ಗದಗ | ಮುಖ್ಯದ್ವಾರದ ರಸ್ತೆಗೆ ಮಾಜಿ ಶಾಸಕ ಮುತ್ತಿನಪೆಂಡಿಮಠ ನಾಮಕರಣ‌

Date:

Advertisements

ಗದಗ ನಗರದ ಜಗಜ್ಯೋತಿ ಬಸವೇಶ್ವರರ ಮೂರ್ತಿಗೆ ಹೋಗುವ ಮುಖ್ಯದ್ವಾರದಲ್ಲಿ ರಸ್ತೆಗೆ ಮಾಜಿ ಶಾಸಕ ಸಿ ಎಸ್ ಮುತ್ತಿನಪೆಂಡಿಮಠ ಹೆಸರನ್ನು ಪ್ರವಾಸೋದ್ಯಮ ಇಲಾಖೆ ಸಚಿವ ಎಚ್ ಕೆ ಪಾಟಿಲ್‌ ನಾಮಕರಣ ಮಾಡಿದರು.

“ಅತ್ಯಂತ ಮುಖ್ಯ ಸುಂದರ ರಸ್ತೆಗೆ ನಾಮಕರಣ ಆಗಿರೋದು ಎಲ್ಲರಿಗೂ ಸಂತೋಷ ತಂದಿದೆ. ಮಾಜಿ ಶಾಸಕ ಸಿ ಎಸ್ ಮುತ್ತಿನಪೆಂಡಿಮಠ ಅವರ ರಾಜಕೀಯ ಜೀವನ ನಂತರದ ಒಡನಾಟ ಬಾಂಧವ್ಯ ಅನ್ಯೋನ್ಯವಾಗಿತ್ತು. ಅವರೊಂದಿಗೆ ಡಿ ಎರ್ ಪಾಟೀಲ ಒಡನಾಟ ಸ್ನೇಹ ಸಂಬಂಧ ತುಂಬಾ ಚೆನ್ನಾಗಿತ್ತು. ಮುತ್ತಿನಪೆಂಡಿಮಠ ಅವರ ಸ್ನೇಹಿತರನ್ನು ನಾನು ಅತ್ಯಂತ ಸೂಕ್ಷ್ಮವಾಗಿ ಗಮನಿಸಿದ್ದೆ. ಅವರ ತತ್ವ ಸಿದ್ದಾಂತ ಮೆಚ್ಚುವಂತಹವು. ಅವರು ನಮ್ಮ ಹಿತೈಷಿಗಳು ಎಂಬುದು ಸಂತೋಷ ಎನಿಸಿತು” ಎಂದು ಸಚಿವ ಎಚ್ ಕೆ ಪಾಟಿಲ್‌ ಹೇಳಿದರು.

ರಾಜಕಾರಣದಲ್ಲಿ ಸಕ್ರಿಯವಾಗಿ ಸ್ವಲ್ಪದಿನ ಇದ್ದರೂ ಸಹ ಬಹಳಷ್ಟು ಜನರನ್ನು ಗಳಿಸಿಕೊಂಡಿದ್ದರು. ಅನೇಕ ಆತ್ಮೀಯ ಗೆಳೆಯರನ್ನು ಸಂಪಾದಿಸಿದ್ದರು. ಅವರದ್ದು ಸ್ನೇಹಪರ ಬದುಕಾಗಿತ್ತು. ಅವರ ಸಂಸ್ಕೃತಿ ಮೇಲುಸ್ಥರದ ವ್ಯಕ್ತಿತ್ವ ಎಲ್ಲರನ್ನು ಸೆಳೆಯುತ್ತಿತ್ತು ಎಂದರು.

Advertisements

ಮಾಜಿ ಸಚಿವ ಎಸ್ ಎಸ್ ಪಾಟಿಲ್ ಮಾತನಾಡಿ, “ಸಿ‌ ಎಸ್ ಮುತ್ತಿನಪೆಂಡಿಮಠ ಅವರು ವಕೀಲರಾಗಿ ಜನಸೇವೆ ಮಾಡಿದ್ದಾರೆ. ನಾನು ಶಾಸಕನಾಗಲು ಪ್ರಮುಖ ಕಾರಣ ಸಿ ಎಸ್ ಮುತ್ತಿನಪೆಂಡಿಮಠ ಎಂದರೆ ತಪ್ಪಾಗದು” ಎಂದು ಹೇಳಿದರು.

