ರಾಯಚೂರು | ರಾಜ್ಯ ಸರ್ಕಾರ ʼಮೈ ಬ್ರದರ್ʼ ಪಾಲಿಸಿ ಮೂಲಕ ದೇಶ‌ ವಿರೋಧಿಗಳ ರಕ್ಷಣೆಗೆ ನಿಂತಿದೆ: ರವಿಕುಮಾರ್

Date:

Advertisements

ಸಂವಿಧಾನದ ಆಶಯ ರಕ್ಷಿಸುವುದಾಗಿ ಹೇಳುವ ರಾಜ್ಯ ಸರ್ಕಾರ ʼಮೈ ಬ್ರದರ್ʼ ಪಾಲಿಸಿಯಿಂದ ದೇಶ‌ ವಿರೋಧಿಗಳ ರಕ್ಷಣೆಗೆ ನಿಂತಿದೆ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ರವಿಕುಮಾರ್ ಆರೋಪಿಸಿದರು.

ರಾಯಚೂರಿನಲ್ಲಿ ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿ, “ವಿಧಾನಸೌಧದಲ್ಲಿ ಕಾಂಗ್ರೆಸ್ ರಾಜ್ಯಸಭಾ ಸದಸ್ಯ ಆಕಾಂಕ್ಷಿಯ ಬೆಂಬಲಿಗರು ಪಾಕಿಸ್ತಾನಕ್ಕೆ ಜೈ ಎನ್ನುತ್ತಾರೆ. 34 ಜನರಲ್ಲಿ ಮೂವರನ್ನು ಮಾತ್ರ ಬಂಧಿಸಿದೆ. ಮಂಗಳೂರಿನ ಕುಕ್ಕರ್ ಬ್ಲಾಸ್ಟ್ ಪ್ರಕರಣದಲ್ಲಿಯೂ ಕೂಡ ಡಿ.ಕೆ ಶಿವುಕುಮಾರ್‌ ಅವರು ಬ್ಲಾಸ್ಟ್ ಮಾಡಿದವರನ್ನು ಬ್ರದರ್ಸ್‌ ಎಂದು ಹೇಳಿಕೊಂಡಿದ್ದರು. ಈಗ ಸೂಪರ್ ಸಿಎಂ ಆಗಿ ವರ್ತಿಸುತ್ತಿರುವ ಪ್ರಿಯಾಂಕ ಖರ್ಗೆಯವರು ಪಾಕಿಸ್ತಾನದ ಪರ ಘೋಷಣೆಯೇ ಕೂಗಿಲ್ಲ ಎನ್ನುತ್ತಿದ್ದಾರೆ. ಆದರೆ, ಎಸ್‌ಎಫ್‌ಎಲ್ ವರದಿಯಲ್ಲಿ ಸತ್ಯ ಬಹಿರಂಗವಾಗಿದೆ. ಆದರೂ ಸರ್ಕಾರ ಒಪ್ಪುತ್ತಿಲ್ಲ. ಸರ್ಕಾರ ವರದಿ ಪಡೆಯಲು ಇನ್ನೆಷ್ಟು ದಿನ ಬೇಕು” ಎಂದು ಪ್ರಶ್ನಿಸಿದರು.

“ಬೆಂಗಳೂರಿನ ಕೆಫೆಯಲ್ಲಿ ನಡೆದ ಬಾಂಬ್ ಬ್ಲಾಸ್ಟ್ ಪ್ರಕರಣದಲ್ಲಿಯೂ ಸರ್ಕಾರ ನಡೆಯಿಂದ ವಿದ್ರೋಹಿ ಚಟುವಟಿಕೆಗಳು ಹೆಚ್ಚಳವಾಗಲು ಕಾರಣವಾಗಿದೆ. ಈ ಹಿಂದೆ ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿಯೇ ಪಿಎಫ್‌ಐ, ಕೆಎಫ್‌ಡಿ ಸಂಘಟನೆಗಳ ಮೇಲೆ ಹಾಕಲಾಗಿದ್ದ ಕೇಸ್‌ಗಳನ್ನು ಹಿಂಪಡೆಯಲಾಗಿತ್ತು. ಡಿಜೆ ಹಳ್ಳಿ, ಕೆಜಿ ಹಳ್ಳಿ ಘಟನೆಯಲ್ಲಿಯೂ ಶಾಸಕರ ಮೇಲೆ ದಾಳಿಯಾದರೂ ಆರೋಪಿಗಳನ್ನು ರಕ್ಷಿಸಲಾಯಿತು. ಸಮಾಜ ದ್ರೋಹಿಗಳನ್ನು ರಕ್ಷಣೆ ಮಾಡಲು ಸರ್ಕಾರ ನಿಂತಿದೆ” ಎಂದು ದೂರಿದರು.

Advertisements

ಹಿಂದೂ ಧರ್ಮ ವಿರೋಧಿಯಾಗಿರುವ ಸರ್ಕಾರ ಬಹುಸಂಖ್ಯಾತರ ಜನರನ್ನು ಕಡೆಗಣಿಸಿ ಅಲ್ಪಸಂಖ್ಯಾತರಿಗೆ ₹10 ಸಾವಿರ ಕೋಟಿ ಅನುದಾನ ನೀಡುವುದಾಗಿ ಹೇಳುತ್ತಿದೆ. ಅನುದಾನ ನೀಡಲು ವಿರೋಧವಿಲ್ಲ. ಆದರೆ, ಬಹುಸಂಖ್ಯಾತರಿಗೂ ನ್ಯಾಯ ಕೊಡಬೇಕಿತ್ತು. ತುಷ್ಠೀಕರಣಕ್ಕಾಗಿ ಅನುದಾನ ಹಂಚಿಕೆ ಮಾಡಲಾಗಿದೆ” ಎಂದು ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ? ತುಮಕೂರು | ದಲಿತ ಸಿಎಂ ಚರ್ಚೆ ಅಪ್ರಸ್ತುತ: ಗೃಹ ಸಚಿವ ಪರಮೇಶ್ವರ್

ಕರ್ನಾಟಕ ನಂಬರ್ ಒನ್ ಸುಳ್ಳಗಾರರಾಗಿರುವ ಸಿದ್ದರಾಮಯ್ಯನವರು ಕೇಂದ್ರದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ. ಕೇಂದ್ರ ಸರ್ಕಾರ ಬರ ಪರಿಹಾರ ಬಿಡುಗಡೆ ಮಾಡಿದ್ದರೂ ರಾಜ್ಯ ಸರ್ಕಾರ ಹೇಳುತ್ತಿಲ್ಲ. ರಾಜ್ಯಗಳಿಗೆ ತಾರತಮ್ಯವಾದರೆ ಸುಪ್ರಿಂಕೋರ್ಟಿನಲ್ಲಿ ಪ್ರಶ್ನಿಸಲಿ” ಎಂದರು

ಈ ಸಂದರ್ಭದಲ್ಲಿ ಮಾಜಿ ಶಾಸಕ ಎ ಪಾಪಾರೆಡ್ಡಿ, ನಗರ ಅಧ್ಯಕ್ಷ ರಾಘವೇಂದ್ರ ಉಟ್ಕೂರು, ಜಿ ಶಂಕರರೆಡ್ಡಿ, ರವೀಂದ್ರ ಜಲ್ದಾರ, ಗಿರೀಶ್‌ ಕನಕವೀಡು, ಶಿವಬಸ್ಸಪ್ಪ ಮಾಲಿಪಾಟೀಲ್ ಇದ್ದರು.

ವರದಿ : ಹಫೀಜುಲ್ಲ

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

Download Eedina App Android / iOS

X