ರಾಮೇಶ್ವರಂ ಕೆಫೆಯಲ್ಲಿ ಸ್ಪೋಟ | ಬಾಂಬರ್​ ಓಡಾಟದ ಮತ್ತೆರಡು ವಿಡಿಯೋ ಬಿಡುಗಡೆ​ ಮಾಡಿದ ಎನ್‌ಐಎ

Date:

Advertisements

ರಾಮೇಶ್ವರಂ ಕೆಫೆಯಲ್ಲಿ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಆರಂಭಿಸಿರುವ ಎನ್‌ಐಎ ಮತ್ತು ಸಿಸಿಬಿ ಅಧಿಕಾರಿಗಳು ಆರೋಪಿ ಪತ್ತೆಗೆ ತೀವ್ರ ಹುಡುಕಾಟ ನಡೆಸಿದ್ದಾರೆ. ಅಲ್ಲದೇ, ಆರೋಪಿಯನ್ನು ಹುಡುಕಿ ಕೊಟ್ಟವರಿಗೆ ₹10 ಲಕ್ಷ ಬಹುಮಾನ ಕೊಡುವುದಾಗಿ ಘೋಷಿಸಿದ್ದಾರೆ. ಈ ನಡುವೆ, ಶಂಕಿತ ಆರೋಪಿ ಬಿಎಂಟಿಸಿ ಬಸ್‌ ಹಾಗೂ ಬಳ್ಳಾರಿ ಬಸ್‌ ನಿಲ್ದಾಣದಲ್ಲಿ ಓಡಾಟ ನಡೆಸಿರುವ ವಿಡಿಯೊವನ್ನು ಎನ್‌ಐಎ ಬಿಡುಗಡೆ ಮಾಡಿದೆ.

ಬಿಎಂಟಿಇ ಬಸ್‌ನಲ್ಲಿ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾದ ದೃಶ್ಯಾವಳಿ ಆಧಾರದಲ್ಲಿ ಆರೋಪಿಯ ವಿಡಿಯೋ ಬಿಡುಗಡೆ ಮಾಡಲಾಗಿದೆ. ಕ್ಯಾಪ್, ಮಾಸ್ಕ್ ಹಾಗೂ ಕನ್ನಡಕ ಧರಿಸಿರುವ ಆರೋಪಿಯು ಬಸ್‌ನಲ್ಲಿ ಕುಳಿತು ಪ್ರಯಾಣಿಸುತ್ತಿರುವ ದೃಶ್ಯ ಸೆರೆಯಾಗಿದೆ.

ಇನ್ನೊಂದು ವಿಡಿಯೋದಲ್ಲಿ ಶಂಕಿತ ತುಮಕೂರು ಮೂಲಕ ಬಳ್ಳಾರಿಗೆ ತೆರಳಿರುವ ಬಗ್ಗೆ ಅನುಮಾನ ವ್ಯಕ್ತವಾಗಿತ್ತು. ಅಲ್ಲಿಂದ ಬೀದರ್​​ನತ್ತ ಹೊರಟಿರುವುದಾಗಿ ಮಾಹಿತಿ ದೊರೆತಿತ್ತು. ಅದರಂತೆ, ಇದೀಗ ಬಾಂಬರ್ ಬಳ್ಳಾರಿ ಬಸ್ ನಿಲ್ದಾಣದಲ್ಲಿ ಓಡಾಡಿರುವ ದೃಶ್ಯ ಸಿಸಿ ಕ್ಯಾಮಾರದಲ್ಲಿ ಸೆರೆಯಾಗಿದೆ.

Advertisements

ಮಾರ್ಚ 1ನೇ ತಾರೀಖು ರಾತ್ರಿ ಒಂಬತ್ತು ಗಂಟೆಗೆ ಬಸ್ ನಿಲ್ದಾಣದಲ್ಲಿ ಓಡಾಡಿರುವ ಬಾಂಬರ್, ಮುಖಕ್ಕೆ ಮಾಸ್ಕ್ ಹಾಕಿ, ಲೈಟ್ ಬ್ಲೂ ಕಲರ್ ಟಿ ಶರ್ಟ, ಬ್ಲಾಕ್ ಪ್ಯಾಂಟ್ ಹಾಕಿಕೊಂಡು ಓಡಾಡಿದ್ದಾನೆ.

ಈ ಕುರಿತು ಸಾರ್ವಜನಿಕ ಪ್ರಕಟಣೆ ಹೊರಡಿಸಿರುವ ಎನ್‌ಐಎ, ಮಾಹಿತಿ ನೀಡಿದವರ ಹೆಸರನ್ನು ಗೋಪ್ಯವಾಗಿ ಇಡಲಾಗುವುದು ಎಂದು ತಿಳಿಸಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ನೀರಿನ ಸಮಸ್ಯೆ ಬಗೆಹರಿಸಲು ವಾರ್ಡ್‌ವಾರು ನೋಡಲ್ ಅಧಿಕಾರಿ ನೇಮಕ

ಶಂಕಿತನ ಸುಳಿವು ಲಭಿಸಿದ ಕೂಡಲೇ 080 29510900, 8904241100 ಹಾಗೂ ಇ–ಮೇಲ್‌ ವಿಳಾಸ info.blr.nia@gov.inಗೆ ಮಾಹಿತಿ ನೀಡಬಹುದು ‌ಎಂದು ಅಧಿಕಾರಿಗಳು ಕೋರಿದ್ದಾರೆ.

ಕೆಫೆ ಬಾಂಬರ್‌ ನ ಪತ್ತೆಗಾಗಿ 500ಕ್ಕೂ ಹೆಚ್ಚು ಸಿಸಿಟಿವಿ ಕ್ಯಾಮರಾಗಳ ಪರಿಶೀಲನೆ ನಡೆಸಲಾಗಿದೆ.  10 ಲಕ್ಷ ಬಹುಮಾನ ಘೋಷಿಸಲಾಗಿದೆ. ಶಂಕಿತನ ರೇಖಾಚಿತ್ರ ಸಿದ್ಧಪಡಿಸಲಾಗಿದೆ. ಸಿಸಿಬಿ, ಎನ್‌ಐಎ ಅಧಿಕಾರಿಗಳು ಹಲವು ಆಯಾಮಗಳಲ್ಲಿ ತನಿಖೆ ಚುರುಕುಗೊಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

Download Eedina App Android / iOS

X