ ನಿಲ್ಲಿಸಿ; ಸಂವಿಧಾನಕ್ಕೆ ತಲೆಬಾಗಿ: ನ್ಯಾಯಮೂರ್ತಿ ಅಭಯ್ ಓಕಾ

“ನನ್ನ ತಂದೆ ಹೋದರು. ಆದರೆ, ಬೇರೆಯವರ ತಂದೆಗೆ ಈ ರೀತಿ ಆಗಬಾರದು. ಅದಕ್ಕಾಗಿ ಕಾನೂನು ಹೋರಾಟಕ್ಕೆ ನಿರ್ಧರಿಸಿದ್ದೇವೆ” ಎಂದು ಅವರು ಹೇಳಿರುವುದಾಗಿ ‘ಟಿಐಇ’ ವರದಿ ಮಾಡಿದೆ.

ವರದಿಯ ಪ್ರಕಾರ, ಶಿವರಾಮನ್ ಅವರ 90,000 ರೂ. ಪಿಎಫ್‌ ಹಣ ಇಪಿಎಫ್‌ಒ ಖಾತೆಯಲ್ಲಿತ್ತು. ಅದನ್ನು ಪಡೆಯಲು ಅವರು ಅರ್ಜಿ ಸಲ್ಲಿಸಿದ್ದರು. ಆದರೆ, ಅವರ ಗುರುತಿನ ದಾಖಲೆಗಳು ಹೊಂದಿಕೆಯಾಗುತ್ತಿಲ್ಲವೆಂದು ಅಧಿಕಾರಿಗಳು ಮರುಪಾವತಿಗೆ ನಿರಾಕರಿಸಿದ್ದರು. ಅಲ್ಲದೆ, ಅವರ ಶಾಲೆಯ ಪ್ರಮಾಣ ಪತ್ರಕ್ಕಾಗಿ ಬೇಡಿಕೆ ಇಟ್ಟಿದ್ದರು. ಆದರೆ, ಅವರಿಗೆ ಅದನ್ನು ನೀಡಲು ಸಾಧ್ಯವಾಗಿರಲಿಲ್ಲ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X