ಬೆಂಗಳೂರು | ಮಾರ್ಚ್‌ 10ರ ಭಾನುವಾರ ಬೆಳಗ್ಗೆ 6 ಗಂಟೆಗೇ ಆರಂಭ ನಮ್ಮ ಮೆಟ್ರೋ

Date:

Advertisements

“ಮಾರ್ಚ್‌ 10ರಂದು ನೇರಳೆ ಮತ್ತು ಹಸಿರು ಮಾರ್ಗಗಳಲ್ಲಿ ಮೆಟ್ರೋ ರೈಲು ಸೇವೆಗಳನ್ನು ಬೆಳಗ್ಗೆ 7ರ ಬದಲಾಗಿ 6 ಗಂಟೆಗೆ ಪ್ರಾರಂಭಿಸಲಾಗುವುದು” ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್‌) ತಿಳಿಸಿದೆ.

“ಕರ್ನಾಟಕ ಪೊಲೀಸ್ ವತಿಯಿಂದ ರಾಜ್ಯ ಮಟ್ಟದ 10 ಕಿಲೋ ಮೀಟರ್ ಮತ್ತು 5 ಕಿ.ಮೀ ಓಟದ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಸುಗಮವಾಗಿ ಭಾಗವಹಿಸಲು ಬಿಎಂಆರ್‌ಸಿಎಲ್ ನೇರಳೆ ಮತ್ತು ಹಸಿರು ಮಾರ್ಗಗಳಲ್ಲಿ ಮೆಟ್ರೋ ರೈಲು ಸೇವೆಗಳನ್ನು ಎಲ್ಲ ನಾಲ್ಕು ಟರ್ಮಿನಲ್‌ಗಳಿಂದ ಮಾರ್ಚ್ 10 (ಭಾನುವಾರ)ರಂದು ಬೆಳಗ್ಗೆ 7ರ ಬದಲಾಗಿ 6 ಗಂಟೆಗೆ ಪ್ರಾರಂಭಿಸಲಿದೆ” ಎಂದು ಪ್ರಕಟಣೆ ಮೂಲಕ ಮಾಹಿತಿ ನೀಡಿದೆ.

ರಾಜ್ಯ ಮಟ್ಟದ 10 ಕಿ.ಮೀ ಮತ್ತು 5 ಕಿ.ಮೀ ಓಟದ ಸ್ಪರ್ಧೆ

Advertisements

ರಾಜ್ಯ ಪೊಲೀಸ್ ಇಲಾಖೆಯ ಸುವರ್ಣ ಮಹೋತ್ಸವದ ಅಂಗವಾಗಿ ಭಾರತೀಯ ಸ್ಟೇಟ್ ಬ್ಯಾಂಕ್ ಸಹಯೋಗದಲ್ಲಿ ಮಾ.10೦ರಂದು 5 ಹಾಗೂ 10 ಕಿ.ಮೀ ಓಟದ ಸ್ಪರ್ಧೆ ಆಯೋಜಿಸಿದೆ.

ರಾಜ್ಯ ಪೊಲೀಸ್ ಪ್ರಧಾನ ಕಚೇರಿಯಲ್ಲಿ ಸೋಮವಾರ ಸುವರ್ಣ ಮಹೋತ್ಸವದ ಲೋಗೋ ಮತ್ತು ಟೀ ಶರ್ಟ್ ಅನ್ನು ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಬಿಡುಗಡೆಗೊಳಿಸಿ ಮಾತನಾಡಿದರು, “ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲ ಜಿಲ್ಲಾ ಮಟ್ಟದಲ್ಲಿ ಫಿಟ್‌ನೆಸ್ ಫಾರ್ ಆಲ್ ಎಂಬ ಶೀರ್ಷಿಕೆಯಡಿ ಈ ಓಟದ ಸ್ಪರ್ಧೆ ಏರ್ಪಡಿಸಲಾಗಿದೆ. ಈ ಓಟದ ಮುಖಾಂತರ ಮಾದಕ ವಸ್ತು ಮುಕ್ತ ಕರ್ನಾಟಕ, ಸೈಬರ್ ಕ್ರೈಂ ಮತ್ತು ಹಸಿರು ಬೆಂಗಳೂರು ಎಂಬ ನಾಲ್ಕು ಮಾದರಿಯಲ್ಲಿ ಜಾಗೃತಿ ಮೂಡಿಸಲಾಗುವುದು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಕುಡಿಯುವ ನೀರಿನ ಸಮಸ್ಯೆಯಿಂದ ತತ್ತರ: ಶೌಚಕ್ಕೂ ನೀರಿಲ್ಲದೆ ಮಾಲ್‌ ಕಡೆ ಮುಖ ಮಾಡಿದ ಜನ

ಬಹುಮಾನ

“ಮಾ.10 ರಂದು ವಿಧಾನಸೌಧದ ಎದುರು ಓಟ ಪ್ರಾರಂಭವಾಗಲಿದ್ದು, ಕಬ್ಬನ್‌ಪಾರ್ಕ್ ಮುಖಾಂತರ ಸಾಗಿ ವಿಧಾನಸೌಧದ ಎದುರೇ ಮುಕ್ತಾಯಗೊಳ್ಳಲಿದೆ. ಪೊಲೀಸ್, ಪಬ್ಲಿಕ್ ಹಾಗೂ ಎಸ್‌ಬಿಐ ಎಂಬ ಮೂರು ವಿಭಾಗಗಳಲ್ಲಿ 5 ಕಿ.ಮೀ. ಮತ್ತು 10 ಕಿ.ಮೀ. ಓಟ ನಡೆಯಲಿದೆ. ಪ್ರಥಮ ಬಹುಮಾನ ₹1 ಲಕ್ಷ ಮತ್ತು 5 ಕಿ.ಮೀ. ಓಟದಲ್ಲಿ ಪ್ರಥಮ ಬಹುಮಾನ ₹40 ಸಾವಿರ ನೀಡಲಾಗುತ್ತದೆ. ಮೂರು ವಿಭಾಗಗಳಲ್ಲಿ ಪುರುಷರು ಮತ್ತು ಮಹಿಳಾ ವಿಜೇತರಿಗೆ ಪ್ರತ್ಯೇಕವಾಗಿ ನಗದು ಬಹುಮಾನ ನೀಡಲಾಗುತ್ತದೆ. ಹಿರಿಯ ನಾಗರಿಕರು ಹಾಗೂ ವಿಶೇಷ ಚೇತನರಿಗೂ ಪ್ರತ್ಯೇಕವಾಗಿ ಬಹುಮಾನ ನೀಡಲಾಗುವುದು” ಎಂದು ತಿಳಿಸಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X