ಕನ್ನಡ ಬಳಕೆ | ಮಾ.12ಕ್ಕೆ ವರದಿ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ ಸಚಿವ ತಂಗಡಗಿ

Date:

Advertisements

“ರಾಜ್ಯದಲ್ಲಿ ಶೇ.60ರಷ್ಟು ಕನ್ನಡ ಇರುವ ನಾಮಫಲಕ ಅಳವಡಿಕೆಗೆ ಸಂಬಂಧಿಸಿದಂತೆ, ವಿಧಾನಸಭಾ ಕ್ಷೇತ್ರವಾರು ಖುದ್ದು ಜಿಲ್ಲಾಧಿಕಾರಿಗಳು ಭೇಟಿ ನೀಡಿ, ನಾಮಫಲಕ ಅಳವಡಿಕೆ ಪ್ರಗತಿ ಬಗ್ಗೆ ಮಾರ್ಚ್ 12ರಂದು ವರದಿ ನೀಡಬೇಕು” ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ವಿಧೇಯಕ 2024ಕ್ಕೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ವಿಕಾಸಸೌಧದಲ್ಲಿ ಗುರುವಾರ ಜಿಲ್ಲಾಧಿಕಾರಿಗಳೊಂದಿಗೆ ಸಚಿವರು ವೀಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದರು. ವಿಧೇಯಕದಲ್ಲಿನ ಅಂಶಗಳ ಕಟ್ಟುನಿಟ್ಟಿನ ಅನುಷ್ಠಾನ ಕುರಿತಂತೆ ಹಲವು ನಿರ್ದೇಶನಗಳನ್ನು ನೀಡಿದರು.

“ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ವಿಧೇಯಕ 2024ದ ಅನ್ವಯ ವಾಣಿಜ್ಯ ಉದ್ದಿಮೆಗಳ ನಾಮಫಲಕದಲ್ಲಿ ಶೇ.60ರಷ್ಟು ಕನ್ನಡ ಭಾಷೆ ಇರಲೇಬೇಕು. ಅದಕ್ಕೆ ಸಂಬಂಧಿಸಿದಂತೆ ಪ್ರತಿ ಜಿಲ್ಲೆಗಳಲ್ಲಿನ ಪ್ರಗತಿ ಕುರಿತಂತೆ ಖುದ್ದು ಜಿಲ್ಲಾಧಿಕಾರಿಗಳೇ ಪರಿಶೀಲನೆ ನಡೆಸಬೇಕು. ನಿಮ್ಮ ಜಿಲ್ಲೆ ವ್ಯಾಪ್ತಿಯ ವಿಧಾನಸಭಾ ಕ್ಷೇತ್ರಗಳಿಗೆ ತೆರಳಿ ಅಲ್ಲಿನ ಪ್ರಗತಿಯನ್ನು ಅವಲೋಕಿಸಬೇಕು. ಮಾರ್ಚ್ 12ರೊಳಗೆ ಪರಿಶೀಲನೆ ನಡೆಸಿ, ವಿಧೇಯಕ ಅನುಷ್ಠಾನದ ಕುರಿತು ವರದಿ ನೀಡಬೇಕು” ಎಂದು‌ ಹೇಳಿದರು.‌

Advertisements

“ನಾಮಫಲಕದಲ್ಲಿ ಶೇ.60ರಷ್ಟು ಕನ್ನಡ ಅಳವಡಿಕೆಯ ಗಡುವು ಮಾರ್ಚ್‌ 15ರವರೆಗೆ ಮುಂದೂಡಲಾಗಿದ್ದರೂ, ಈವರೆಗಿನ ಪ್ರಗತಿಯ ವರದಿ ನೀಡಬೇಕು. ಜಿಲ್ಲಾಧಿಕಾರಿ‌ ನೇತೃತ್ವದಲ್ಲಿ ಜಿಲ್ಲಾ ಸಮಿತಿ ಹಾಗೂ ತಾಲ್ಲೂಕು ಮಟ್ಟದಲ್ಲಿ‌ ಉಪ ವಿಭಾಗಾಧಿಕಾರಿ ಅಧ್ಯಯತೆಯಲ್ಲಿ ಸಭೆ ನಡೆಸಿ ಸಮಸ್ಯೆಗಳನ್ನು ಇತ್ಯರ್ಥಗೊಳಿಸಬೇಕು. ಯಾವುದೇ ಕೆಲಸ ಇದ್ದರೂ ಕಾರಣಗಳನ್ನು ‌ಕೇಳುವುದಿಲ್ಲ. ಖುದ್ದು ಜಿಲ್ಲಾಧಿಕಾರಿಗಳು ತಮ್ಮ ಅಧ್ಯಕ್ಷತೆಯ ಸಭೆ ನಡೆಸಬೇಕು” ಎಂದು ಸೂಚನೆ‌ ನೀಡಿದರು.