ಗದಗ ಬೆಟಗೇರಿ ನಗರಸಭೆ ಅಧ್ಯಕ್ಷೆ ಉಷಾ ದಾಸರ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿ ಮಾತನಾಡಿ, “ಈ ರಸ್ತೆಗೆ ಸಿ ಎಸ್‌ ಮುತ್ತಿನಪೆಂಡಿಮಠ ಹೆರಸರಿಡಲು ನಗರಸಭೆಯಲ್ಲಿ ಸರ್ವಾನುಮತದಿಂದ ಒಪ್ಪಿ, ಅಂಗೀಕರಿಸಲಾಗಿದೆ. ಅವರು ಎರಡು ಬಾರಿ ಶಾಸಕರಾಗಿ ಉತ್ತಮ ಕಾರ್ಯಗಳ‌ ಮೂಲಕ ಗಮನ ಸೆಳೆದಿದ್ದಾರೆ. ಅವರ ಕಾರ್ಯಗಳ‌ ಮೂಲಕ ಜನಸಾಮಾನ್ಯರಲ್ಲಿ ಇಂದಿಗೂ ಅವರು ಅಜರಾಮರರಾಗಿದ್ದಾರೆ” ಎಂದರು.

ತೋಂಟದಾರ್ಯ ಮಠದ ಸಿದ್ಧರಾಮ ಶ್ರೀಗಳು ಸಾನಿಧ್ಯ ವಹಿಸಿ, ಆಶೀರ್ವಚನ ನೀಡುತ್ತಾ, “ಜನಸೇವೆ, ನ್ಯಾಯವಾದಿಗಳಾಗಿ ಮಾಡಿದ ಅವರ ಸೇವೆ ಅಗಾಧವಾದದು. ನಾಡನ್ನು ಸಮೃದ್ಧವಾಗಿ ಕಟ್ಟಲು ಮುತ್ತಿನಪೆಂಡಿಮಠ ಅಂತಹವರು ಮತ್ತೆ ಮತ್ತೆ ಹುಟ್ಟಿ ಬರಬೇಕು. ಸಾರ್ವಜನಿಕರ ಸೇವೆಯಲ್ಲಿ ಕೆಲಸ ಮಾಡುವಾಗ ಅನೇಕ ವಿರೋಧ ಕಟ್ಟಿಕೊಳ್ಳಬೇಕಾಗುತ್ತದೆ. ನ್ಯಾಯನಿಷ್ಠುರಿಯಾಗಿ ತಮ್ಮ ಕೆಲಸ ನಿರಂತರವಾಗಿ ಮಾಡುತ್ತಾ ಮುಂದೆ ಸಾಗಿದರು. ಅದಕ್ಕಾಗಿಯೇ ಅವರು ಇಂದಿಗೂ ಜನಮಾನಸದಲ್ಲಿ ಇದ್ದಾರೆ. ವ್ಯಕ್ತಿ ವಿಕಾಸಕ್ಕೆ ಅಸ್ಥಿತ್ವಕ್ಕೆ ಸಮಾಜ ಅಗತ್ಯ. ಅಂತಹ ಸಮಾಜದ ಏಳ್ಗೆಗೆ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ವ್ಯಕ್ತಿಯಾಗಿದ್ದವರು ಸಿ ಎಸ್‌ ಮುತ್ತಿನಪೆಂಡಿಮಠ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಲೋಕಸಭಾ ಚುನಾವಣೆ | ನೇರ ಹಣಾಹಣಿ ಇರುವ ದಕ್ಷಿಣ ಕನ್ನಡದಲ್ಲಿ ಈ ಬಾರಿ ಯಾರಿಗೆ ಸಿಗಲಿದೆ ಟಿಕೆಟ್?

ಕಾರ್ಯಕ್ರಮದಲ್ಲಿ ಸದಸ್ಯರಾದ ಎಲ್ ಡಿ ಚಂದಾವರಿ, ಪದ್ಮಾ ಕಟಗಿ, ಅನಿಲ್ ಅಬ್ಬಿಗೇರಿ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಂ‌ ಐ ಹಿರೇಮನಿ ಪಾಟಿಲ್, ಡಾ. ಎಂ‌ ಬಿ ಪಾಟಿಲ್, ವಿಶ್ವನಾಥ ಪಾಟಿಲ್, ಪ್ರತಿ‌ಷ್ಠಾನದ ಅಧ್ಯಕ್ಷ ವಸಂತ ಮೇಟಿ ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X