ಕೋಲಾರ | ಹಸು ಹೊಟ್ಟೆಯಿಂದ 15 ಕೆಜಿ ಪ್ಲಾಸ್ಟಿಕ್‌ ಹೊರತೆಗೆದ ವೈದ್ಯರು!

Date:

Advertisements
  • ಮೇವು ತಿನ್ನುವುದು ನಿಲ್ಲಿಸಿ ಹಾಲು ಇಳುವರಿ ಕಡಿಮೆ ಮಾಡಿದ್ದ ಹಸು
  • ಹಸುಗಳನ್ನು ಮೇಯಲು ಬಿಡುವಾಗ ಎಚ್ಚರಿಕೆ ವಹಿಸುವಂತೆ ಸಲಹೆ

15 ಕೆಜಿ ಪ್ಲಾಸ್ಟಿಕ್‌ ತಿಂದು ಹೊಟ್ಟೆಯಲ್ಲಿಟ್ಟುಕೊಂಡು ಬಳಲುತಿದ್ದ ಹಸುವಿಗೆ ಪಶು ವೈದ್ಯರು ಶಸ್ತ್ರಚಿಕಿತ್ಸೆ ಮಾಡಿ ಪ್ಲಾಸ್ಟಿಕ್‌ ಹೊರತೆಗೆದಿದ್ದು, ಹಸುವನ್ನು ಪ್ರಾಣಾಪಾಯದಿಂದ ಪಾರು ಮಾಡಿದ್ದಾರೆ.

ಕೋಲಾರದ ನಗರದಲ್ಲಿ ವಿದೇಶಿ ಎಚ್‌ಎಫ್‌ ತಳಿಯ ಹಸು ಮೇವು ತಿನ್ನುವುದನ್ನು ನಿಲ್ಲಿಸಿ, ಹಾಲು ಇಳುವರಿಯನ್ನು ಕಡಿಮೆ ಮಾಡಿತ್ತು. ಮಾಲೀಕ ಹಸುವಿಗೆ ಸಾಕಷ್ಟು ಚಿಕಿತ್ಸೆ ಕೊಡಿಸಿದರೂ ಪ್ರಯೋಜನವಾಗಿರಲಿಲ್ಲ.

ಬಳಿಕ ಪಶು ವೈದ್ಯರ ಬಳಿಗೆ ಹಸುವನ್ನು ಕೊಂಡೊಯ್ದಿದ್ದಾರೆ. ಹಸುವಿನ ತಪಾಸಣೆ ನಡೆಸಿದ ವೈದ್ಯರು ಹೊಟ್ಟೆಯಲ್ಲಿ ಪ್ಲಾಸ್ಟಿಕ್‌ ಇರುವುದನ್ನು ಪತ್ತೆಮಾಡಿದ್ದಾರೆ.

Advertisements

ಪಶು ಶಸ್ತ್ರಚಿಕಿತ್ಸಕ ಡಾ. ರಾಹುಲ್‌ ಮತ್ತು ಪಶು ವೈದ್ಯಾಧಿಕಾರಿ ಡಾ. ರಘುನಾಥ್‌ ಅವರು ಹಸುವಿಗೆ ಶಸ್ತ್ರ ಚಿಕಿತ್ಸೆ ಮಾಡುವ ಮೂಲಕ ಹೊಟ್ಟೆಯಲ್ಲಿಟ್ಟ ಸುಮಾರು 15 ಕೆಜಿ ಪ್ಲಾಸ್ಟಿಕ್‌ ಹೊರತೆಗೆದು ಹಸುವಿನ ಪ್ರಾಣ ಉಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಚಿಕ್ಕಮಗಳೂರು | ತಪ್ಪಿದ ಕೈ ಟಿಕೆಟ್‌; ಬಂಡಾಯ ಅಭ್ಯರ್ಥಿಯಾಗಿ ಗೋಪಿಕೃಷ್ಣ ಕಣಕ್ಕೆ

ಹಸುಗಳಿಗೆ ಮೇವು ತಿನ್ನಲು ಹೊರಗೆ ಬಿಡುವ ಸಂದರ್ಭದಲ್ಲಿ ಪ್ಲಾಸ್ಟಿಕ್‌ ಮತ್ತಿತರ ತ್ಯಾಜ್ಯ ಹೊಟ್ಟೆಸೇರದಂತೆ ಎಚ್ಚರವಹಿಸುವುದು ಪ್ರತಿಯೊಬ್ಬ ಹಸು ಸಾಕಾಣಿಕೆದಾರರ ಜವಾಬ್ದಾರಿಯಾಗಬೇಕು. ಇಲ್ಲವಾದರೆ ರಾಸುಗಳನ್ನು ಕಳೆದುಕೊಳ್ಳಬೇಕಾಗುತ್ತದೆ ಎಂದು ಪಶು ಶಸ್ತ್ರಚಿಕಿತ್ಸಕ ಡಾ. ರಾಹುಲ್‌ ಮತ್ತು ಡಾ. ರಘುನಾಥ್‌ ಹೈನುಗಾರಿಕೆ ಮಾಡುವವರಿಗೆ ಎಚ್ಚರಿಕೆ ನೀಡಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | NWKRTC ವತಿಯಿಂದ ಅಪ್ರೆಂಟಿಸ್ ಹುದ್ದೆಗಳಿಗೆ WALK-IN-INTERVIEW

ಕರ್ನಾಟಕ ರಾಜ್ಯ ವಾಯುವ್ಯ ಸಾರಿಗೆ ಸಂಸ್ಥೆ, ಶಿರಸಿ ವಿಭಾಗದಲ್ಲಿ ವಿವಿಧ ಅಪ್ರೆಂಟಿಸ್...

ವಿಜಯನಗರ | ಅಲೆಮಾರಿ ಸಮುದಾಯಗಳ ಅಭಿವೃದ್ಧಿಯೇ ನಿಗಮದ ಮುಖ್ಯ ಧ್ಯೇಯ: ಪಲ್ಲವಿ

ಅಲೆಮಾರಿ ಬುಡಕಟ್ಟು ಸಮುದಾಯಗಳನ್ನು ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ರಾಜಕೀಯವಾಗಿ ಮತ್ತು ಔದ್ಯೋಗಿಕವಾಗಿ ಮುಂಚೂಣಿಗೆ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ಯಾದಗಿರಿ | ಕಟ್ಟಡ ಕಾರ್ಮಿಕರ ಮಕ್ಕಳಿಗೆ ಸಹಾಯ ಧನ ನೀಡುವಂತೆ ಒತ್ತಾಯ

ಕಾರ್ಮಿಕರ ಮಕ್ಕಳಿಗೆ ಸಹಾಯ ಧನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸುವಂತೆ ಕಲ್ಯಾಣ...

Download Eedina App Android / iOS

X