“ಗಡಿ ಜಿಲ್ಲೆಗಳಾದ ಬೆಳಗಾವಿ, ಬಳ್ಳಾರಿ, ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ, ತುಮಕೂರು, ದಕ್ಷಿಣ ಕನ್ನಡಗಳಲ್ಲಿ ಕನ್ನಡ ನಾಮಫಲಕ ಅಳವಡಿಕೆಗೆ ಹೆಚ್ಚಿನ ಒತ್ತು ನೀಡಬೇಕು. ಆ ಜಿಲ್ಲೆಗಳಲ್ಲಿ ಕನ್ನಡಪರ ಸಂಘಟನೆಗಳು ಹೆಚ್ಚಾಗಿ ಪ್ರತಿಭಟನೆ ನಡೆಸುತ್ತಿದ್ದು, ಅದನ್ನು ನಿಯಂತ್ರಿಸಲು ಕನ್ನಡ ನಾಮಫಲಕ ಅಳವಡಿಕೆ ಶೇ. 100ರಷ್ಟು ಆಗಬೇಕು” ಎಂದರು.

“ಖಾನಾಪುರ, ನಿಪ್ಪಾಣಿ, ಚಿಕ್ಕೋಡಿಯಂತಹ ತಾಲೂಕುಗಳಲ್ಲಿ ಮರಾಠಿ ನಾಮಫಲಕ ಅಳವಡಿಕೆಯ ದೂರುಗಳಿದ್ದು, ಅವುಗಳನ್ನು ತೆರವುಗೊಳಿಸಿ ಕನ್ನಡ ನಾಮಫಲಕ ಅಳವಡಿಕೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು” ಎಂದು ತಾಕೀತು ಮಾಡಿದರು.

“ಕನ್ನಡ ನಾಮಫಲಕ ಅಳವಡಿಕೆ ಕುರಿತಂತೆ ವ್ಯಾಪಾರಿಗಳಲ್ಲಿ ಜಾಗೃತಿ ಮೂಡಿಸಬೇಕು ಹಾಗೂ ನಾಮಫಲಕ ಅಳವಡಿಸದವರಿಗೆ ನೋಟಿಸ್‌ ನೀಡಬೇಕು. ಕನ್ನಡ ನಾಮಫಲಕ ಅಳವಡಿಸದಿದ್ದರೆ ಉದ್ದಿಮೆ ಪರವಾನಗಿ ರದ್ದು ಸೇರಿದಂತೆ ದುಬಾರಿ ದಂಡ ವಿಧಿಸಲಾಗುವುದು ಎಂಬ ಎಚ್ಚರಿಕೆಯನ್ನು ಉದ್ದಿಮೆದಾರರಿಗೆ ನೀಡಬೇಕು” ಎಂದು ಸೂಚಿಸಿದರು.

ಈ ಸುದ್ದಿ ಓದಿದ್ದೀರಾ? 9 ವರ್ಷದ ಬಾಲಕಿ ಮೇಲೆ ಅತ್ಯಾಚಾರ, ಕೊಲೆ : 19 ವರ್ಷದ ಯುವಕ ಸೇರಿ ಇಬ್ಬರ ಬಂಧನ

“ಯಾವುದೇ ಕೆಲಸ ಇದ್ದರೂ ಸರ್ಕಾರ ತಂದಿರುವ ಈ ಕಾನೂನನ್ನು ಜಾರಿಗೆ ತರಬೇಕು. ಕೆಲ ಜಿಲ್ಲೆಗಳಿಗೆ ನಾನೇ ಖುದ್ದು ಭೇಟಿ ನೀಡಿ ಪರಿಶೀಲನೆ‌ ನಡೆಸುತ್ತೇನೆ. ಅನುಷ್ಠಾನ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ” ಎಂದು ತಿಳಿಸಿದರು‌.

ಈ ಸಂದರ್ಭದಲ್ಲಿ ‌ಇಲಾಖೆ‌ ಕಾರ್ಯದರ್ಶಿ ಅಜಯ್ ನಾಗಭೂಷಣ್, ನಿರ್ದೇಶಕಿ ಡಾ.ಧರಣಿದೇವಿ ಮಾಲಗತ್ತಿ ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

Download Eedina App Android / iOS

X